<p><strong>ನವದೆಹಲಿ</strong>: ಕನಿಷ್ಠ 30 ದಿನ ಜೈಲಿನಲ್ಲಿ ಬಂಧಿಯಾಗುವ ಉನ್ನತ ರಾಜಕೀಯ ಮುಖಂಡರನ್ನು ತೆಗೆದುಹಾಕುವ ವಿವಾದಾತ್ಮಕ ಮಸೂದೆಗಳನ್ನು ಪರಿಶೀಲಿಸಲು ಸಂಸತ್ತಿನ ಜಂಟಿ ಸಮಿತಿಯನ್ನು ರಚಿಸಲಾಗಿದೆ. </p><p>ಸಮಿತಿ ರಚನೆಗೆ ಸಂಬಂಧಿಸಿದಂತೆ, ಸಂಸದರ ಸಮಿತಿಯ ಪರಿಶೀಲನೆಗೆ ಕಳುಹಿಸುವ ನಿರ್ಣಯವನ್ನು ಸಂಸತ್ತು ಅಂಗೀಕರಿಸಿ 84 ದಿನಗಳು ಕಳೆದಿವೆ. ಆದರೆ, ಎನ್ಸಿಪಿ(ಎಸ್ಪಿ) ಹೊರತುಪಡಿಸಿ ಇಂಡಿಯಾ ಮೈತ್ರಿಕೂಟವು ಯಾವುದೇ ಸಂಸದರನ್ನು ಈ ಸಮಿತಿಗೆ ನಾಮನಿರ್ದೇಶನ ಮಾಡಲು ನಿರಾಕರಿಸಿದ್ದರಿಂದ ಸಮಿತಿ ರಚನೆ ಕಾರ್ಯ ಬಾಕಿ ಉಳಿದಿತ್ತು. </p><p>ಬಿಜೆಪಿಯ ಅಪರಾಜಿತಾ ಸಾರಂಗಿ ಅಧ್ಯಕ್ಷತೆಯಲ್ಲಿ 31 ಸದಸ್ಯರ ಸಮಿತಿ ರಚಿಸಲಾಗಿದೆ. ಸಮಿತಿಯಲ್ಲಿ ಬಿಜೆಪಿಯ 15 ಮಂದಿ ಸೇರಿ ಎನ್ಡಿಎನ 26 ಸಂಸದರು, ವಿರೋಧ ಪಕ್ಷಗಳ ನಾಲ್ವರು ಸದಸ್ಯರಿದ್ದಾರೆ. ಕರ್ನಾಟಕದಿಂದ ಸುಧಾಮೂರ್ತಿ ಈ ಸಮಿತಿಗೆ ನಾಮನಿರ್ದೇಶಿತ ಸದಸ್ಯರಾಗಿದ್ದಾರೆ. ಜೆಡಿಎಸ್ ಸಂಸದ ಎಂ. ಮಲ್ಲೇಶಬಾಬು ಸಹ ಈ ಸಮಿತಿ ಸದಸ್ಯರು.</p><p>ಸುಪ್ರಿಯಾ ಸುಳೆ (ಎನ್ಸಿಪಿ –ಎಸ್ಪಿ), ಅಕಾಲಿ ದಳದ ಹರ್ಸಿಮ್ರತ್ ಕೌರ್, ವೈಎಸ್ಆರ್ ಕಾಂಗ್ರೆಸ್ನ ಎಸ್. ನಿರಂಜನ ರೆಡ್ಡಿ ಮತ್ತು ಎಐಎಂಐಎಂನ ಅಸಾದುದ್ದೀನ್ ಓವೈಸಿಈ ಸಮಿತಿಯಲ್ಲಿರುವ ವಿರೋಧ ಪಕ್ಷಗಳ ಸಂಸದರು. ಬಿಜೆಡಿ ಮತ್ತು ಬಿಆರ್ಎಸ್ನ ಸಂಸದರು ಈ ಸಮಿತಿಯಲ್ಲಿ ಇಲ್ಲ. </p><p>ಸಮಿತಿಯಲ್ಲಿ ಲೋಕಸಭೆಯ 21, ರಾಜ್ಯಸಭೆಯ 10 ಸದಸ್ಯರು ಇದ್ದಾರೆ. ಮುಂದಿನ ಚಳಿಗಾಲದ ಅಧಿವೇಶನದ ಮೊದಲ ವಾರದ ಕೊನೆಯ ದಿನ ಸಮಿತಿ ವರದಿ ಸಲ್ಲಿಸಲಿದೆ. ಆದರೂ, ವರದಿ ಸಲ್ಲಿಸಲು ನಿಗದಿಪಡಿಸಿರುವ ಗಡುವು ವಿಸ್ತರಣೆಯಾಗುವ ಸಾಧ್ಯತೆಗಳಿವೆ ಇದೆ ಎಂದು ಮೂಲಗಳು ತಿಳಿಸಿವೆ. </p><p>ಇಂಡಿಯಾ ಮೈತ್ರಿಕೂಟ, ತೃಣಮೂಲ ಕಾಂಗ್ರೆಸ್, ಎಎಪಿ, ಸಮಾಜವಾದಿ ಪಾರ್ಟಿ ಮತ್ತು ಶಿವಸೇನಾ (ಯುಬಿಟಿ) ಈ ಸಮಿತಿಯನ್ನು ಬಹಿಷ್ಕರಿಸುವುದಾಗಿ ಹೇಳಿವೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕನಿಷ್ಠ 30 ದಿನ ಜೈಲಿನಲ್ಲಿ ಬಂಧಿಯಾಗುವ ಉನ್ನತ ರಾಜಕೀಯ ಮುಖಂಡರನ್ನು ತೆಗೆದುಹಾಕುವ ವಿವಾದಾತ್ಮಕ ಮಸೂದೆಗಳನ್ನು ಪರಿಶೀಲಿಸಲು ಸಂಸತ್ತಿನ ಜಂಟಿ ಸಮಿತಿಯನ್ನು ರಚಿಸಲಾಗಿದೆ. </p><p>ಸಮಿತಿ ರಚನೆಗೆ ಸಂಬಂಧಿಸಿದಂತೆ, ಸಂಸದರ ಸಮಿತಿಯ ಪರಿಶೀಲನೆಗೆ ಕಳುಹಿಸುವ ನಿರ್ಣಯವನ್ನು ಸಂಸತ್ತು ಅಂಗೀಕರಿಸಿ 84 ದಿನಗಳು ಕಳೆದಿವೆ. ಆದರೆ, ಎನ್ಸಿಪಿ(ಎಸ್ಪಿ) ಹೊರತುಪಡಿಸಿ ಇಂಡಿಯಾ ಮೈತ್ರಿಕೂಟವು ಯಾವುದೇ ಸಂಸದರನ್ನು ಈ ಸಮಿತಿಗೆ ನಾಮನಿರ್ದೇಶನ ಮಾಡಲು ನಿರಾಕರಿಸಿದ್ದರಿಂದ ಸಮಿತಿ ರಚನೆ ಕಾರ್ಯ ಬಾಕಿ ಉಳಿದಿತ್ತು. </p><p>ಬಿಜೆಪಿಯ ಅಪರಾಜಿತಾ ಸಾರಂಗಿ ಅಧ್ಯಕ್ಷತೆಯಲ್ಲಿ 31 ಸದಸ್ಯರ ಸಮಿತಿ ರಚಿಸಲಾಗಿದೆ. ಸಮಿತಿಯಲ್ಲಿ ಬಿಜೆಪಿಯ 15 ಮಂದಿ ಸೇರಿ ಎನ್ಡಿಎನ 26 ಸಂಸದರು, ವಿರೋಧ ಪಕ್ಷಗಳ ನಾಲ್ವರು ಸದಸ್ಯರಿದ್ದಾರೆ. ಕರ್ನಾಟಕದಿಂದ ಸುಧಾಮೂರ್ತಿ ಈ ಸಮಿತಿಗೆ ನಾಮನಿರ್ದೇಶಿತ ಸದಸ್ಯರಾಗಿದ್ದಾರೆ. ಜೆಡಿಎಸ್ ಸಂಸದ ಎಂ. ಮಲ್ಲೇಶಬಾಬು ಸಹ ಈ ಸಮಿತಿ ಸದಸ್ಯರು.</p><p>ಸುಪ್ರಿಯಾ ಸುಳೆ (ಎನ್ಸಿಪಿ –ಎಸ್ಪಿ), ಅಕಾಲಿ ದಳದ ಹರ್ಸಿಮ್ರತ್ ಕೌರ್, ವೈಎಸ್ಆರ್ ಕಾಂಗ್ರೆಸ್ನ ಎಸ್. ನಿರಂಜನ ರೆಡ್ಡಿ ಮತ್ತು ಎಐಎಂಐಎಂನ ಅಸಾದುದ್ದೀನ್ ಓವೈಸಿಈ ಸಮಿತಿಯಲ್ಲಿರುವ ವಿರೋಧ ಪಕ್ಷಗಳ ಸಂಸದರು. ಬಿಜೆಡಿ ಮತ್ತು ಬಿಆರ್ಎಸ್ನ ಸಂಸದರು ಈ ಸಮಿತಿಯಲ್ಲಿ ಇಲ್ಲ. </p><p>ಸಮಿತಿಯಲ್ಲಿ ಲೋಕಸಭೆಯ 21, ರಾಜ್ಯಸಭೆಯ 10 ಸದಸ್ಯರು ಇದ್ದಾರೆ. ಮುಂದಿನ ಚಳಿಗಾಲದ ಅಧಿವೇಶನದ ಮೊದಲ ವಾರದ ಕೊನೆಯ ದಿನ ಸಮಿತಿ ವರದಿ ಸಲ್ಲಿಸಲಿದೆ. ಆದರೂ, ವರದಿ ಸಲ್ಲಿಸಲು ನಿಗದಿಪಡಿಸಿರುವ ಗಡುವು ವಿಸ್ತರಣೆಯಾಗುವ ಸಾಧ್ಯತೆಗಳಿವೆ ಇದೆ ಎಂದು ಮೂಲಗಳು ತಿಳಿಸಿವೆ. </p><p>ಇಂಡಿಯಾ ಮೈತ್ರಿಕೂಟ, ತೃಣಮೂಲ ಕಾಂಗ್ರೆಸ್, ಎಎಪಿ, ಸಮಾಜವಾದಿ ಪಾರ್ಟಿ ಮತ್ತು ಶಿವಸೇನಾ (ಯುಬಿಟಿ) ಈ ಸಮಿತಿಯನ್ನು ಬಹಿಷ್ಕರಿಸುವುದಾಗಿ ಹೇಳಿವೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>