<p><strong>ನವದೆಹಲಿ:</strong> ರಾಜ್ಯಸಭೆಯಕಾಂಗ್ರೆಸ್ ಸದಸ್ಯ ಕೆ.ಸಿ. ರಾಮಮೂರ್ತಿಸದಸ್ಯತ್ವಕ್ಕೆ ಬುಧವಾರರಾಜೀನಾಮೆ ನೀಡಿದ್ದಾರೆ.ಬಿಜೆಪಿ ಸೇರಿಕೊಳ್ಳುವ ಉದ್ದೇಶದಿಂದ ಅವರು ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಹೇಳಲಾಗುತ್ತಿದೆ.</p>.<p>ಉಪರಾಷ್ಷ್ರಪತಿ ಎಂ.ವೆಂಕಯ್ಯ ನಾಯ್ಡು ಅವರಿಗೆ ರಾಮಮೂರ್ತಿ ರಾಜೀನಾಮೆ ಸಲ್ಲಿಸಿದರು.ನಿವೃತ್ತ ಐಪಿಎಸ್ ಅಧಿಕಾರಿ ರಾಮಮೂರ್ತಿ ಅವರನ್ನು 2016ರಲ್ಲಿ ಕಾಂಗ್ರೆಸ್ ಪಕ್ಷವು ರಾಜ್ಯದಿಂದ ಇವರನ್ನು ರಾಜ್ಯಸಭೆಗೆ ನೇಮಕ ಮಾಡಿತ್ತು.</p>.<p><strong>ಕಾಂಗ್ರೆಸ್ಗೂ ರಾಜೀನಾಮೆ ನೀಡಿದ್ದೇನೆ: ರಾಮಮೂರ್ತಿ</strong></p>.<p>‘ನಾನು ರಾಜ್ಯಸಭೆ ಸದಸ್ಯತ್ವಕ್ಕೆ ಮಾತ್ರವಲ್ಲ,ಕಾಂಗ್ರೆಸ್ ಪ್ರಾಥಮಿಕ ಸದಸ್ಯ ಸ್ಥಾನಕ್ಕೂ ರಾಜೀನಾಮೆ ನೀಡಿದ್ದೇನೆ.ರಾಜೀನಾಮೆ ಬಗ್ಗೆ ಸೋನಿಯಗಾಂಧಿ ಅವರ ಗಮನಕ್ಕೆ ತಂದಿದ್ದೇನೆ’ ಎಂದು ರಾಮಮೂರ್ತಿ ಹೇಳಿದರು.</p>.<p>ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿದ ಅವರು, ‘ಇದು ತಕ್ಷಣಕ್ಕೆ ತೆಗೆದುಕೊಂಡಿರುವ ನಿರ್ಧಾರ ಅಲ್ಲ.ಒಂದು ವರ್ಷಕ್ಕೂಹೆಚ್ಚು ಸಮಯ ಯೋಚನೆ ಮಾಡಿ ನಿರ್ಧಾರ ತೆಗೆದುಕೊಂಡಿದ್ದೇನೆ.ಈ ಬಗ್ಗೆ ಹಿಂದೆಯೇ ಕಾಂಗ್ರೆಸ್ ನಾಯಕರಿಗೆ ತಿಳಿಸಿದ್ದೆ.ಯಾರು ಗಂಭೀರವಾಗಿ ಪರಿಗಣಿಸಿರಲಿಲ್ಲ’ ಎಂದರು.</p>.<p>‘ದೇಶದ ಅಭಿವೃದ್ಧಿಯಲ್ಲಿ ಭಾಗಿಯಾಗುವ ದೃಷ್ಟಿಯಿಂದ ರಾಜೀನಾಮೆ ನೀಡಿದ್ದೇನೆ.ನನ್ನ ಅನುಭವವನ್ನು ಕಾಂಗ್ರೆಸ್ ಪಕ್ಷವು ಸಮರ್ಪಕವಾಗಿ ಬಳಸಿಕೊಂಡಿಲ್ಲ.ಬಿಜೆಪಿ ಸೇರುವ ಬಗ್ಗೆ ನನಗೆ ಒಲವು ಇದೆ. ನನ್ನ ಅನುಭವವನ್ನು ಅವರುಸಮರ್ಪಕವಾಗಿ ಬಳಸಿಕೊಳ್ಳುವುದಾದರೆ ಮಾತ್ರ ನಾನು ಬಿಜೆಪಿ ಸೇರಲು ಸಿದ್ಧ’ ಎಂದರು.</p>.<p>‘ಅಮಿತ್ ಶಾ ಅವರನ್ನು ಹಿಂದೆ ಹಲವುಕಾರಣಗಳಿಗಾಗಿಭೇಟಿ ಮಾಡಿದ್ದೇನೆ.ಬಿಜೆಪಿ ಕೆಲ ನಾಯಕರನ್ನು ಭೇಟಿ ಮಾಡಿದ್ದೆ.ಬಿಜೆಪಿ ಪಕ್ಷ ಸೇರುವ ಬಗ್ಗೆ ಇನ್ನೂ ಯಾರೊಂದಿಗೂ ಮಾತುಕತೆ ನಡೆಸಿಲ್ಲ. ಬಿಜೆಪಿ ಸೇರುವ ಬಗ್ಗೆ ಈಗಲೇ ಏನು ಹೇಳಲು ಸಾಧ್ಯವಿಲ್ಲ’ ಎಂದು ಹೇಳಿದರು.</p>.<p>‘ನಾನು ಯಾವುದೇ ಆಮಿಷಗಳಿಗೆ ಬಲಿಯಾಗಿಲ್ಲ. ರಾಜೀನಾಮೆ ನೀಡಲು ಯಾವುದೇ ಬೆದರಿಕೆಗಳು ಕಾರಣವಲ್ಲ’ ಎಂದು ನುಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ರಾಜ್ಯಸಭೆಯಕಾಂಗ್ರೆಸ್ ಸದಸ್ಯ ಕೆ.ಸಿ. ರಾಮಮೂರ್ತಿಸದಸ್ಯತ್ವಕ್ಕೆ ಬುಧವಾರರಾಜೀನಾಮೆ ನೀಡಿದ್ದಾರೆ.ಬಿಜೆಪಿ ಸೇರಿಕೊಳ್ಳುವ ಉದ್ದೇಶದಿಂದ ಅವರು ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಹೇಳಲಾಗುತ್ತಿದೆ.</p>.<p>ಉಪರಾಷ್ಷ್ರಪತಿ ಎಂ.ವೆಂಕಯ್ಯ ನಾಯ್ಡು ಅವರಿಗೆ ರಾಮಮೂರ್ತಿ ರಾಜೀನಾಮೆ ಸಲ್ಲಿಸಿದರು.ನಿವೃತ್ತ ಐಪಿಎಸ್ ಅಧಿಕಾರಿ ರಾಮಮೂರ್ತಿ ಅವರನ್ನು 2016ರಲ್ಲಿ ಕಾಂಗ್ರೆಸ್ ಪಕ್ಷವು ರಾಜ್ಯದಿಂದ ಇವರನ್ನು ರಾಜ್ಯಸಭೆಗೆ ನೇಮಕ ಮಾಡಿತ್ತು.</p>.<p><strong>ಕಾಂಗ್ರೆಸ್ಗೂ ರಾಜೀನಾಮೆ ನೀಡಿದ್ದೇನೆ: ರಾಮಮೂರ್ತಿ</strong></p>.<p>‘ನಾನು ರಾಜ್ಯಸಭೆ ಸದಸ್ಯತ್ವಕ್ಕೆ ಮಾತ್ರವಲ್ಲ,ಕಾಂಗ್ರೆಸ್ ಪ್ರಾಥಮಿಕ ಸದಸ್ಯ ಸ್ಥಾನಕ್ಕೂ ರಾಜೀನಾಮೆ ನೀಡಿದ್ದೇನೆ.ರಾಜೀನಾಮೆ ಬಗ್ಗೆ ಸೋನಿಯಗಾಂಧಿ ಅವರ ಗಮನಕ್ಕೆ ತಂದಿದ್ದೇನೆ’ ಎಂದು ರಾಮಮೂರ್ತಿ ಹೇಳಿದರು.</p>.<p>ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿದ ಅವರು, ‘ಇದು ತಕ್ಷಣಕ್ಕೆ ತೆಗೆದುಕೊಂಡಿರುವ ನಿರ್ಧಾರ ಅಲ್ಲ.ಒಂದು ವರ್ಷಕ್ಕೂಹೆಚ್ಚು ಸಮಯ ಯೋಚನೆ ಮಾಡಿ ನಿರ್ಧಾರ ತೆಗೆದುಕೊಂಡಿದ್ದೇನೆ.ಈ ಬಗ್ಗೆ ಹಿಂದೆಯೇ ಕಾಂಗ್ರೆಸ್ ನಾಯಕರಿಗೆ ತಿಳಿಸಿದ್ದೆ.ಯಾರು ಗಂಭೀರವಾಗಿ ಪರಿಗಣಿಸಿರಲಿಲ್ಲ’ ಎಂದರು.</p>.<p>‘ದೇಶದ ಅಭಿವೃದ್ಧಿಯಲ್ಲಿ ಭಾಗಿಯಾಗುವ ದೃಷ್ಟಿಯಿಂದ ರಾಜೀನಾಮೆ ನೀಡಿದ್ದೇನೆ.ನನ್ನ ಅನುಭವವನ್ನು ಕಾಂಗ್ರೆಸ್ ಪಕ್ಷವು ಸಮರ್ಪಕವಾಗಿ ಬಳಸಿಕೊಂಡಿಲ್ಲ.ಬಿಜೆಪಿ ಸೇರುವ ಬಗ್ಗೆ ನನಗೆ ಒಲವು ಇದೆ. ನನ್ನ ಅನುಭವವನ್ನು ಅವರುಸಮರ್ಪಕವಾಗಿ ಬಳಸಿಕೊಳ್ಳುವುದಾದರೆ ಮಾತ್ರ ನಾನು ಬಿಜೆಪಿ ಸೇರಲು ಸಿದ್ಧ’ ಎಂದರು.</p>.<p>‘ಅಮಿತ್ ಶಾ ಅವರನ್ನು ಹಿಂದೆ ಹಲವುಕಾರಣಗಳಿಗಾಗಿಭೇಟಿ ಮಾಡಿದ್ದೇನೆ.ಬಿಜೆಪಿ ಕೆಲ ನಾಯಕರನ್ನು ಭೇಟಿ ಮಾಡಿದ್ದೆ.ಬಿಜೆಪಿ ಪಕ್ಷ ಸೇರುವ ಬಗ್ಗೆ ಇನ್ನೂ ಯಾರೊಂದಿಗೂ ಮಾತುಕತೆ ನಡೆಸಿಲ್ಲ. ಬಿಜೆಪಿ ಸೇರುವ ಬಗ್ಗೆ ಈಗಲೇ ಏನು ಹೇಳಲು ಸಾಧ್ಯವಿಲ್ಲ’ ಎಂದು ಹೇಳಿದರು.</p>.<p>‘ನಾನು ಯಾವುದೇ ಆಮಿಷಗಳಿಗೆ ಬಲಿಯಾಗಿಲ್ಲ. ರಾಜೀನಾಮೆ ನೀಡಲು ಯಾವುದೇ ಬೆದರಿಕೆಗಳು ಕಾರಣವಲ್ಲ’ ಎಂದು ನುಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>