<p><strong>ನವದೆಹಲಿ:</strong> ಅಂತರರಾಷ್ಟ್ರೀಯ ಕಾನೂನುಸಮಾವೇಶದ ಉದ್ಘಾಟನಾ ಸಮಾರಂಭದಲ್ಲಿ ನ್ಯಾಯಮುರ್ತಿ ಅರುಣ್ಮಿಶ್ರಾ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಹೊಗಳಿರುವುದನ್ನು ಬಾರ್ ಅಸೋಸಿಯೇಷನ್ ಆಫ್ ಇಂಡಿಯಾ ಪ್ರಶ್ನಿಸಿದೆ.</p>.<p>‘ಬಹುಮುಖ ಪ್ರತಿಭೆ ಹೊಂದಿರುವ ಪ್ರಧಾನಿ ನರೇಂದ್ರ ಮೋದಿ, ಜಾಗತಿಕವಾಗಿಚಿಂತಿಸುತ್ತಾರೆಮತ್ತು ಸ್ಥಳೀಯವಾಗಿ ಸ್ಪಂದಿಸುತ್ತಾರೆ (Thinks globally and acts locally<em>)</em> ಎಂದು ನ್ಯಾಯಮೂರ್ತಿ ಮಿಶ್ರಾ ಅವರು ಸಮಾರಂಭದಲ್ಲಿ ಹೇಳಿದ್ದರು.</p>.<p>ನ್ಯಾಯಮೂರ್ತಿಮಿಶ್ರಾಅವರು ಕಾರ್ಯಕ್ರಮದ ವಂದನಾರ್ಪಣೆಯಲ್ಲಿ ಪ್ರಧಾನಿಯವರನ್ನು ಅತಿಯಾಗಿಹೊಗಳಿದ್ದಾರೆ ಎಂದುಬಾರ್ಅಸೋಸಿಯೇಷನ್ಆಫ್ ಇಂಡಿಯಾ ಅಭಿಪ್ರಾಯಪಟ್ಟಿದೆ.</p>.<p>‘ಆಳುವವರ ವಿರುದ್ಧ ದೂರುಗಳು ಬಂದಾಗ ಸಂವಿಧಾನ ಮತ್ತು ಕಾನೂನನ್ನು ಮಾನದಂಡವಾಗಿರಿಸಿಕೊಂಡುಸುಪ್ರೀಂಕೊರ್ಟ್ನ ನ್ಯಾಯಮೂರ್ತಿಗಳುಕ್ರಮ ಕೈಗೊಳ್ಳಬೇಕು. ನ್ಯಾಯಾಂಗ ನಿಷ್ಪಕ್ಷಪಾತವಾಗಿ ಮತ್ತುಸ್ವತಂತ್ರವಾಗಿಕಾರ್ಯನಿರ್ವಹಿಸುತ್ತಿದೆ ಎಂಬ ಜನರ ನಂಬಿಕೆಯನ್ನು ಇಂಥ ಹೇಳಿಕೆಗಳುದುರ್ಬಲಗೊಳಿಸುವ ಸಾಧ್ಯತೆ ಇದೆ’ ಎಂದುಬಾರ್ಅಸೋಸಿಯೇಷನ್ಅಭಿಪ್ರಾಯಪಟ್ಟಿದೆ.</p>.<p>ಆಡಳಿತಾಂಗಮತ್ತು ಶಾಸಕಾಂಗದ ನಡುವೆ ಗೌರವಯುತ ಅಂತರವನ್ನು ಕಾಯ್ದುಕೊಳ್ಳಬೇಕಾದದು ನ್ಯಾಯಮೂರ್ತಿಗಳ ಮೂಲ ಕರ್ತವ್ಯ. ನ್ಯಾಯ ಮತ್ತುಪಾರದರ್ಶಕತೆಯನ್ನು ಜನಸಾಮಾನ್ಯರು ನ್ಯಾಯಾಲಯದಿಂದ ನಿರೀಕ್ಷಿಸುತ್ತಾರೆಎಂದು ಬಾರ್ ಅಸೋಸಿಯೇಷನ್ಹೇಳಿದೆ.</p>.<p>ಸ್ವಾತಂತ್ರ್ಯನ್ಯಾಯಾಂಗ ವ್ಯವಸ್ಥೆಬಲಪಡಿಸಲುನಿಟ್ಟಿನಲ್ಲಿ ನಿರಂತರಎಚ್ಚರಿಕೆವಹಿಸಬೇಕು ಎಂದುಬಾರ್ಅಸೋಸಿಯೇಷನ್ ಅಭಿಪ್ರಾಯಪಟ್ಟಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಅಂತರರಾಷ್ಟ್ರೀಯ ಕಾನೂನುಸಮಾವೇಶದ ಉದ್ಘಾಟನಾ ಸಮಾರಂಭದಲ್ಲಿ ನ್ಯಾಯಮುರ್ತಿ ಅರುಣ್ಮಿಶ್ರಾ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಹೊಗಳಿರುವುದನ್ನು ಬಾರ್ ಅಸೋಸಿಯೇಷನ್ ಆಫ್ ಇಂಡಿಯಾ ಪ್ರಶ್ನಿಸಿದೆ.</p>.<p>‘ಬಹುಮುಖ ಪ್ರತಿಭೆ ಹೊಂದಿರುವ ಪ್ರಧಾನಿ ನರೇಂದ್ರ ಮೋದಿ, ಜಾಗತಿಕವಾಗಿಚಿಂತಿಸುತ್ತಾರೆಮತ್ತು ಸ್ಥಳೀಯವಾಗಿ ಸ್ಪಂದಿಸುತ್ತಾರೆ (Thinks globally and acts locally<em>)</em> ಎಂದು ನ್ಯಾಯಮೂರ್ತಿ ಮಿಶ್ರಾ ಅವರು ಸಮಾರಂಭದಲ್ಲಿ ಹೇಳಿದ್ದರು.</p>.<p>ನ್ಯಾಯಮೂರ್ತಿಮಿಶ್ರಾಅವರು ಕಾರ್ಯಕ್ರಮದ ವಂದನಾರ್ಪಣೆಯಲ್ಲಿ ಪ್ರಧಾನಿಯವರನ್ನು ಅತಿಯಾಗಿಹೊಗಳಿದ್ದಾರೆ ಎಂದುಬಾರ್ಅಸೋಸಿಯೇಷನ್ಆಫ್ ಇಂಡಿಯಾ ಅಭಿಪ್ರಾಯಪಟ್ಟಿದೆ.</p>.<p>‘ಆಳುವವರ ವಿರುದ್ಧ ದೂರುಗಳು ಬಂದಾಗ ಸಂವಿಧಾನ ಮತ್ತು ಕಾನೂನನ್ನು ಮಾನದಂಡವಾಗಿರಿಸಿಕೊಂಡುಸುಪ್ರೀಂಕೊರ್ಟ್ನ ನ್ಯಾಯಮೂರ್ತಿಗಳುಕ್ರಮ ಕೈಗೊಳ್ಳಬೇಕು. ನ್ಯಾಯಾಂಗ ನಿಷ್ಪಕ್ಷಪಾತವಾಗಿ ಮತ್ತುಸ್ವತಂತ್ರವಾಗಿಕಾರ್ಯನಿರ್ವಹಿಸುತ್ತಿದೆ ಎಂಬ ಜನರ ನಂಬಿಕೆಯನ್ನು ಇಂಥ ಹೇಳಿಕೆಗಳುದುರ್ಬಲಗೊಳಿಸುವ ಸಾಧ್ಯತೆ ಇದೆ’ ಎಂದುಬಾರ್ಅಸೋಸಿಯೇಷನ್ಅಭಿಪ್ರಾಯಪಟ್ಟಿದೆ.</p>.<p>ಆಡಳಿತಾಂಗಮತ್ತು ಶಾಸಕಾಂಗದ ನಡುವೆ ಗೌರವಯುತ ಅಂತರವನ್ನು ಕಾಯ್ದುಕೊಳ್ಳಬೇಕಾದದು ನ್ಯಾಯಮೂರ್ತಿಗಳ ಮೂಲ ಕರ್ತವ್ಯ. ನ್ಯಾಯ ಮತ್ತುಪಾರದರ್ಶಕತೆಯನ್ನು ಜನಸಾಮಾನ್ಯರು ನ್ಯಾಯಾಲಯದಿಂದ ನಿರೀಕ್ಷಿಸುತ್ತಾರೆಎಂದು ಬಾರ್ ಅಸೋಸಿಯೇಷನ್ಹೇಳಿದೆ.</p>.<p>ಸ್ವಾತಂತ್ರ್ಯನ್ಯಾಯಾಂಗ ವ್ಯವಸ್ಥೆಬಲಪಡಿಸಲುನಿಟ್ಟಿನಲ್ಲಿ ನಿರಂತರಎಚ್ಚರಿಕೆವಹಿಸಬೇಕು ಎಂದುಬಾರ್ಅಸೋಸಿಯೇಷನ್ ಅಭಿಪ್ರಾಯಪಟ್ಟಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>