<p><strong>ಹೈದರಾಬಾದ್</strong>: ಹೈದರಾಬಾದ್ನಲ್ಲಿ 2007ರಲ್ಲಿ ನಡೆದ ಅವಳಿ ಬಾಂಬ್ ಸ್ಫೋಟ ಪ್ರಕರಣದ ತೀರ್ಪನ್ನು ಇಲ್ಲಿನ ನ್ಯಾಯಾಲಯ ಸೋಮವಾರ (ಆಗಸ್ಟ್ 27) ಪ್ರಕಟಿಸಲಿದೆ.</p>.<p>ಪ್ರಕರಣದಲ್ಲಿ ಆರೋಪಿಗಳಾಗಿರುವ ನಾಲ್ವರ ವಿಚಾರಣೆಯನ್ನು ನಾಂಪಲ್ಲಿ ನ್ಯಾಯಾಲಯ ಸಮುಚ್ಚಯದಿಂದ ಚೆರ್ಲಪಲ್ಲಿ ಕೇಂದ್ರೀಯ ಕಾರಾಗೃಹದ ಆವರಣದಲ್ಲಿರುವ ನ್ಯಾಯಾಲಯಕ್ಕೆ ಜೂನ್ ತಿಂಗಳಲ್ಲಿ ಸ್ಥಳಾಂತರಿಸಲಾಗಿತ್ತು.</p>.<p>ವಿಚಾರಣೆ ಪೂರ್ಣಗೊಂಡ ಬಳಿಕ ಆಗಸ್ಟ್ 7ರಂದು ಸೆಷನ್ಸ್ ನ್ಯಾಯಾಧೀಶ ಶ್ರೀನಿವಾಸ ರಾವ್ ಅವರು ಆಗಸ್ಟ್ 27ರಂದು ತೀರ್ಪು ಪ್ರಕಟಿಸುವುದಾಗಿ ಹೇಳಿದ್ದರು.</p>.<p>ತೆಲಂಗಾಣ ಪೊಲೀಸ್ ಇಲಾಖೆಯ ಗುಪ್ತಚರ ವಿಭಾಗದವರು ತನಿಖೆ ನಡೆಸಿದ್ದು, ಆರೋಪಿಗಳ ವಿರುದ್ಧ ಮೂರು ಆರೋಪಪಟ್ಟಿಗಳನ್ನು ಸಲ್ಲಿಸಿದ್ದರು. ಆರೋಪಿಗಳಲ್ಲಿ ಹಲವರು ಇನ್ನೂ ತಲೆಮರೆಸಿಕೊಂಡಿದ್ದಾರೆ.</p>.<p>ಪ್ರಕರಣಕ್ಕೆ ಸಂಬಂಧಿಸಿ 2013ರಲ್ಲಿ ಮೆಟ್ರೊಪೊಲಿಟನ್ ಸೆಷನ್ಸ್ ನ್ಯಾಯಾಲಯವು ಇಂಡಿಯನ್ ಮುಜಾಹಿದ್ದೀನ್ ಕಾರ್ಯಕರ್ತರಾದ ಅನೀಖ್ ಶಫೀಕ್ ಸಯ್ಯದ್, ಮೊಹಮ್ಮದ್ ಸಾದೀಕ್, ಅಕ್ಬರ್ ಇಸ್ಮಾಯಿಲ್ ಚೌಧರಿ ಮತ್ತು ಅನ್ಸರ್ ಅಹಮ್ಮದ್ ಬಾದ್ಶಾ ಶೇಕ್ ವಿರುದ್ಧ ಆರೋಪ ಹೊರಿಸಿತ್ತು. ಈ ನಾಲ್ವರು ಆರೋಪಿಗಳನ್ನು ಚೆರ್ಲಪಲ್ಲಿ ಕೇಂದ್ರೀಯ ಕಾರಾಗೃಹದಲ್ಲಿ ಇರಿಸಲಾಗಿದೆ.</p>.<p>2007 ಆಗಸ್ಟ್ 25ರಂದು ಹೈದರಾಬಾದ್ನ ಗೋಕುಲ ಚಾಟ್ ಮತ್ತು ಲುಂಬಿನಿ ಪಾರ್ಕ್ನಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ 42 ಮಂದಿ ಮೃತಪಟ್ಟಿದ್ದರು. 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್</strong>: ಹೈದರಾಬಾದ್ನಲ್ಲಿ 2007ರಲ್ಲಿ ನಡೆದ ಅವಳಿ ಬಾಂಬ್ ಸ್ಫೋಟ ಪ್ರಕರಣದ ತೀರ್ಪನ್ನು ಇಲ್ಲಿನ ನ್ಯಾಯಾಲಯ ಸೋಮವಾರ (ಆಗಸ್ಟ್ 27) ಪ್ರಕಟಿಸಲಿದೆ.</p>.<p>ಪ್ರಕರಣದಲ್ಲಿ ಆರೋಪಿಗಳಾಗಿರುವ ನಾಲ್ವರ ವಿಚಾರಣೆಯನ್ನು ನಾಂಪಲ್ಲಿ ನ್ಯಾಯಾಲಯ ಸಮುಚ್ಚಯದಿಂದ ಚೆರ್ಲಪಲ್ಲಿ ಕೇಂದ್ರೀಯ ಕಾರಾಗೃಹದ ಆವರಣದಲ್ಲಿರುವ ನ್ಯಾಯಾಲಯಕ್ಕೆ ಜೂನ್ ತಿಂಗಳಲ್ಲಿ ಸ್ಥಳಾಂತರಿಸಲಾಗಿತ್ತು.</p>.<p>ವಿಚಾರಣೆ ಪೂರ್ಣಗೊಂಡ ಬಳಿಕ ಆಗಸ್ಟ್ 7ರಂದು ಸೆಷನ್ಸ್ ನ್ಯಾಯಾಧೀಶ ಶ್ರೀನಿವಾಸ ರಾವ್ ಅವರು ಆಗಸ್ಟ್ 27ರಂದು ತೀರ್ಪು ಪ್ರಕಟಿಸುವುದಾಗಿ ಹೇಳಿದ್ದರು.</p>.<p>ತೆಲಂಗಾಣ ಪೊಲೀಸ್ ಇಲಾಖೆಯ ಗುಪ್ತಚರ ವಿಭಾಗದವರು ತನಿಖೆ ನಡೆಸಿದ್ದು, ಆರೋಪಿಗಳ ವಿರುದ್ಧ ಮೂರು ಆರೋಪಪಟ್ಟಿಗಳನ್ನು ಸಲ್ಲಿಸಿದ್ದರು. ಆರೋಪಿಗಳಲ್ಲಿ ಹಲವರು ಇನ್ನೂ ತಲೆಮರೆಸಿಕೊಂಡಿದ್ದಾರೆ.</p>.<p>ಪ್ರಕರಣಕ್ಕೆ ಸಂಬಂಧಿಸಿ 2013ರಲ್ಲಿ ಮೆಟ್ರೊಪೊಲಿಟನ್ ಸೆಷನ್ಸ್ ನ್ಯಾಯಾಲಯವು ಇಂಡಿಯನ್ ಮುಜಾಹಿದ್ದೀನ್ ಕಾರ್ಯಕರ್ತರಾದ ಅನೀಖ್ ಶಫೀಕ್ ಸಯ್ಯದ್, ಮೊಹಮ್ಮದ್ ಸಾದೀಕ್, ಅಕ್ಬರ್ ಇಸ್ಮಾಯಿಲ್ ಚೌಧರಿ ಮತ್ತು ಅನ್ಸರ್ ಅಹಮ್ಮದ್ ಬಾದ್ಶಾ ಶೇಕ್ ವಿರುದ್ಧ ಆರೋಪ ಹೊರಿಸಿತ್ತು. ಈ ನಾಲ್ವರು ಆರೋಪಿಗಳನ್ನು ಚೆರ್ಲಪಲ್ಲಿ ಕೇಂದ್ರೀಯ ಕಾರಾಗೃಹದಲ್ಲಿ ಇರಿಸಲಾಗಿದೆ.</p>.<p>2007 ಆಗಸ್ಟ್ 25ರಂದು ಹೈದರಾಬಾದ್ನ ಗೋಕುಲ ಚಾಟ್ ಮತ್ತು ಲುಂಬಿನಿ ಪಾರ್ಕ್ನಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ 42 ಮಂದಿ ಮೃತಪಟ್ಟಿದ್ದರು. 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>