ಚಂಪತ್ ರಾಯ್ ಅವರ ಸಹೋದರ ಎಂದು ಹೇಳಲಾದ ಬಿಜ್ನೋರ್ ನಿವಾಸಿ ಸಂಜಯ್ ಬನ್ಸಾಲ್ ಅವರ ದೂರಿನ ಮೇರೆಗೆ ಮೂವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ನಾಗಿನಾ ಪೊಲೀಸ್ ಠಾಣೆ ಅಧಿಕಾರಿ ಕೃಷ್ಣ ಮುರಾರಿ ದೋಹ್ರೆ ಹೇಳಿದ್ದಾರೆ. ಎಫ್ಐಆರ್ನಲ್ಲಿ ಪತ್ರಕರ್ತ ವಿನೀತ್ ನರೈನ್, ಅಲ್ಕಾ ಲಾಹೋತಿ ಮತ್ತು ರಜನೀಶ್ ಎಂಬ ಮೂವರ ಹೆಸರನ್ನು ಉಲ್ಲೇಖಿಸಲಾಗಿದೆ ಎಂದು ಬಿಜ್ನೋರ್ ಪೊಲೀಸ್ ವರಿಷ್ಠಾಧಿಕಾರಿ ಧರ್ಮವೀರ್ ಸಿಂಗ್ ಹೇಳಿದ್ದಾರೆ. ಈ ಕುರಿತು ‘ಡೆಕ್ಕನ್ ಹೆರಾಲ್ಡ್’ ವರದಿ ಮಾಡಿದೆ.