ಈ ಕುರಿತು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರಿಗೆ ಪತ್ರ ಬರೆದಿರುವ ಜೆಬಿಎಸ್ಎಸ್ ಸಂಚಾಲಕ ಅತುಲ್ ಸತಿ ಅವರು, ‘ಭೂ ಕುಸಿತದಿಂದ ಸಂತ್ರಸ್ತರಾಗಿರುವ ಜನರಿಗೆ ಸೂಕ್ತ ಪರಿಹಾರ ಹಾಗೂ ಪುನರ್ವಸತಿಯನ್ನು ಕಲ್ಪಿಸಬೇಕು. ಇವೆಲ್ಲ ಬೇಡಿಕೆಗಳನ್ನು ಏಪ್ರಿಲ್ 27ರೊಳಗೆ ಈಡೇರಿಸದಿದ್ದರೆ ಜನರನ್ನು ರಸ್ತೆಗಿಳಿದು ಪ್ರತಿಭಟಿಸುವಂತೆ ಒತ್ತಾಯಿಸಲಾಗುವುದು’ ಎಂದು ತಿಳಿಸಿದ್ದಾರೆ.