<p><strong>ನವದೆಹಲಿ</strong>: ವಿಶ್ವ ಹಿಂದೂ ಪರಿಷತ್ತಿನ (ವಿಎಚ್ಪಿ) ಕಾರ್ಯಕ್ರಮವೊಂದರಲ್ಲಿ ವಿವಾದಾತ್ಮಕ ಹೇಳಿಕೆ ನೀಡಿರುವ ಅಲಹಾಬಾದ್ ಹೈಕೋರ್ಟ್ನ ನ್ಯಾಯಮೂರ್ತಿ ಶೇಖರ್ ಕುಮಾರ್ ಯಾದವ್ ಅವರು ಶೀಘ್ರದಲ್ಲಿಯೇ ಸುಪ್ರೀಂ ಕೋರ್ಟ್ ಕೊಲಿಜಿಯಂ ಮುಂದೆ ಹಾಜರಾಗಿ ವಿವರಣೆ ನೀಡುವ ಸಾಧ್ಯತೆಯಿದೆ.</p><p>ಶೇಖರ್ ಅವರು ನೀಡಿರುವ ಹೇಳಿಕೆಗಳ ಕುರಿತ ಸುದ್ದಿಗಳನ್ನು ಗಮನಿಸಿದ್ದ ಸುಪ್ರೀಂ ಕೋರ್ಟ್, ವಿವರಣೆ ನೀಡುವಂತೆ ಅಲಹಾಬಾದ್ ಹೈಕೋರ್ಟ್ಗೆ ಇತ್ತೀಚೆಗೆ ಸೂಚಿಸಿತ್ತು. </p><p>ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಯಾವುದೇ ವಿವಾದಾತ್ಮಕ ಹೇಳಿಕೆಗಳು ವ್ಯಕ್ತವಾದ ಸಂದರ್ಭದಲ್ಲಿ ಆ ಕುರಿತು ಸುಪ್ರೀಂ ಕೋರ್ಟ್ ವಿವರಣೆಗಳನ್ನು ಕೇಳುತ್ತದೆ. ಅಲ್ಲದೆ ಸಂಬಂಧಿಸಿದ ನ್ಯಾಯಮೂರ್ತಿಗೂ ತಮ್ಮ ಹೇಳಿಕೆ ಕುರಿತು ವಿವರಣೆ ನೀಡಲು ಕೊಲಿಜಿಯಂ ಅವಕಾಶ ನೀಡುತ್ತದೆ.</p><p>ಆ ನಿಟ್ಟಿನಲ್ಲಿ ಅಲಹಾಬಾದ್ ಹೈಕೋರ್ಟ್ನ ನ್ಯಾಯಮೂರ್ತಿ ಸಹ ಕೊಲಿಜಿಯಂ ಮುಂದೆ ಹಾಜರಾಗಿ ವಿವರಣೆ ನೀಡುವ ಸಾಧ್ಯತೆಗಳಿವೆ ಎಂದು ಸುಪ್ರೀಂ ಕೋರ್ಟ್ನ ಮೂಲಗಳು ತಿಳಿಸಿವೆ.</p><p>ಡಿ 8ರಂದು ನಡೆದ ವಿಎಚ್ಪಿ ಕಾನೂನು ವಿಭಾಗದ ಪ್ರಾಂತೀಯ ಸಮಾರಂಭದಲ್ಲಿ ಏಕರೂಪ ನಾಗರಿಕ ಸಂಹಿತೆಯ ಮುಖ್ಯ ಉದ್ದೇಶ ಸಾಮಾಜಿಕ ಸೌಹಾರ್ದ, ಲಿಂಗ ಸಮಾನತೆ ಮತ್ತು ಧರ್ಮನಿರಪೇಕ್ಷತೆಯನ್ನು ಉತ್ತೇಜಿಸುವುದು ಎಂದು ನ್ಯಾಯಮೂರ್ತಿ ಯಾದವ್ ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ವಿಶ್ವ ಹಿಂದೂ ಪರಿಷತ್ತಿನ (ವಿಎಚ್ಪಿ) ಕಾರ್ಯಕ್ರಮವೊಂದರಲ್ಲಿ ವಿವಾದಾತ್ಮಕ ಹೇಳಿಕೆ ನೀಡಿರುವ ಅಲಹಾಬಾದ್ ಹೈಕೋರ್ಟ್ನ ನ್ಯಾಯಮೂರ್ತಿ ಶೇಖರ್ ಕುಮಾರ್ ಯಾದವ್ ಅವರು ಶೀಘ್ರದಲ್ಲಿಯೇ ಸುಪ್ರೀಂ ಕೋರ್ಟ್ ಕೊಲಿಜಿಯಂ ಮುಂದೆ ಹಾಜರಾಗಿ ವಿವರಣೆ ನೀಡುವ ಸಾಧ್ಯತೆಯಿದೆ.</p><p>ಶೇಖರ್ ಅವರು ನೀಡಿರುವ ಹೇಳಿಕೆಗಳ ಕುರಿತ ಸುದ್ದಿಗಳನ್ನು ಗಮನಿಸಿದ್ದ ಸುಪ್ರೀಂ ಕೋರ್ಟ್, ವಿವರಣೆ ನೀಡುವಂತೆ ಅಲಹಾಬಾದ್ ಹೈಕೋರ್ಟ್ಗೆ ಇತ್ತೀಚೆಗೆ ಸೂಚಿಸಿತ್ತು. </p><p>ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಯಾವುದೇ ವಿವಾದಾತ್ಮಕ ಹೇಳಿಕೆಗಳು ವ್ಯಕ್ತವಾದ ಸಂದರ್ಭದಲ್ಲಿ ಆ ಕುರಿತು ಸುಪ್ರೀಂ ಕೋರ್ಟ್ ವಿವರಣೆಗಳನ್ನು ಕೇಳುತ್ತದೆ. ಅಲ್ಲದೆ ಸಂಬಂಧಿಸಿದ ನ್ಯಾಯಮೂರ್ತಿಗೂ ತಮ್ಮ ಹೇಳಿಕೆ ಕುರಿತು ವಿವರಣೆ ನೀಡಲು ಕೊಲಿಜಿಯಂ ಅವಕಾಶ ನೀಡುತ್ತದೆ.</p><p>ಆ ನಿಟ್ಟಿನಲ್ಲಿ ಅಲಹಾಬಾದ್ ಹೈಕೋರ್ಟ್ನ ನ್ಯಾಯಮೂರ್ತಿ ಸಹ ಕೊಲಿಜಿಯಂ ಮುಂದೆ ಹಾಜರಾಗಿ ವಿವರಣೆ ನೀಡುವ ಸಾಧ್ಯತೆಗಳಿವೆ ಎಂದು ಸುಪ್ರೀಂ ಕೋರ್ಟ್ನ ಮೂಲಗಳು ತಿಳಿಸಿವೆ.</p><p>ಡಿ 8ರಂದು ನಡೆದ ವಿಎಚ್ಪಿ ಕಾನೂನು ವಿಭಾಗದ ಪ್ರಾಂತೀಯ ಸಮಾರಂಭದಲ್ಲಿ ಏಕರೂಪ ನಾಗರಿಕ ಸಂಹಿತೆಯ ಮುಖ್ಯ ಉದ್ದೇಶ ಸಾಮಾಜಿಕ ಸೌಹಾರ್ದ, ಲಿಂಗ ಸಮಾನತೆ ಮತ್ತು ಧರ್ಮನಿರಪೇಕ್ಷತೆಯನ್ನು ಉತ್ತೇಜಿಸುವುದು ಎಂದು ನ್ಯಾಯಮೂರ್ತಿ ಯಾದವ್ ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>