<p><strong>ನವದೆಹಲಿ:</strong>ನಿರ್ಭಯಾ ಅತ್ಯಾಚಾರ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ವೇಳೆ ಸುಪ್ರೀಂ ಕೋರ್ಟ್ನ್ಯಾಯಮೂರ್ತಿ ಆರ್. ಬಾನುಮತಿ ಅವರು ಪ್ರಜ್ಞೆ ತಪ್ಪಿರುವ ಘಟನೆ ಶುಕ್ರವಾರ ನಡೆದಿದೆ.</p>.<p>ಅಪರಾಧಿಗಳ ಪ್ರತ್ಯೇಕ ಮರಣದಂಡನೆ ಕುರಿತಂತೆ ಕೇಂದ್ರ ಸರ್ಕಾರವು ಸಲ್ಲಿಸಿದ್ದ ದಾಖಲೆಗಳ ವಿಚಾರಣೆ ನಡೆಸುವ ವೇಳೆ ಪ್ರಜ್ಞೆ ತಪ್ಪಿದ್ದಾರೆ. ಕೂಡಲೇ ಅವರನ್ನು ಕೊಠಡಿಗೆಕರೆದೊಯ್ಯಲಾಗಿದೆ. ಬಳಿಕ ಪೀಠವು ವಿಚಾರಣೆಯನ್ನು ಕೆಲಕಾಲ ಮುಂದೂಡಿ ಆದೇಶವನ್ನು ನಂತರ ಪ್ರಕಟಿಸಲಾಗುವುದು ಎಂದು ಹೇಳಿದೆ.</p>.<p>ಸಾಲಿಸಿಟರ್ ಜನರಲ್ ತುಶಾರ್ ಮೆಹ್ತಾ ಮಾತನಾಡಿ, ನ್ಯಾಯಮೂರ್ತಿ ಆರ್. ಬಾನುಮತಿ ಅವರಿಗೆ ತೀವ್ರವಾದ ಜ್ವರವಿತ್ತು ಮತ್ತು ಈಗಲೂ ಅವರು ಜ್ವರದಿಂದ ಬಳಲುತ್ತಿದ್ದಾರೆ. ವೈದ್ಯರು ತಪಾಸಣೆ ನಡೆಸುತ್ತಿದ್ದಾರೆ. ಪ್ರಕರಣದ ವಿಚಾರಣೆ ನಡೆಸುತ್ತಿದ್ದ ವೇಳೆ ಅವರು ಚಿಕಿತ್ಸೆ ಪಡೆಯುತ್ತಿದ್ದರು ಎಂದಿದ್ದಾರೆ.</p>.<p>ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ತನ್ನ ಕ್ಷಮಾದಾನ ಅರ್ಜಿ ತಿರಸ್ಕರಿಸಿದ್ದನ್ನು ಪ್ರಶ್ನಿಸಿ ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿ ವಿನಯ್ ಶರ್ಮಾ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.</p>.<p>ವೈದ್ಯಕೀಯ ವರದಿಯ ಪ್ರಕಾರ ಅಪರಾಧಿ ವಿನಯ್ ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢನಾಗಿದ್ದಾನೆ. ಹೀಗಾಗಿ ರಾಷ್ಟ್ರಪತಿಗಳು ಕ್ಷಮಾದಾನ ಅರ್ಜಿ ತಿರಸ್ಕರಿಸಿದ ಕ್ರಮಕ್ಕೆ ಯಾವುದೇ ನ್ಯಾಯಾಂಗ ಪರಿಶೀಲನೆಯ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong>ನಿರ್ಭಯಾ ಅತ್ಯಾಚಾರ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ವೇಳೆ ಸುಪ್ರೀಂ ಕೋರ್ಟ್ನ್ಯಾಯಮೂರ್ತಿ ಆರ್. ಬಾನುಮತಿ ಅವರು ಪ್ರಜ್ಞೆ ತಪ್ಪಿರುವ ಘಟನೆ ಶುಕ್ರವಾರ ನಡೆದಿದೆ.</p>.<p>ಅಪರಾಧಿಗಳ ಪ್ರತ್ಯೇಕ ಮರಣದಂಡನೆ ಕುರಿತಂತೆ ಕೇಂದ್ರ ಸರ್ಕಾರವು ಸಲ್ಲಿಸಿದ್ದ ದಾಖಲೆಗಳ ವಿಚಾರಣೆ ನಡೆಸುವ ವೇಳೆ ಪ್ರಜ್ಞೆ ತಪ್ಪಿದ್ದಾರೆ. ಕೂಡಲೇ ಅವರನ್ನು ಕೊಠಡಿಗೆಕರೆದೊಯ್ಯಲಾಗಿದೆ. ಬಳಿಕ ಪೀಠವು ವಿಚಾರಣೆಯನ್ನು ಕೆಲಕಾಲ ಮುಂದೂಡಿ ಆದೇಶವನ್ನು ನಂತರ ಪ್ರಕಟಿಸಲಾಗುವುದು ಎಂದು ಹೇಳಿದೆ.</p>.<p>ಸಾಲಿಸಿಟರ್ ಜನರಲ್ ತುಶಾರ್ ಮೆಹ್ತಾ ಮಾತನಾಡಿ, ನ್ಯಾಯಮೂರ್ತಿ ಆರ್. ಬಾನುಮತಿ ಅವರಿಗೆ ತೀವ್ರವಾದ ಜ್ವರವಿತ್ತು ಮತ್ತು ಈಗಲೂ ಅವರು ಜ್ವರದಿಂದ ಬಳಲುತ್ತಿದ್ದಾರೆ. ವೈದ್ಯರು ತಪಾಸಣೆ ನಡೆಸುತ್ತಿದ್ದಾರೆ. ಪ್ರಕರಣದ ವಿಚಾರಣೆ ನಡೆಸುತ್ತಿದ್ದ ವೇಳೆ ಅವರು ಚಿಕಿತ್ಸೆ ಪಡೆಯುತ್ತಿದ್ದರು ಎಂದಿದ್ದಾರೆ.</p>.<p>ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ತನ್ನ ಕ್ಷಮಾದಾನ ಅರ್ಜಿ ತಿರಸ್ಕರಿಸಿದ್ದನ್ನು ಪ್ರಶ್ನಿಸಿ ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿ ವಿನಯ್ ಶರ್ಮಾ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.</p>.<p>ವೈದ್ಯಕೀಯ ವರದಿಯ ಪ್ರಕಾರ ಅಪರಾಧಿ ವಿನಯ್ ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢನಾಗಿದ್ದಾನೆ. ಹೀಗಾಗಿ ರಾಷ್ಟ್ರಪತಿಗಳು ಕ್ಷಮಾದಾನ ಅರ್ಜಿ ತಿರಸ್ಕರಿಸಿದ ಕ್ರಮಕ್ಕೆ ಯಾವುದೇ ನ್ಯಾಯಾಂಗ ಪರಿಶೀಲನೆಯ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>