<p><strong>ನವದೆಹಲಿ:</strong> ಸಮರ್ಪಕ ಕಾರಣಗಳಿಲ್ಲದೆಯೇ ಆರೋಪಿಗೆ ಜಾಮೀನು ನೀಡುವುದನ್ನು ಒಪ್ಪಲಾಗದು ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ.</p>.<p>ಮೇಲ್ನೋಟಕ್ಕೆ ಕಂಡುಬರುವ ಕೆಲವೇ ಅಂಶಗಳನ್ನು ಆಧರಿಸಿ ಆದೇಶ ಹೊರಡಿಸುವ ಮಟ್ಟಕ್ಕೆ ಕ್ರಿಮಿನಲ್ ನ್ಯಾಯಾಂಗ ವ್ಯವಸ್ಥೆಯ ಆಡಳಿತ ಕುಸಿಯಬಾರದು ಎಂದು ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್ ಹಾಗೂ ಎಂ.ಆರ್.ಶಾ ಅವರಿರುವ ನ್ಯಾಯಪೀಠ ಹೇಳಿದೆ.</p>.<p>ಸೋನು ಯಾದವ್ ಎಂಬ ವ್ಯಕ್ತಿಗೆ ಜಾಮೀನು ಮಂಜೂರು ಮಾಡಿ ಅಲಹಾಬಾದ್ ಹೈಕೋರ್ಟ್ ಹೊರಡಿಸಿದ್ದ ಆದೇಶವನ್ನು ಪಕ್ಕಕ್ಕಿರಿಸಿದ ನ್ಯಾಯಪೀಠ, ಈ ಅಭಿಪ್ರಾಯ ವ್ಯಕ್ತಪಡಿಸಿತು.</p>.<p>ಸೋನು ಯಾದವ್ ಪತ್ನಿ 2019ರ ಫೆಬ್ರುವರಿ 8ರಂದು ಮೃತಪಟ್ಟಿದ್ದರು. ಅವರ ಮದುವೆಯಾಗಿ ಇನ್ನೂ 8 ತಿಂಗಳು ಸಹ ಕಳೆದಿರಲಿಲ್ಲ. ಆಕೆಯ ಸಾವಿಗೆ ವರದಕ್ಷಿಣೆ ಕಿರುಕುಳವೇ ಕಾರಣ ಎಂದು ಆರೋಪಿಸಲಾಗಿದೆ.</p>.<p>‘ಆರೋಪಿಗೆ ಜಾಮೀನು ಮಂಜೂರು ಮಾಡಿ ಅಲಹಾಬಾದ್ ಹೈಕೋರ್ಟ್ 2020ರ ಡಿಸೆಂಬರ್ 1ರಂದು ಹೊರಡಿಸಿರುವ ಆದೇಶವು ನ್ಯಾಯದಾನ ಪ್ರಕ್ರಿಯೆಗೆ ಸಂಬಂಧಿಸಿ ರೂಢಿಯಲ್ಲಿರುವ ಮಾರ್ಗಸೂಚಿಗಳಿಗೆ ವ್ಯತಿರಿಕ್ತವಾಗಿದೆ. ಆರೋಪಿಗೆ ಜಾಮೀನು ನೀಡಿರುವುದಕ್ಕೆ ಯಾವುದೇ ಆಧಾರಗಳಿಲ್ಲ’ ಎಂದೂ ನ್ಯಾಯಪೀಠ ಅಭಿಪ್ರಾಯಪಟ್ಟಿದೆ.</p>.<p>‘ಜಾಮೀನು ಅರ್ಜಿಯ ವಿಚಾರಣೆ ವೇಳೆ, ಪೂರಕ ಅಂಶಗಳ ಕುರಿತು ವಿಸ್ಥೃತ ತನಿಖೆ ಬೇಕಾಗಿಲ್ಲ ಎಂಬುದು ನಿಜ. ಆದರೆ, ಪ್ರತಿವಾದಿ ಮಂಡಿಸುವ ವಿಷಯ ಕುರಿತು ಅವಲೋಕನ ಅಗತ್ಯ’ ಎಂದೂ ನ್ಯಾಯಪೀಠ ಹೇಳಿದೆ.</p>.<p>‘ಇಂಥ ಪ್ರಕರಣಗಳ ವಿಷಯದಲ್ಲಿ ಹೈಕೋರ್ಟ್ ಉಪೇಕ್ಷೆ ತೋರಬಾರದು. ಈ ಪ್ರಕರಣದಲ್ಲಿ, ಮಹಿಳೆಗೆ ವರದಕ್ಷಿಣೆಗೆ ಸಂಬಂಧಿಸಿ ಕಿರುಕುಳ ನೀಡಲಾಗುತ್ತಿತ್ತು ಎಂಬ ಆರೋಪ ಇದೆ. ಈ ಆರೋಪದ ಗಂಭೀರತೆಯನ್ನು ಅರ್ಥ ಮಾಡಿಕೊಳ್ಳಬೇಕಿತ್ತು’ ಎಂದೂ ನ್ಯಾಯಪೀಠ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಸಮರ್ಪಕ ಕಾರಣಗಳಿಲ್ಲದೆಯೇ ಆರೋಪಿಗೆ ಜಾಮೀನು ನೀಡುವುದನ್ನು ಒಪ್ಪಲಾಗದು ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ.</p>.<p>ಮೇಲ್ನೋಟಕ್ಕೆ ಕಂಡುಬರುವ ಕೆಲವೇ ಅಂಶಗಳನ್ನು ಆಧರಿಸಿ ಆದೇಶ ಹೊರಡಿಸುವ ಮಟ್ಟಕ್ಕೆ ಕ್ರಿಮಿನಲ್ ನ್ಯಾಯಾಂಗ ವ್ಯವಸ್ಥೆಯ ಆಡಳಿತ ಕುಸಿಯಬಾರದು ಎಂದು ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್ ಹಾಗೂ ಎಂ.ಆರ್.ಶಾ ಅವರಿರುವ ನ್ಯಾಯಪೀಠ ಹೇಳಿದೆ.</p>.<p>ಸೋನು ಯಾದವ್ ಎಂಬ ವ್ಯಕ್ತಿಗೆ ಜಾಮೀನು ಮಂಜೂರು ಮಾಡಿ ಅಲಹಾಬಾದ್ ಹೈಕೋರ್ಟ್ ಹೊರಡಿಸಿದ್ದ ಆದೇಶವನ್ನು ಪಕ್ಕಕ್ಕಿರಿಸಿದ ನ್ಯಾಯಪೀಠ, ಈ ಅಭಿಪ್ರಾಯ ವ್ಯಕ್ತಪಡಿಸಿತು.</p>.<p>ಸೋನು ಯಾದವ್ ಪತ್ನಿ 2019ರ ಫೆಬ್ರುವರಿ 8ರಂದು ಮೃತಪಟ್ಟಿದ್ದರು. ಅವರ ಮದುವೆಯಾಗಿ ಇನ್ನೂ 8 ತಿಂಗಳು ಸಹ ಕಳೆದಿರಲಿಲ್ಲ. ಆಕೆಯ ಸಾವಿಗೆ ವರದಕ್ಷಿಣೆ ಕಿರುಕುಳವೇ ಕಾರಣ ಎಂದು ಆರೋಪಿಸಲಾಗಿದೆ.</p>.<p>‘ಆರೋಪಿಗೆ ಜಾಮೀನು ಮಂಜೂರು ಮಾಡಿ ಅಲಹಾಬಾದ್ ಹೈಕೋರ್ಟ್ 2020ರ ಡಿಸೆಂಬರ್ 1ರಂದು ಹೊರಡಿಸಿರುವ ಆದೇಶವು ನ್ಯಾಯದಾನ ಪ್ರಕ್ರಿಯೆಗೆ ಸಂಬಂಧಿಸಿ ರೂಢಿಯಲ್ಲಿರುವ ಮಾರ್ಗಸೂಚಿಗಳಿಗೆ ವ್ಯತಿರಿಕ್ತವಾಗಿದೆ. ಆರೋಪಿಗೆ ಜಾಮೀನು ನೀಡಿರುವುದಕ್ಕೆ ಯಾವುದೇ ಆಧಾರಗಳಿಲ್ಲ’ ಎಂದೂ ನ್ಯಾಯಪೀಠ ಅಭಿಪ್ರಾಯಪಟ್ಟಿದೆ.</p>.<p>‘ಜಾಮೀನು ಅರ್ಜಿಯ ವಿಚಾರಣೆ ವೇಳೆ, ಪೂರಕ ಅಂಶಗಳ ಕುರಿತು ವಿಸ್ಥೃತ ತನಿಖೆ ಬೇಕಾಗಿಲ್ಲ ಎಂಬುದು ನಿಜ. ಆದರೆ, ಪ್ರತಿವಾದಿ ಮಂಡಿಸುವ ವಿಷಯ ಕುರಿತು ಅವಲೋಕನ ಅಗತ್ಯ’ ಎಂದೂ ನ್ಯಾಯಪೀಠ ಹೇಳಿದೆ.</p>.<p>‘ಇಂಥ ಪ್ರಕರಣಗಳ ವಿಷಯದಲ್ಲಿ ಹೈಕೋರ್ಟ್ ಉಪೇಕ್ಷೆ ತೋರಬಾರದು. ಈ ಪ್ರಕರಣದಲ್ಲಿ, ಮಹಿಳೆಗೆ ವರದಕ್ಷಿಣೆಗೆ ಸಂಬಂಧಿಸಿ ಕಿರುಕುಳ ನೀಡಲಾಗುತ್ತಿತ್ತು ಎಂಬ ಆರೋಪ ಇದೆ. ಈ ಆರೋಪದ ಗಂಭೀರತೆಯನ್ನು ಅರ್ಥ ಮಾಡಿಕೊಳ್ಳಬೇಕಿತ್ತು’ ಎಂದೂ ನ್ಯಾಯಪೀಠ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>