<p><strong>ಗುವಾಹಟಿ</strong>: ಧೇಮಾಜಿ ಜಿಲ್ಲೆಯಲ್ಲಿ ಪಂಚಾಯತ್ ಚುನಾವಣೆಯ ವರದಿ ಮಾಡುತ್ತಿದ್ದಾಗ ಗುಂಪೊಂದು ಪತ್ರಕರ್ತರೊಬ್ಬರ ಮೇಲೆ ದಾಳಿ ನಡೆಸಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿರುವ ಅವರು ದಿಬ್ರುಗಢದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ಅಸ್ಸಾಮಿ ಸುದ್ದಿ ಮಾಧ್ಯಮದಲ್ಲಿ ಪತ್ರಕರ್ತರಾಗಿರುವ ಮಧುರ್ಜ್ಯ ಸೈಕಿಯಾ ಗಾಯಗೊಂಡವರು. ಶುಕ್ರವಾರ ದಿಮೋವ್ ಪಠಾರ್ನಲ್ಲಿ ವರದಿ ಮಾಡುತ್ತಿದ್ದಾಗ ಸುಮಾರು 25 ಜನರ ಗುಂಪು ದೊಣ್ಣೆಗಳಿಂದ ದಾಳಿ ನಡೆಸಿತ್ತು ಎಂದು ಅವರು ಹೇಳಿದ್ದಾರೆ. ಸ್ಥಳೀಯ ಸಂಘಟನೆಗಳ ನಾಯಕರು ಈ ದಾಳಿಯ ಹಿಂದೆ ಇದ್ದಾರೆ ಎಂದು ಅವರು ದೂರಿನಲ್ಲಿ ಆರೋಪಿಸಿದ್ದಾರೆ.</p>.<p>ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಾಂತ ಬಿಸ್ವಾ ಶರ್ಮಾ, ‘ತಪ್ಪಿತಸ್ಥರನ್ನು ಪತ್ತೆ ಹಚ್ಚಿ ಬಂಧಿಸುವುದು ಪೊಲೀಸರ ಕರ್ತವ್ಯ’ ಎಂದು ಹೇಳಿದ್ದಾರೆ.</p>.<p>ಕಳೆದ ವಾರದೊಳಗೆ ರಾಜ್ಯದ ಪತ್ರಕರ್ತರ ಮೇಲೆ ನಡೆದ ಎರಡನೇ ದಾಳಿ ಇದಾಗಿದೆ. ಜೂನ್ 29 ರಂದು ಧೇಕಿಯಾಜುಲಿಯಲ್ಲಿ ಸ್ಥಳೀಯ ಟಿವಿ ಪತ್ರಕರ್ತೆ ಬಿಮಲ್ಜ್ಯೂತಿ ನಾಥ್ ಮತ್ತು ಅವರ ಸಹೋದ್ಯೋಗಿಯ ಮೇಲೆ ಹಲ್ಲೆ ನಡೆಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುವಾಹಟಿ</strong>: ಧೇಮಾಜಿ ಜಿಲ್ಲೆಯಲ್ಲಿ ಪಂಚಾಯತ್ ಚುನಾವಣೆಯ ವರದಿ ಮಾಡುತ್ತಿದ್ದಾಗ ಗುಂಪೊಂದು ಪತ್ರಕರ್ತರೊಬ್ಬರ ಮೇಲೆ ದಾಳಿ ನಡೆಸಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿರುವ ಅವರು ದಿಬ್ರುಗಢದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ಅಸ್ಸಾಮಿ ಸುದ್ದಿ ಮಾಧ್ಯಮದಲ್ಲಿ ಪತ್ರಕರ್ತರಾಗಿರುವ ಮಧುರ್ಜ್ಯ ಸೈಕಿಯಾ ಗಾಯಗೊಂಡವರು. ಶುಕ್ರವಾರ ದಿಮೋವ್ ಪಠಾರ್ನಲ್ಲಿ ವರದಿ ಮಾಡುತ್ತಿದ್ದಾಗ ಸುಮಾರು 25 ಜನರ ಗುಂಪು ದೊಣ್ಣೆಗಳಿಂದ ದಾಳಿ ನಡೆಸಿತ್ತು ಎಂದು ಅವರು ಹೇಳಿದ್ದಾರೆ. ಸ್ಥಳೀಯ ಸಂಘಟನೆಗಳ ನಾಯಕರು ಈ ದಾಳಿಯ ಹಿಂದೆ ಇದ್ದಾರೆ ಎಂದು ಅವರು ದೂರಿನಲ್ಲಿ ಆರೋಪಿಸಿದ್ದಾರೆ.</p>.<p>ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಾಂತ ಬಿಸ್ವಾ ಶರ್ಮಾ, ‘ತಪ್ಪಿತಸ್ಥರನ್ನು ಪತ್ತೆ ಹಚ್ಚಿ ಬಂಧಿಸುವುದು ಪೊಲೀಸರ ಕರ್ತವ್ಯ’ ಎಂದು ಹೇಳಿದ್ದಾರೆ.</p>.<p>ಕಳೆದ ವಾರದೊಳಗೆ ರಾಜ್ಯದ ಪತ್ರಕರ್ತರ ಮೇಲೆ ನಡೆದ ಎರಡನೇ ದಾಳಿ ಇದಾಗಿದೆ. ಜೂನ್ 29 ರಂದು ಧೇಕಿಯಾಜುಲಿಯಲ್ಲಿ ಸ್ಥಳೀಯ ಟಿವಿ ಪತ್ರಕರ್ತೆ ಬಿಮಲ್ಜ್ಯೂತಿ ನಾಥ್ ಮತ್ತು ಅವರ ಸಹೋದ್ಯೋಗಿಯ ಮೇಲೆ ಹಲ್ಲೆ ನಡೆಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>