<p><strong>ಚೆನ್ನೈ:</strong> ಮದ್ರಾಸ್ ಹೈಕೋರ್ಟ್ನ ಮಧುರೈ ಪೀಠದ ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ ಅವರನ್ನು ಪದಚ್ಯುತಗೊಳಿಸುವುದಕ್ಕೆ ಸಂಬಂಧಿಸಿದ ನೋಟಿಸ್ ಅನ್ನು ಇಂಡಿಯಾ ಮೈತ್ರಿಕೂಟದ ಸಂಸದರು ಲೋಕಸಭೆಯಲ್ಲಿ ಸಲ್ಲಿಸುವ ಸಾಧ್ಯತೆಯಿದೆ.</p>.<p>ಮಧುರೈ ಬಳಿಯ ತಿರುಪರನ್ಕುಂಡ್ರಂ ಬೆಟ್ಟದ ಕಲ್ಲಿನ ದೀಪಸ್ತಂಭ ‘ದೀಪಥೋನ್’ನಲ್ಲಿ ಕಾರ್ತಿಕ ದೀಪ ಬೆಳಗಿಸಲು ಹೈಕೋರ್ಟ್ನ ನ್ಯಾಯಮೂರ್ತಿ ಜಿ.ಆರ್.ಸ್ವಾಮಿನಾಥನ್ ಅವರು ಭಕ್ತರಿಗೆ ಅವಕಾಶ ನೀಡಿ ಇತ್ತೀಚೆಗೆ ಆದೇಶ ಹೊರಡಿಸಿದ್ದರು. ಅದೇ ಬೆಟ್ಟದಲ್ಲಿ ಸಿಕಂದರ್ ಬಾದುಶಾ ದರ್ಗಾ ಇದ್ದು, ಈ ಆದೇಶದಿಂದ ಕೋಮು ಸೌಹಾರ್ದಕ್ಕೆ ಧಕ್ಕೆ ಉಂಟಾಗಲಿದೆ ಎಂದು ಡಿಎಂಕೆ ಆತಂಕ ವ್ಯಕ್ತಪಡಿಸಿತ್ತು.</p>.<p>‘ತಮಿಳುನಾಡು ಮತ್ತು ಇತರ ರಾಜ್ಯಗಳ ಕಾಂಗ್ರೆಸ್ ಸಂಸದರು ನೋಟಿಸ್ಗೆ ಸಹಿ ಹಾಕಿದ್ದಾರೆ’ ಎಂದು ಮೂಲವೊಂದು ತಿಳಿಸಿದೆ. ನೋಟಿಸ್ ಸಲ್ಲಿಸಲು ಅಗತ್ಯವಿರುವ 100 ಸಂಸದರ ಬೆಂಬಲ ಸುಲಭವಾಗಿ ಸಿಗಲಿದೆ ಎಂಬ ವಿಶ್ವಾಸವನ್ನು ಡಿಎಂಕೆ ವ್ಯಕ್ತಪಡಿಸಿದೆ.</p>.<p>‘ಡಿಎಂಕೆ ಸಂಸದರು ವಿರೋಧ ಪಕ್ಷಗಳ ಸದಸ್ಯರ ಬೆಂಬಲವನ್ನೂ ಕೋರುತ್ತಿದ್ದಾರೆ. ಲೋಕಸಭೆಯಲ್ಲಿ ಮಂಡಿಸಲಿರುವ ನೋಟಿಸ್ಅನ್ನು ಎಲ್ಲಾ ಪಕ್ಷಗಳು ಬೆಂಬಲಿಸುವ ವಿಶ್ವಾಸವಿದೆ. ನೋಟಿಸ್ಗೆ ಸಹಿ ಹಾಕಿರುವ ಸಂಸದರ ನಿಖರ ಸಂಖ್ಯೆಯನ್ನು ಮಂಗಳವಾರ ಬೆಳಿಗ್ಗೆ ಹೇಳಲು ಸಾಧ್ಯ’ ಎಂದು ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ:</strong> ಮದ್ರಾಸ್ ಹೈಕೋರ್ಟ್ನ ಮಧುರೈ ಪೀಠದ ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ ಅವರನ್ನು ಪದಚ್ಯುತಗೊಳಿಸುವುದಕ್ಕೆ ಸಂಬಂಧಿಸಿದ ನೋಟಿಸ್ ಅನ್ನು ಇಂಡಿಯಾ ಮೈತ್ರಿಕೂಟದ ಸಂಸದರು ಲೋಕಸಭೆಯಲ್ಲಿ ಸಲ್ಲಿಸುವ ಸಾಧ್ಯತೆಯಿದೆ.</p>.<p>ಮಧುರೈ ಬಳಿಯ ತಿರುಪರನ್ಕುಂಡ್ರಂ ಬೆಟ್ಟದ ಕಲ್ಲಿನ ದೀಪಸ್ತಂಭ ‘ದೀಪಥೋನ್’ನಲ್ಲಿ ಕಾರ್ತಿಕ ದೀಪ ಬೆಳಗಿಸಲು ಹೈಕೋರ್ಟ್ನ ನ್ಯಾಯಮೂರ್ತಿ ಜಿ.ಆರ್.ಸ್ವಾಮಿನಾಥನ್ ಅವರು ಭಕ್ತರಿಗೆ ಅವಕಾಶ ನೀಡಿ ಇತ್ತೀಚೆಗೆ ಆದೇಶ ಹೊರಡಿಸಿದ್ದರು. ಅದೇ ಬೆಟ್ಟದಲ್ಲಿ ಸಿಕಂದರ್ ಬಾದುಶಾ ದರ್ಗಾ ಇದ್ದು, ಈ ಆದೇಶದಿಂದ ಕೋಮು ಸೌಹಾರ್ದಕ್ಕೆ ಧಕ್ಕೆ ಉಂಟಾಗಲಿದೆ ಎಂದು ಡಿಎಂಕೆ ಆತಂಕ ವ್ಯಕ್ತಪಡಿಸಿತ್ತು.</p>.<p>‘ತಮಿಳುನಾಡು ಮತ್ತು ಇತರ ರಾಜ್ಯಗಳ ಕಾಂಗ್ರೆಸ್ ಸಂಸದರು ನೋಟಿಸ್ಗೆ ಸಹಿ ಹಾಕಿದ್ದಾರೆ’ ಎಂದು ಮೂಲವೊಂದು ತಿಳಿಸಿದೆ. ನೋಟಿಸ್ ಸಲ್ಲಿಸಲು ಅಗತ್ಯವಿರುವ 100 ಸಂಸದರ ಬೆಂಬಲ ಸುಲಭವಾಗಿ ಸಿಗಲಿದೆ ಎಂಬ ವಿಶ್ವಾಸವನ್ನು ಡಿಎಂಕೆ ವ್ಯಕ್ತಪಡಿಸಿದೆ.</p>.<p>‘ಡಿಎಂಕೆ ಸಂಸದರು ವಿರೋಧ ಪಕ್ಷಗಳ ಸದಸ್ಯರ ಬೆಂಬಲವನ್ನೂ ಕೋರುತ್ತಿದ್ದಾರೆ. ಲೋಕಸಭೆಯಲ್ಲಿ ಮಂಡಿಸಲಿರುವ ನೋಟಿಸ್ಅನ್ನು ಎಲ್ಲಾ ಪಕ್ಷಗಳು ಬೆಂಬಲಿಸುವ ವಿಶ್ವಾಸವಿದೆ. ನೋಟಿಸ್ಗೆ ಸಹಿ ಹಾಕಿರುವ ಸಂಸದರ ನಿಖರ ಸಂಖ್ಯೆಯನ್ನು ಮಂಗಳವಾರ ಬೆಳಿಗ್ಗೆ ಹೇಳಲು ಸಾಧ್ಯ’ ಎಂದು ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>