<p class="title"><strong>ಚಂಡೀಗಡ</strong>: ‘ಪ್ರಯಾಣ ಈಗಷ್ಟೇ ಆರಂಭವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಕುಟುಂಬದ ಪ್ರತಿಯೊಬ್ಬರ ಜೊತೆಗೂಡಿ ಕಾರ್ಯನಿರ್ವಹಿಸುತ್ತೇನೆ’ ಎಂದು ಪಂಜಾಬ್ ರಾಜ್ಯ ಘಟಕದ ಕಾಂಗ್ರೆಸ್ ನೂತನ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಹೇಳಿದರು.</p>.<p class="title">ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರ ತಕರಾರಿನ ನಡುವೆಯೂ ಕಾಂಗ್ರೆಸ್ ಹೈಕಮಾಂಡ್ ರಾಜ್ಯ ಕಾಂಗ್ರೆಸ್ ಸಾರಥಿಯಾಗಿ ಸಿಧು ಅವರನ್ನು ನೇಮಿಸಿದೆ. ಹಾಲಿ ಅಧ್ಯಕ್ಷ ಸುನಿಲ್ ಜಾಖರ್ ಸ್ಥಾನದಲ್ಲಿ ಸಿಧು ಅಧಿಕಾರ ವಹಿಸಿಕೊಂಡಿದ್ದಾರೆ.</p>.<p class="title">‘ಅಧ್ಯಕ್ಷರಾಗಿ ತಮ್ಮನ್ನು ನೇಮಿಸಿದ್ದಕ್ಕೆ ಹೈಕಮಾಂಡ್ಗೆ ಕೃತಜ್ಞತೆ ಸಲ್ಲಿಸಿದ ಅವರು, ‘ಜಿತೇಗಾ ಪಂಜಾಬ್’ ಗುರಿ ಸಾಧಿಸಲು ಪಕ್ಷದ ಎಲ್ಲರ ಜೊತೆಗೂಡಿ ಕಾರ್ಯನಿರ್ವಹಿಸಲಿದ್ದು, ಪಕ್ಷವನ್ನು ಬಲಪಡಿಸಲಾಗುವುದು’ಎಂದು ಭರವಸೆ ನೀಡಿದರು.</p>.<p class="title">ಈ ಕುರಿತಂತೆ ಟ್ವೀಟ್ ಮಾಡಿರುವ ಸಿಧು, ಭಾರತದ ಮೊದಲ ಪ್ರಧಾನಿ ಜವಹರಲಾಲ್ ನೆಹರೂ ಅವರ ಜೊತೆಗೆ ತಮ್ಮ ತಂದೆ ಇರುವ ಚಿತ್ರವನ್ನು ಹಂಚಿಕೊಂಡಿದ್ದಾರೆ.</p>.<p>‘ಅಭ್ಯುದಯ, ಹಕ್ಕು ಮತ್ತು ಸ್ವಾತಂತ್ರ್ಯವನ್ನು ಎಲ್ಲರೊಂದಿಗೆ ಹಂಚಿಕೆ ಮಾಡಿಕೊಳ್ಳಬೇಕು. ನನ್ನ ತಂದೆಯೂ ಕಾಂಗ್ರೆಸ್ ಕಾರ್ಯಕರ್ತರಾಗಿದ್ದು, ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿದ್ದರು’ ಎಂದು ಸಿಧು ಟ್ವೀಟ್ನಲ್ಲಿ ಸ್ಮರಿಸಿದ್ದಾರೆ. ಸಿಧು ನೇಮಕದ ಹಿಂದೆಯೇ ಅಮೃತಸರ, ಪಟಿಯಾಲದಲ್ಲಿ ಬೆಂಬಲಿಗರು ದೊಡ್ಡ ಪ್ರಮಾಣದಲ್ಲಿ ಸಂಭ್ರಮದಲ್ಲಿ ಭಾಗಿಯಾಗಿದ್ದರು.</p>.<p><strong>ನಾಲ್ವರು ಕಾರ್ಯಾಧ್ಯಕ್ಷರು:</strong> ಪಂಜಾಬ್ನಲ್ಲಿ ಮುಂದಿನ ವರ್ಷ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಸಿಧು ಅವರೊಂದಿಗೆ ನಾಲ್ವರು ಕಾರ್ಯಾಧ್ಯಕ್ಷರನ್ನು ಹೈಕಮಾಂಡ್ ನೇಮಕ ಮಾಡಿದೆ.</p>.<p>ಸಿಧು ಅವರು ಸಾರ್ವತ್ರಿಕ ಚುನಾವಣೆಯಲ್ಲಿ ಹೊಸ ಉತ್ಸಾಹದೊಂದಿಗೆ ಪಕ್ಷವನ್ನು ಗೆಲುವಿನತ್ತ ಮುನ್ನಡೆಸಬಹುದು ಎಂಬುದು ಹೈಕಮಾಂಡ್ನ ಆಶಯವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಚಂಡೀಗಡ</strong>: ‘ಪ್ರಯಾಣ ಈಗಷ್ಟೇ ಆರಂಭವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಕುಟುಂಬದ ಪ್ರತಿಯೊಬ್ಬರ ಜೊತೆಗೂಡಿ ಕಾರ್ಯನಿರ್ವಹಿಸುತ್ತೇನೆ’ ಎಂದು ಪಂಜಾಬ್ ರಾಜ್ಯ ಘಟಕದ ಕಾಂಗ್ರೆಸ್ ನೂತನ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಹೇಳಿದರು.</p>.<p class="title">ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರ ತಕರಾರಿನ ನಡುವೆಯೂ ಕಾಂಗ್ರೆಸ್ ಹೈಕಮಾಂಡ್ ರಾಜ್ಯ ಕಾಂಗ್ರೆಸ್ ಸಾರಥಿಯಾಗಿ ಸಿಧು ಅವರನ್ನು ನೇಮಿಸಿದೆ. ಹಾಲಿ ಅಧ್ಯಕ್ಷ ಸುನಿಲ್ ಜಾಖರ್ ಸ್ಥಾನದಲ್ಲಿ ಸಿಧು ಅಧಿಕಾರ ವಹಿಸಿಕೊಂಡಿದ್ದಾರೆ.</p>.<p class="title">‘ಅಧ್ಯಕ್ಷರಾಗಿ ತಮ್ಮನ್ನು ನೇಮಿಸಿದ್ದಕ್ಕೆ ಹೈಕಮಾಂಡ್ಗೆ ಕೃತಜ್ಞತೆ ಸಲ್ಲಿಸಿದ ಅವರು, ‘ಜಿತೇಗಾ ಪಂಜಾಬ್’ ಗುರಿ ಸಾಧಿಸಲು ಪಕ್ಷದ ಎಲ್ಲರ ಜೊತೆಗೂಡಿ ಕಾರ್ಯನಿರ್ವಹಿಸಲಿದ್ದು, ಪಕ್ಷವನ್ನು ಬಲಪಡಿಸಲಾಗುವುದು’ಎಂದು ಭರವಸೆ ನೀಡಿದರು.</p>.<p class="title">ಈ ಕುರಿತಂತೆ ಟ್ವೀಟ್ ಮಾಡಿರುವ ಸಿಧು, ಭಾರತದ ಮೊದಲ ಪ್ರಧಾನಿ ಜವಹರಲಾಲ್ ನೆಹರೂ ಅವರ ಜೊತೆಗೆ ತಮ್ಮ ತಂದೆ ಇರುವ ಚಿತ್ರವನ್ನು ಹಂಚಿಕೊಂಡಿದ್ದಾರೆ.</p>.<p>‘ಅಭ್ಯುದಯ, ಹಕ್ಕು ಮತ್ತು ಸ್ವಾತಂತ್ರ್ಯವನ್ನು ಎಲ್ಲರೊಂದಿಗೆ ಹಂಚಿಕೆ ಮಾಡಿಕೊಳ್ಳಬೇಕು. ನನ್ನ ತಂದೆಯೂ ಕಾಂಗ್ರೆಸ್ ಕಾರ್ಯಕರ್ತರಾಗಿದ್ದು, ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿದ್ದರು’ ಎಂದು ಸಿಧು ಟ್ವೀಟ್ನಲ್ಲಿ ಸ್ಮರಿಸಿದ್ದಾರೆ. ಸಿಧು ನೇಮಕದ ಹಿಂದೆಯೇ ಅಮೃತಸರ, ಪಟಿಯಾಲದಲ್ಲಿ ಬೆಂಬಲಿಗರು ದೊಡ್ಡ ಪ್ರಮಾಣದಲ್ಲಿ ಸಂಭ್ರಮದಲ್ಲಿ ಭಾಗಿಯಾಗಿದ್ದರು.</p>.<p><strong>ನಾಲ್ವರು ಕಾರ್ಯಾಧ್ಯಕ್ಷರು:</strong> ಪಂಜಾಬ್ನಲ್ಲಿ ಮುಂದಿನ ವರ್ಷ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಸಿಧು ಅವರೊಂದಿಗೆ ನಾಲ್ವರು ಕಾರ್ಯಾಧ್ಯಕ್ಷರನ್ನು ಹೈಕಮಾಂಡ್ ನೇಮಕ ಮಾಡಿದೆ.</p>.<p>ಸಿಧು ಅವರು ಸಾರ್ವತ್ರಿಕ ಚುನಾವಣೆಯಲ್ಲಿ ಹೊಸ ಉತ್ಸಾಹದೊಂದಿಗೆ ಪಕ್ಷವನ್ನು ಗೆಲುವಿನತ್ತ ಮುನ್ನಡೆಸಬಹುದು ಎಂಬುದು ಹೈಕಮಾಂಡ್ನ ಆಶಯವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>