ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ನಡೆದ ನಿರ್ಭಯಾ ಮೇಲಿನ ಅತ್ಯಾಚಾರವು ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಈ ಕ್ರೂರ ಕೃತ್ಯವನ್ನು ನೆನಪಿಸಿಕೊಂಡಿರುವ ತಾಯಿ, ಕಾನೂನು ವ್ಯವಸ್ಥೆಯ ವಿರುದ್ಧ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ಅಲ್ಲದೆ ನ್ಯಾಯ ಸಿಗಲು ಎಂಟು ವರ್ಷ ಕಾಯಬೇಕಾಯಿತು ಎಂದು ಅಳಲು ತೋಡಿಕೊಂಡರು.