<p><strong>ಚೆನ್ನೈ</strong>: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ರಾಜ್ಯಕ್ಕೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚಿಸಲು ಇಂದು (ಬುಧವಾರ) ಪ್ರಧಾನಿ ನರೇಂದ್ರ ಮೋದಿ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಲಿದ್ದಾರೆ.</p><p>ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ರಾಷ್ಟ್ರ ರಾಜಧಾನಿಗೆ ವಿಜಯ್ ಅವರ ಮೊದಲ ಅಧಿಕೃತ ಭೇಟಿ ಇದಾಗಿದೆ.</p><p>ವಿಜಯ್ ಅವರ ಭೇಟಿಯ ಕುರಿತು ಅಧಿಕೃತ ವೇಳಾಪಟ್ಟಿ ಬಿಡುಗಡೆಯಾಗದಿದ್ದರೂ, ಮುಖ್ಯಮಂತ್ರಿ ಅವರು ಬೆಳಿಗ್ಗೆ 10 ಗಂಟೆಗೆ ಚೆನ್ನೈ ವಿಮಾನ ನಿಲ್ದಾಣದಿಂದ ದೆಹಲಿಗೆ ಹೊರಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.</p><p>ಪ್ರಧಾನಿ ಮೋದಿ ಅವರೊಂದಿಗಿನ ಭೇಟಿಯು ಸಂಜೆ 4.30 ಕ್ಕೆ ನಿಗದಿಯಾಗಿದ್ದು, ಈ ಸಂದರ್ಭದಲ್ಲಿ ವಿಜಯ್ ಅವರು ರಾಜ್ಯದ ದೀರ್ಘಕಾಲದ ಬೇಡಿಕೆಗಳನ್ನು ಒಳಗೊಂಡ ಜ್ಞಾಪನಾ ಪತ್ರವನ್ನು ಸಲ್ಲಿಸಲಿದ್ದಾರೆ.</p><p>ಬೇಡಿಕೆಗಳ ಪಟ್ಟಿಯಲ್ಲಿ ಕಲ್ಯಾಣ ಮತ್ತು ಮೂಲಸೌಕರ್ಯ ಯೋಜನೆಗಳಿಗೆ ಧನಸಹಾಯ, ಅಭಿವೃದ್ಧಿ ಉಪಕ್ರಮಗಳಿಗೆ ಅನುಮತಿ ಮತ್ತು ಮೇಕೆದಾಟು ನೀರಿನ ವಿವಾದಕ್ಕೆ ಪರಿಹಾರ ಸೂಚಿಸುವಂತೆ ಒತ್ತಾಯಿಸುವ ಸಾಧ್ಯತೆಯಿದೆ.</p><p>ರಾಜ್ಯದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಯೋಜನೆಗಳಿಗೆ ಆರ್ಥಿಕ ನೆರವು ಕೋರಲು ವಿಜಯ್ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರೊಂದಿಗೂ ಚರ್ಚೆ ನಡೆಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.</p><p>ಅದೇ ರೀತಿ, ತಮ್ಮ ಭೇಟಿಯ ಸಂದರ್ಭದಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನೂ ಭೇಟಿಯಾಗುವ ನಿರೀಕ್ಷೆಯಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ</strong>: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ರಾಜ್ಯಕ್ಕೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚಿಸಲು ಇಂದು (ಬುಧವಾರ) ಪ್ರಧಾನಿ ನರೇಂದ್ರ ಮೋದಿ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಲಿದ್ದಾರೆ.</p><p>ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ರಾಷ್ಟ್ರ ರಾಜಧಾನಿಗೆ ವಿಜಯ್ ಅವರ ಮೊದಲ ಅಧಿಕೃತ ಭೇಟಿ ಇದಾಗಿದೆ.</p><p>ವಿಜಯ್ ಅವರ ಭೇಟಿಯ ಕುರಿತು ಅಧಿಕೃತ ವೇಳಾಪಟ್ಟಿ ಬಿಡುಗಡೆಯಾಗದಿದ್ದರೂ, ಮುಖ್ಯಮಂತ್ರಿ ಅವರು ಬೆಳಿಗ್ಗೆ 10 ಗಂಟೆಗೆ ಚೆನ್ನೈ ವಿಮಾನ ನಿಲ್ದಾಣದಿಂದ ದೆಹಲಿಗೆ ಹೊರಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.</p><p>ಪ್ರಧಾನಿ ಮೋದಿ ಅವರೊಂದಿಗಿನ ಭೇಟಿಯು ಸಂಜೆ 4.30 ಕ್ಕೆ ನಿಗದಿಯಾಗಿದ್ದು, ಈ ಸಂದರ್ಭದಲ್ಲಿ ವಿಜಯ್ ಅವರು ರಾಜ್ಯದ ದೀರ್ಘಕಾಲದ ಬೇಡಿಕೆಗಳನ್ನು ಒಳಗೊಂಡ ಜ್ಞಾಪನಾ ಪತ್ರವನ್ನು ಸಲ್ಲಿಸಲಿದ್ದಾರೆ.</p><p>ಬೇಡಿಕೆಗಳ ಪಟ್ಟಿಯಲ್ಲಿ ಕಲ್ಯಾಣ ಮತ್ತು ಮೂಲಸೌಕರ್ಯ ಯೋಜನೆಗಳಿಗೆ ಧನಸಹಾಯ, ಅಭಿವೃದ್ಧಿ ಉಪಕ್ರಮಗಳಿಗೆ ಅನುಮತಿ ಮತ್ತು ಮೇಕೆದಾಟು ನೀರಿನ ವಿವಾದಕ್ಕೆ ಪರಿಹಾರ ಸೂಚಿಸುವಂತೆ ಒತ್ತಾಯಿಸುವ ಸಾಧ್ಯತೆಯಿದೆ.</p><p>ರಾಜ್ಯದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಯೋಜನೆಗಳಿಗೆ ಆರ್ಥಿಕ ನೆರವು ಕೋರಲು ವಿಜಯ್ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರೊಂದಿಗೂ ಚರ್ಚೆ ನಡೆಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.</p><p>ಅದೇ ರೀತಿ, ತಮ್ಮ ಭೇಟಿಯ ಸಂದರ್ಭದಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನೂ ಭೇಟಿಯಾಗುವ ನಿರೀಕ್ಷೆಯಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>