<p><strong>ಜಬಲ್ಪುರ:</strong> ‘ಮದ್ರಾಸ್ ಹೈಕೋರ್ಟ್ ನ್ಯಾಯಮೂರ್ತಿ ಜಿ.ಆರ್.ಸ್ವಾಮಿನಾಥನ್ ಅವರನ್ನು ವಾಗ್ದಂಡನೆಗೆ ಗುರಿಪಡಿಸಲು ವಿರೋಧ ಪಕ್ಷಗಳು ಮುಂದಾಗಿರುವುದು ‘ರಾಜಕೀಯ ಪ್ರೇರಿತ’ ನಡೆ ಎಂದು ಮಧ್ಯಪ್ರದೇಶ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಕೆ.ಕೆ.ತ್ರಿವೇದಿ ಆರೋಪಿಸಿದರು.</p>.<p>ಒತ್ತಡ ತಂತ್ರ ಹೇರುವ ಮೂಲಕ ತಮ್ಮ ಪರವಾದ ತೀರ್ಪು ಪ್ರಕಟಿಸಲು ಒತ್ತಾಯಿಸುತ್ತಿವೆ ಎಂದು ಅವರು ದೂರಿದರು.</p>.<p>ಸುಪ್ರೀಂ ಕೋರ್ಟ್ನಲ್ಲಿ ಪ್ರಕರಣದ ವಿಚಾರಣೆಯು ಬಾಕಿ ಇರುವಾಗಲೇ ವಿರೋಧ ಪಕ್ಷಗಳ ಈ ನಡೆಯು ತಪ್ಪಾದುದಾಗಿದೆ. ಈ ಮೂಲಕ ವಿಪಕ್ಷಗಳ ಸಂಸದರು, ನ್ಯಾಯಾಂಗ ವ್ಯವಸ್ಥೆಯ ಘನತೆಗೆ ಧಕ್ಕೆ ತರುತ್ತಿದ್ದಾರೆ ಮತ್ತು ಸಾರ್ವಜನಿಕರ ಆತ್ಮವಿಶ್ವಾಸವನ್ನು ಕುಗ್ಗಿಸುತ್ತಿದ್ದಾರೆ ಎಂದು ಆರೋಪಿಸಿದರು.</p>.<p class="title">ನ್ಯಾಯಮೂರ್ತಿ ಸ್ವಾಮಿನಾಥನ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ಡಿಎಂಕೆ ನೇತೃತ್ವದಲ್ಲಿ ಹಲವು ಸಂಸದರು ಲೋಕಸಭೆ ಸ್ಪೀಕರ್ಗೆ ಮಂಗಳವಾರ ನೋಟಿಸ್ ಸಲ್ಲಿಸಿದ್ದಾರೆ.</p>.<p class="bodytext">ಮದುರೈ ಬಳಿಯ ತಿರುಪರನ್ಕುಂಡ್ರಂ ಬೆಟ್ಟದ ಮೇಲಿರುವ ಅರುಳ್ಮಿಗು ಸುಬ್ರಮಣ್ಯಸ್ವಾಮಿ ದೇವಸ್ಥಾನದಲ್ಲಿ ಕಾರ್ತಿಕ ದೀಪ ಬೆಳಗಿಸಲು ಅವಕಾಶ ನೀಡಿ ಮದ್ರಾಸ್ ಹೈಕೋರ್ಟ್ನ ಮದುರೈ ಪೀಠದ ನ್ಯಾಯಮೂರ್ತಿ ಜಿ.ಆರ್.ಸ್ವಾಮಿನಾಥನ್ ತೀರ್ಪು ನೀಡಿದ್ದರು. ಇದರ ವಿರುದ್ಧ ತಮಿಳುನಾಡು ಸರ್ಕಾರವು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಬಲ್ಪುರ:</strong> ‘ಮದ್ರಾಸ್ ಹೈಕೋರ್ಟ್ ನ್ಯಾಯಮೂರ್ತಿ ಜಿ.ಆರ್.ಸ್ವಾಮಿನಾಥನ್ ಅವರನ್ನು ವಾಗ್ದಂಡನೆಗೆ ಗುರಿಪಡಿಸಲು ವಿರೋಧ ಪಕ್ಷಗಳು ಮುಂದಾಗಿರುವುದು ‘ರಾಜಕೀಯ ಪ್ರೇರಿತ’ ನಡೆ ಎಂದು ಮಧ್ಯಪ್ರದೇಶ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಕೆ.ಕೆ.ತ್ರಿವೇದಿ ಆರೋಪಿಸಿದರು.</p>.<p>ಒತ್ತಡ ತಂತ್ರ ಹೇರುವ ಮೂಲಕ ತಮ್ಮ ಪರವಾದ ತೀರ್ಪು ಪ್ರಕಟಿಸಲು ಒತ್ತಾಯಿಸುತ್ತಿವೆ ಎಂದು ಅವರು ದೂರಿದರು.</p>.<p>ಸುಪ್ರೀಂ ಕೋರ್ಟ್ನಲ್ಲಿ ಪ್ರಕರಣದ ವಿಚಾರಣೆಯು ಬಾಕಿ ಇರುವಾಗಲೇ ವಿರೋಧ ಪಕ್ಷಗಳ ಈ ನಡೆಯು ತಪ್ಪಾದುದಾಗಿದೆ. ಈ ಮೂಲಕ ವಿಪಕ್ಷಗಳ ಸಂಸದರು, ನ್ಯಾಯಾಂಗ ವ್ಯವಸ್ಥೆಯ ಘನತೆಗೆ ಧಕ್ಕೆ ತರುತ್ತಿದ್ದಾರೆ ಮತ್ತು ಸಾರ್ವಜನಿಕರ ಆತ್ಮವಿಶ್ವಾಸವನ್ನು ಕುಗ್ಗಿಸುತ್ತಿದ್ದಾರೆ ಎಂದು ಆರೋಪಿಸಿದರು.</p>.<p class="title">ನ್ಯಾಯಮೂರ್ತಿ ಸ್ವಾಮಿನಾಥನ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ಡಿಎಂಕೆ ನೇತೃತ್ವದಲ್ಲಿ ಹಲವು ಸಂಸದರು ಲೋಕಸಭೆ ಸ್ಪೀಕರ್ಗೆ ಮಂಗಳವಾರ ನೋಟಿಸ್ ಸಲ್ಲಿಸಿದ್ದಾರೆ.</p>.<p class="bodytext">ಮದುರೈ ಬಳಿಯ ತಿರುಪರನ್ಕುಂಡ್ರಂ ಬೆಟ್ಟದ ಮೇಲಿರುವ ಅರುಳ್ಮಿಗು ಸುಬ್ರಮಣ್ಯಸ್ವಾಮಿ ದೇವಸ್ಥಾನದಲ್ಲಿ ಕಾರ್ತಿಕ ದೀಪ ಬೆಳಗಿಸಲು ಅವಕಾಶ ನೀಡಿ ಮದ್ರಾಸ್ ಹೈಕೋರ್ಟ್ನ ಮದುರೈ ಪೀಠದ ನ್ಯಾಯಮೂರ್ತಿ ಜಿ.ಆರ್.ಸ್ವಾಮಿನಾಥನ್ ತೀರ್ಪು ನೀಡಿದ್ದರು. ಇದರ ವಿರುದ್ಧ ತಮಿಳುನಾಡು ಸರ್ಕಾರವು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>