ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಅದಕ್ಕೆ ಪ್ರತಿಕ್ರಿಯಿಸಿದ ಮೋದಿ, ‘40–50 ವರ್ಷಗಳಿಂದ ಸಕ್ರಿಯರಾಗಿರುವ ಹಿರಿಯ ನಾಯಕರೊಬ್ಬರು ಬಾರಾಮತಿ ಕ್ಷೇತ್ರದಲ್ಲಿ ಮತದಾನದ ಬಳಿಕ ಚಿಂತೆಗೊಳಗಾಗಿದ್ದು, ಜೂನ್ ನಾಲ್ಕರ ನಂತರ ಸಣ್ಣ ಪಕ್ಷಗಳು ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಕಾಂಗ್ರೆಸ್ ಜತೆ ವಿಲೀನಗೊಳ್ಳಲಿವೆ ಎಂದಿದ್ದಾರೆ. ಅದರ ಅರ್ಥ ನಕಲಿ ಎನ್ಸಿಪಿ ಮತ್ತು ಶಿವಸೇನಾ ಪಕ್ಷಗಳು ಕಾಂಗ್ರೆಸ್ನೊಂದಿಗೆ ವಿಲೀನಗೊಳ್ಳಲು ನಿರ್ಧರಿಸಿವೆ’ ಎಂದು ಹೇಳಿದರು.