ತಮ್ಮ ಬೇಡಿಕೆಯ ಬಗ್ಗೆ ಸರ್ಕಾರದ ಗಮನವನ್ನು ಸೆಳೆಯುವ ಸಲುವಾಗಿ ಸಂಸತ್ತಿನ ಚಳಿಗಾಲದ ಅಧಿವೇಶನದ ಮೊದಲ ದಿನ ಅವರು ಸಂಸತ್ತಿಗೆ ಮುತ್ತಿಗೆ ಹಾಕಲು ಬಯಸಿದ್ದರು. ಆದರೆ ಅವರನ್ನು ಸಂಸತ್ತಿನಿಂದ ಅರ್ಧ ಕಿ.ಮೀ. ದೂರದಲ್ಲಿ ಪೊಲೀಸರು ತಡೆದರು.
ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಅನೇಕ ವಿದ್ಯಾರ್ಥಿ ನಾಯಕರನ್ನು ಪೊಲೀಸರು ಬಂಧಿಸಿದರು.