‘ಜೋಸೆಫ್ ಅವರ ಸೇವಾ ಹಿರಿತನ ಕಡಿಮೆ ಇದೆ. ಹೀಗಾಗಿ ಅವರನ್ನು ನೇಮಕ ಮಾಡಲಾಗದು. ಜತೆಗೆ ಅವರು ಕೇರಳದವರಾಗಿದ್ದು, ಈಗಾಗಲೇ ಕೇರಳದವರೇ ಆದ ನ್ಯಾಯಮೂರ್ತಿ ಕುರಿಯನ್ ಜೋಸೆಫ್ ಸುಪ್ರೀಂ ಕೋರ್ಟ್ನಲ್ಲಿ ಸೇವೆಯಲ್ಲಿದ್ದಾರೆ. ಈಗ ಕೆ.ಎಂ.ಜೋಸೆಫ್ ಅವರನ್ನೂ ನೇಮಕ ಮಾಡಿದರೆ ಅದು ಪ್ರಾದೆಶಿಕ ಅಸಮಾನತೆಯಾಗುತ್ತದೆ. ಸುಪ್ರೀಂ ಕೋರ್ಟ್ನಲ್ಲಿ ಪ್ರಾತಿನಿಧ್ಯವೇ ಇಲ್ಲದ ರಾಜ್ಯಗಳಿಂದ ನ್ಯಾಯಮೂರ್ತಿಗಳನ್ನು ಶಿಫಾರಸು ಮಾಡಿ. ಈ ಶಿಫಾರಸನ್ನು ಮರುಪರಿಶೀಲಿಸಿ’ ಎಂದು ಸರ್ಕಾರ ಸೂಚಿಸಿತ್ತು.