<p><strong>ಪ್ರಯಾಗರಾಜ್:</strong> ಮಹಾ ಕುಂಭ ಮೇಳದಲ್ಲಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣದ ತನಿಖೆಗಾಗಿ ಉತ್ತರ ಪ್ರದೇಶ ಸರ್ಕಾರ ರಚಿಸಿರುವ ಮೂವರು ಸದಸ್ಯರ ನ್ಯಾಯಾಂಗ ಆಯೋಗವು ಇಂದು ಘಟನಾ ಸ್ಥಳಕ್ಕೆ(ಸಂಗಮ) ಭೇಟಿ ನೀಡಿದೆ.</p>.<p>ಸಮಿತಿಯ ಸದಸ್ಯರಿಗೆ ಮೇಲಾಧಿಕಾರಿಗಳಾದ ವಿಜಯ್ ಕಿರಣ್ ಆನಂದ್, ಡಿಐಜಿ ವೈಭವ್ ಕೃಷ್ಣ ಮತ್ತು ಎಸ್ಎಸ್ಪಿ ರಾಜೇಶ್ ದ್ವಿವೇದಿ ಅವರು ಮಾಹಿತಿ ನೀಡಿದರು.</p>.Maha Kumbh: ‘ಅಮೃತ ಸ್ನಾನ’ಕ್ಕೆ ಇನ್ನು ಸರ್ಪಗಾವಲು.<p>‘ಮಹಾ ಕುಂಭದ ವೇಳೆ ಸಂಭವಿಸಿದ ಕಾಲ್ತುಳಿತಕ್ಕೆ ಕಾರಣ ಪತ್ತೆಗೆ ಸಂಬಂಧಿಸಿದ ತನಿಖೆ ಪೂರ್ಣಗೊಳಿಸಲು ಆಯೋಗಕ್ಕೆ ಒಂದು ತಿಂಗಳು ಅವಕಾಶ ನೀಡಲಾಗಿದೆ. ಆದರೆ ಆದಷ್ಟು ತ್ವರಿತವಾಗಿ ತನಿಖೆ ಪೂರ್ಣಗೊಳಿಸಲು ಯತ್ನಿಸಲಾಗುವುದು’ ಎಂದು ಆಯೋಗದ ಅಧ್ಯಕ್ಷರಾದ ನಿವೃತ್ತ ನ್ಯಾಯಮೂರ್ತಿ ಹರ್ಷಕುಮಾರ್ ಹೇಳಿದ್ದಾರೆ. </p>.<p>ನಿವೃತ್ತ ಡಿಜಿಪಿ ವಿ.ಕೆ.ಗುಪ್ತಾ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಡಿ.ಕೆ.ಸಿಂಗ್ ಅವರು ಆಯೋಗದ ಸದಸ್ಯರಾಗಿದ್ದಾರೆ. </p>.<p>ಉತ್ತರ ಪ್ರದೇಶ ಮುಖ್ಯ ಕಾರ್ಯದರ್ಶಿ ಮನೋಜ್ ಕುಮಾರ್ ಸಿಂಗ್ ಹಾಗೂ ಡಿಜಿಪಿ ಪ್ರಶಾಂತಕುಮಾರ್ ಅವರು ಮಹಾ ಕುಂಭ ಮೇಳ ಪ್ರದೇಶಕ್ಕೆ ಗುರುವಾರ ಭೇಟಿ ನೀಡಿ, ಪರಿಸ್ಥಿತಿ ಅವಲೋಕಿಸಿದ್ದರು.</p><p>‘ಮೌನಿ ಅಮಾವಾಸ್ಯೆ’ ಅಂಗವಾಗಿ ಇಲ್ಲಿನ ‘ಸಂಗಮ’ದಲ್ಲಿ ಬುಧವಾರ ಪುಣ್ಯಸ್ನಾನಕ್ಕಾಗಿ ನೂಕುನುಗ್ಗಲಿನಿಂದ ಉಂಟಾದ ಕಾಲ್ತುಳಿತದಲ್ಲಿ ಮಹಿಳೆಯರು ಸೇರಿ ಕನಿಷ್ಠ 30 ಮಂದಿ ಮೃತಪಟ್ಟಿದ್ದು, ಇತರ 60 ಜನರು ಗಾಯಗೊಂಡಿದ್ದಾರೆ.</p> .Maha Kumbh stampede: ಜ.31ರಂದು ಘಟನಾ ಸ್ಥಳಕ್ಕೆ ನ್ಯಾಯಾಂಗ ಆಯೋಗ ಭೇಟಿ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪ್ರಯಾಗರಾಜ್:</strong> ಮಹಾ ಕುಂಭ ಮೇಳದಲ್ಲಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣದ ತನಿಖೆಗಾಗಿ ಉತ್ತರ ಪ್ರದೇಶ ಸರ್ಕಾರ ರಚಿಸಿರುವ ಮೂವರು ಸದಸ್ಯರ ನ್ಯಾಯಾಂಗ ಆಯೋಗವು ಇಂದು ಘಟನಾ ಸ್ಥಳಕ್ಕೆ(ಸಂಗಮ) ಭೇಟಿ ನೀಡಿದೆ.</p>.<p>ಸಮಿತಿಯ ಸದಸ್ಯರಿಗೆ ಮೇಲಾಧಿಕಾರಿಗಳಾದ ವಿಜಯ್ ಕಿರಣ್ ಆನಂದ್, ಡಿಐಜಿ ವೈಭವ್ ಕೃಷ್ಣ ಮತ್ತು ಎಸ್ಎಸ್ಪಿ ರಾಜೇಶ್ ದ್ವಿವೇದಿ ಅವರು ಮಾಹಿತಿ ನೀಡಿದರು.</p>.Maha Kumbh: ‘ಅಮೃತ ಸ್ನಾನ’ಕ್ಕೆ ಇನ್ನು ಸರ್ಪಗಾವಲು.<p>‘ಮಹಾ ಕುಂಭದ ವೇಳೆ ಸಂಭವಿಸಿದ ಕಾಲ್ತುಳಿತಕ್ಕೆ ಕಾರಣ ಪತ್ತೆಗೆ ಸಂಬಂಧಿಸಿದ ತನಿಖೆ ಪೂರ್ಣಗೊಳಿಸಲು ಆಯೋಗಕ್ಕೆ ಒಂದು ತಿಂಗಳು ಅವಕಾಶ ನೀಡಲಾಗಿದೆ. ಆದರೆ ಆದಷ್ಟು ತ್ವರಿತವಾಗಿ ತನಿಖೆ ಪೂರ್ಣಗೊಳಿಸಲು ಯತ್ನಿಸಲಾಗುವುದು’ ಎಂದು ಆಯೋಗದ ಅಧ್ಯಕ್ಷರಾದ ನಿವೃತ್ತ ನ್ಯಾಯಮೂರ್ತಿ ಹರ್ಷಕುಮಾರ್ ಹೇಳಿದ್ದಾರೆ. </p>.<p>ನಿವೃತ್ತ ಡಿಜಿಪಿ ವಿ.ಕೆ.ಗುಪ್ತಾ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಡಿ.ಕೆ.ಸಿಂಗ್ ಅವರು ಆಯೋಗದ ಸದಸ್ಯರಾಗಿದ್ದಾರೆ. </p>.<p>ಉತ್ತರ ಪ್ರದೇಶ ಮುಖ್ಯ ಕಾರ್ಯದರ್ಶಿ ಮನೋಜ್ ಕುಮಾರ್ ಸಿಂಗ್ ಹಾಗೂ ಡಿಜಿಪಿ ಪ್ರಶಾಂತಕುಮಾರ್ ಅವರು ಮಹಾ ಕುಂಭ ಮೇಳ ಪ್ರದೇಶಕ್ಕೆ ಗುರುವಾರ ಭೇಟಿ ನೀಡಿ, ಪರಿಸ್ಥಿತಿ ಅವಲೋಕಿಸಿದ್ದರು.</p><p>‘ಮೌನಿ ಅಮಾವಾಸ್ಯೆ’ ಅಂಗವಾಗಿ ಇಲ್ಲಿನ ‘ಸಂಗಮ’ದಲ್ಲಿ ಬುಧವಾರ ಪುಣ್ಯಸ್ನಾನಕ್ಕಾಗಿ ನೂಕುನುಗ್ಗಲಿನಿಂದ ಉಂಟಾದ ಕಾಲ್ತುಳಿತದಲ್ಲಿ ಮಹಿಳೆಯರು ಸೇರಿ ಕನಿಷ್ಠ 30 ಮಂದಿ ಮೃತಪಟ್ಟಿದ್ದು, ಇತರ 60 ಜನರು ಗಾಯಗೊಂಡಿದ್ದಾರೆ.</p> .Maha Kumbh stampede: ಜ.31ರಂದು ಘಟನಾ ಸ್ಥಳಕ್ಕೆ ನ್ಯಾಯಾಂಗ ಆಯೋಗ ಭೇಟಿ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>