<p><strong>ನವದೆಹಲಿ</strong>: 'ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ, ಜೆಡಿ(ಯು) ಮತ್ತು ಎಲ್ಜೆಪಿ ಒಗ್ಗಟ್ಟಿನಿಂದ ಹೋರಾಟ ನಡೆಸಿ ಜಯ ಸಾಧಿಸುತ್ತವೆ' ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.</p>.<p>ಭಾನುವಾರ ಬಿಹಾರ ಬಿಜೆಪಿ ಘಟಕದ ಕಾರ್ಯಸಮಿತಿಯ ವರ್ಚುವಲ್ ಸಭೆಯಲ್ಲಿ ಮಾತನಾಡಿದ ಅವರು, ‘ನಿತೀಶ್ ಕುಮಾರ್ ಅವರ ನೇತೃತ್ವದಲ್ಲಿ ವಿಧಾನಸಭೆ ಚುನಾವಣೆಯನ್ನು ಎದುರಿಸುತ್ತೇವೆ’ ಎಂದು ಹೇಳಿದ್ದಾರೆ.</p>.<p>‘ಬಿಹಾರ ಮತ್ತು ಇತರ ರಾಜ್ಯಗಳಲ್ಲಿ ವಿರೋಧ ಪಕ್ಷಗಳು ಯಾವುದೇ ರೀತಿಯ ಪ್ರಭಾವ ಹೊಂದಿಲ್ಲ. ಮತದಾರರು ಬಿಜೆಪಿ ಮೇಲೆ ಮಾತ್ರ ಅಪಾರ ಆಶಾಭಾವ ಹೊಂದಿದ್ದಾರೆ’ ಎಂದು ಹೇಳಿದ್ದಾರೆ.</p>.<p>‘ವಿರೋಧ ಪಕ್ಷಗಳಿಗೆ ಯಾವುದೇ ಸಿದ್ಧಾಂತವೂ ಇಲ್ಲ, ದೂರದೃಷ್ಟಿಯೂ ಇಲ್ಲ. ಕೀಳುಮಟ್ಟದ ರಾಜಕೀಯದಲ್ಲಿ ವಿರೋಧ ಪಕ್ಷಗಳು ತೊಡಗಿವೆ’ ಎಂದು ಟೀಕಿಸಿದ್ದಾರೆ.</p>.<p>‘ಬಿಹಾರದಲ್ಲಿ ಪ್ರವಾಹ ಮತ್ತು ಕೋವಿಡ್–19 ಸಾಂಕ್ರಾಮಿಕ ಕಾಯಿಲೆ ನಿಯಂತ್ರಿಸುವಲ್ಲಿ ಬಿಹಾರ ಸರ್ಕಾರ ಉತ್ತಮವಾಗಿ ಕಾರ್ಯನಿರ್ವಹಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ ವಿಶೇಷ ಪ್ಯಾಕೇಜ್ ಅನ್ನು ಸಹ ಸಮರ್ಪಕವಾಗಿ ಅನುಷ್ಠಾನಗೊಳಿಸಲಾಗಿದೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: 'ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ, ಜೆಡಿ(ಯು) ಮತ್ತು ಎಲ್ಜೆಪಿ ಒಗ್ಗಟ್ಟಿನಿಂದ ಹೋರಾಟ ನಡೆಸಿ ಜಯ ಸಾಧಿಸುತ್ತವೆ' ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.</p>.<p>ಭಾನುವಾರ ಬಿಹಾರ ಬಿಜೆಪಿ ಘಟಕದ ಕಾರ್ಯಸಮಿತಿಯ ವರ್ಚುವಲ್ ಸಭೆಯಲ್ಲಿ ಮಾತನಾಡಿದ ಅವರು, ‘ನಿತೀಶ್ ಕುಮಾರ್ ಅವರ ನೇತೃತ್ವದಲ್ಲಿ ವಿಧಾನಸಭೆ ಚುನಾವಣೆಯನ್ನು ಎದುರಿಸುತ್ತೇವೆ’ ಎಂದು ಹೇಳಿದ್ದಾರೆ.</p>.<p>‘ಬಿಹಾರ ಮತ್ತು ಇತರ ರಾಜ್ಯಗಳಲ್ಲಿ ವಿರೋಧ ಪಕ್ಷಗಳು ಯಾವುದೇ ರೀತಿಯ ಪ್ರಭಾವ ಹೊಂದಿಲ್ಲ. ಮತದಾರರು ಬಿಜೆಪಿ ಮೇಲೆ ಮಾತ್ರ ಅಪಾರ ಆಶಾಭಾವ ಹೊಂದಿದ್ದಾರೆ’ ಎಂದು ಹೇಳಿದ್ದಾರೆ.</p>.<p>‘ವಿರೋಧ ಪಕ್ಷಗಳಿಗೆ ಯಾವುದೇ ಸಿದ್ಧಾಂತವೂ ಇಲ್ಲ, ದೂರದೃಷ್ಟಿಯೂ ಇಲ್ಲ. ಕೀಳುಮಟ್ಟದ ರಾಜಕೀಯದಲ್ಲಿ ವಿರೋಧ ಪಕ್ಷಗಳು ತೊಡಗಿವೆ’ ಎಂದು ಟೀಕಿಸಿದ್ದಾರೆ.</p>.<p>‘ಬಿಹಾರದಲ್ಲಿ ಪ್ರವಾಹ ಮತ್ತು ಕೋವಿಡ್–19 ಸಾಂಕ್ರಾಮಿಕ ಕಾಯಿಲೆ ನಿಯಂತ್ರಿಸುವಲ್ಲಿ ಬಿಹಾರ ಸರ್ಕಾರ ಉತ್ತಮವಾಗಿ ಕಾರ್ಯನಿರ್ವಹಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ ವಿಶೇಷ ಪ್ಯಾಕೇಜ್ ಅನ್ನು ಸಹ ಸಮರ್ಪಕವಾಗಿ ಅನುಷ್ಠಾನಗೊಳಿಸಲಾಗಿದೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>