<p><strong>ಪಟ್ನಾ:</strong> 1975ರ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಸರ್ವೋದಯ ನಾಯಕ ಜಯಪ್ರಕಾಶ್ ನಾರಾಯಣ್ ಅವರ ಚಳವಳಿಯನ್ನು ಬೆಂಬಲಿಸಿದ್ದಕ್ಕಾಗಿ ಜೈಲು ಶಿಕ್ಷೆಗೆ ಒಳಗಾಗಿದ್ದ ರಾಜಕೀಯ ಕಾರ್ಯಕರ್ತರಾದ ‘ಜೆ.ಪಿ ಸೇನಾನಿ'ಗಳಿಗೆ ಪಿಂಚಣಿ ಮೊತ್ತವನ್ನು ಎರಡು ಪಟ್ಟು ಹೆಚ್ಚಿಸುವುದಾಗಿ ಬಿಹಾರ ಸರ್ಕಾರ ಘೋಷಿಸಿದೆ.</p><p>ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ. ತುರ್ತು ಪರಿಸ್ಥಿತಿ ಘೋಷಣೆಗೂ ಮುನ್ನ 1974ರಲ್ಲಿ ಆರಂಭವಾದ ‘ಜೆಪಿ ಚಳುವಳಿ’ಯಲ್ಲಿ ನಿತೀಶ್ ಕುಮಾರ್ ಅವರು ಸಕ್ರಿಯರಾಗಿ ಭಾಗವಹಿಸಿದ್ದರು. </p><p>‘ಆರು ತಿಂಗಳಿಗಿಂತ ಹೆಚ್ಚು ಕಾಲ ಜೈಲಿನಲ್ಲಿದ್ದ ‘ಜೆಪಿ ಸೇನಾನಿ’ಗಳ ಪಿಂಚಣಿಯನ್ನು ₹15,000ದಿಂದ ₹30,000ಕ್ಕೆ ಹೆಚ್ಚಿಸಲಾಗಿದೆ. ಕಡಿಮೆ ಅವಧಿಯ ಜೈಲು ಶಿಕ್ಷೆ ಅನುಭವಿಸಿದವರ ಪಿಂಚಣಿಯನ್ನು ₹7,500ದಿಂದ ₹15,000ಕ್ಕೆ ಹೆಚ್ಚಿಸಲಾಗಿದೆ’ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಬಿಹಾರದಲ್ಲಿ ಒಟ್ಟು 3,354 ‘ಜೆಪಿ ಸೇನಾನಿ’ಗಳು ಪ್ರಸ್ತುತ ಈ ಯೋಜನೆಯಡಿ ಪಿಂಚಣಿ ಪಡೆಯುತ್ತಿದ್ದಾರೆ ಎಂದ ಅವರು ಮಾಹಿತಿ ನೀಡಿದ್ದಾರೆ. </p><p>ಬಿಹಾರ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಾಗಲೇ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಈಚೆಗೆ ಆಶಾ ಮತ್ತು ಮಮತಾ ಕಾರ್ಯಕರ್ತೆಯರ ಗೌರವಧನವನ್ನು ಹೆಚ್ಚಿಸಿ ಆದೇಶ ಹೊರಡಿಸಿದ್ದರು.</p><p>ಗೃಹ ಬಳಕೆದಾರರಿಗೆ ಪ್ರತಿ ತಿಂಗಳು 125 ಯೂನಿಟ್ ವರೆಗಿನ ಉಚಿತ ವಿದ್ಯುತ್ ವಿತರಿಸುವ ಪ್ರಸ್ತಾಪಕ್ಕೆ ಬಿಹಾರ ಸಚಿವ ಸಂಪುಟವು ಅನುಮೋದನೆ ನೀಡಿತ್ತು. ಆಗಸ್ಟ್ 1ರಿಂದ ಈ ಯೋಜನೆ ಜಾರಿಗೆ ಬರಲಿದೆ ಎಂದೂ ಸರ್ಕಾರ ತಿಳಿಸಿತ್ತು.</p><p>ಜುಲೈ 18ರಂದು ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ಬಿಹಾರಕ್ಕೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಪೂರ್ವ ಚಂಪಾರಣ್ ಜಿಲ್ಲೆಯಲ್ಲಿ ₹7,200 ಕೋಟಿಗೂ ಹೆಚ್ಚು ಮೊತ್ತದ ರೈಲು, ಮೀನುಗಾರಿಕೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿ ಮತ್ತು ಯೋಜನೆಗಳಿಗೆ ಚಾಲನೆ ನೀಡಿದ್ದರು.</p><p>2009ರಲ್ಲಿ ನಿತೀಶ್ ಕುಮಾರ್ ಅವರು ಜಯಪ್ರಕಾಶ್ ನಾರಾಯಣ್ ಅವರ ಹೆಸರಿನ ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿದ್ದರು. ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಕೂಡ ಈ ಯೋಜನೆಯ ಫಲಾನುಭವಿಗಳಲ್ಲಿ ಒಬ್ಬರು.</p>.ಉತ್ತರಾಖಂಡ: ಮಾಜಿ ಅಗ್ನಿವೀರರಿಗೆ ಸರ್ಕಾರಿ ಹುದ್ದೆಗಳಲ್ಲಿ ಶೇ 10ರಷ್ಟು ಮೀಸಲಾತಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ:</strong> 1975ರ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಸರ್ವೋದಯ ನಾಯಕ ಜಯಪ್ರಕಾಶ್ ನಾರಾಯಣ್ ಅವರ ಚಳವಳಿಯನ್ನು ಬೆಂಬಲಿಸಿದ್ದಕ್ಕಾಗಿ ಜೈಲು ಶಿಕ್ಷೆಗೆ ಒಳಗಾಗಿದ್ದ ರಾಜಕೀಯ ಕಾರ್ಯಕರ್ತರಾದ ‘ಜೆ.ಪಿ ಸೇನಾನಿ'ಗಳಿಗೆ ಪಿಂಚಣಿ ಮೊತ್ತವನ್ನು ಎರಡು ಪಟ್ಟು ಹೆಚ್ಚಿಸುವುದಾಗಿ ಬಿಹಾರ ಸರ್ಕಾರ ಘೋಷಿಸಿದೆ.</p><p>ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ. ತುರ್ತು ಪರಿಸ್ಥಿತಿ ಘೋಷಣೆಗೂ ಮುನ್ನ 1974ರಲ್ಲಿ ಆರಂಭವಾದ ‘ಜೆಪಿ ಚಳುವಳಿ’ಯಲ್ಲಿ ನಿತೀಶ್ ಕುಮಾರ್ ಅವರು ಸಕ್ರಿಯರಾಗಿ ಭಾಗವಹಿಸಿದ್ದರು. </p><p>‘ಆರು ತಿಂಗಳಿಗಿಂತ ಹೆಚ್ಚು ಕಾಲ ಜೈಲಿನಲ್ಲಿದ್ದ ‘ಜೆಪಿ ಸೇನಾನಿ’ಗಳ ಪಿಂಚಣಿಯನ್ನು ₹15,000ದಿಂದ ₹30,000ಕ್ಕೆ ಹೆಚ್ಚಿಸಲಾಗಿದೆ. ಕಡಿಮೆ ಅವಧಿಯ ಜೈಲು ಶಿಕ್ಷೆ ಅನುಭವಿಸಿದವರ ಪಿಂಚಣಿಯನ್ನು ₹7,500ದಿಂದ ₹15,000ಕ್ಕೆ ಹೆಚ್ಚಿಸಲಾಗಿದೆ’ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಬಿಹಾರದಲ್ಲಿ ಒಟ್ಟು 3,354 ‘ಜೆಪಿ ಸೇನಾನಿ’ಗಳು ಪ್ರಸ್ತುತ ಈ ಯೋಜನೆಯಡಿ ಪಿಂಚಣಿ ಪಡೆಯುತ್ತಿದ್ದಾರೆ ಎಂದ ಅವರು ಮಾಹಿತಿ ನೀಡಿದ್ದಾರೆ. </p><p>ಬಿಹಾರ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಾಗಲೇ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಈಚೆಗೆ ಆಶಾ ಮತ್ತು ಮಮತಾ ಕಾರ್ಯಕರ್ತೆಯರ ಗೌರವಧನವನ್ನು ಹೆಚ್ಚಿಸಿ ಆದೇಶ ಹೊರಡಿಸಿದ್ದರು.</p><p>ಗೃಹ ಬಳಕೆದಾರರಿಗೆ ಪ್ರತಿ ತಿಂಗಳು 125 ಯೂನಿಟ್ ವರೆಗಿನ ಉಚಿತ ವಿದ್ಯುತ್ ವಿತರಿಸುವ ಪ್ರಸ್ತಾಪಕ್ಕೆ ಬಿಹಾರ ಸಚಿವ ಸಂಪುಟವು ಅನುಮೋದನೆ ನೀಡಿತ್ತು. ಆಗಸ್ಟ್ 1ರಿಂದ ಈ ಯೋಜನೆ ಜಾರಿಗೆ ಬರಲಿದೆ ಎಂದೂ ಸರ್ಕಾರ ತಿಳಿಸಿತ್ತು.</p><p>ಜುಲೈ 18ರಂದು ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ಬಿಹಾರಕ್ಕೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಪೂರ್ವ ಚಂಪಾರಣ್ ಜಿಲ್ಲೆಯಲ್ಲಿ ₹7,200 ಕೋಟಿಗೂ ಹೆಚ್ಚು ಮೊತ್ತದ ರೈಲು, ಮೀನುಗಾರಿಕೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿ ಮತ್ತು ಯೋಜನೆಗಳಿಗೆ ಚಾಲನೆ ನೀಡಿದ್ದರು.</p><p>2009ರಲ್ಲಿ ನಿತೀಶ್ ಕುಮಾರ್ ಅವರು ಜಯಪ್ರಕಾಶ್ ನಾರಾಯಣ್ ಅವರ ಹೆಸರಿನ ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿದ್ದರು. ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಕೂಡ ಈ ಯೋಜನೆಯ ಫಲಾನುಭವಿಗಳಲ್ಲಿ ಒಬ್ಬರು.</p>.ಉತ್ತರಾಖಂಡ: ಮಾಜಿ ಅಗ್ನಿವೀರರಿಗೆ ಸರ್ಕಾರಿ ಹುದ್ದೆಗಳಲ್ಲಿ ಶೇ 10ರಷ್ಟು ಮೀಸಲಾತಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>