<p class="title"><strong>ಚೆನ್ನೈ: </strong>ಭಾರತೀಯ ಸೇನೆಯ ಮೊದಲ ಮುಖ್ಯಸ್ಥ, ಕೊಡಗಿನ ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಅವರ ಪ್ರತಿಮೆಯನ್ನು ಚೆನ್ನೈನಲ್ಲಿರುವ ಅಧಿಕಾರಿಗಳ ತರಬೇತಿ ಅಕಾಡೆಮಿಯಲ್ಲಿ ಶನಿವಾರ ಅನಾವರಣ ಮಾಡಲಾಯಿತು.</p>.<p class="title">ವಾಯುಪಡೆಯಲ್ಲಿ ಉನ್ನತ ಅಧಿಕಾರಿಯೂ ಆಗಿದ್ದ ಪುತ್ರ ಕೆ.ಸಿ.ಕಾರ್ಯಪ್ಪ ಅವರು ಪ್ರತಿಮೆಯನ್ನು ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ನಿವೃತ್ತ ಮೇಜರ್ ಜನರಲ್ ಟಿ.ಕೆ ಕೌಲ್ ಹಾಗೂ ವಿ.ಡಿ.ಚೌಗಲೆ ಪಾಲ್ಗೊಂಡಿದ್ದರು.</p>.<p>ಹಿಂದೆ ಇಲ್ಲಿ ತರಬೇತಿ ಪಡೆದವರು ಅಕಾಡೆಮಿಯ ಸುವರ್ಣಮಹೋತ್ಸವದ ಅಂಗವಾಗಿ ಈ ಪ್ರತಿಮೆಯನ್ನು ದಾನವಾಗಿ ನೀಡಿದ್ದಾರೆ.</p>.<p>ಕಾರ್ಯಪ್ಪ ಅವರು ಕರ್ನಾಟಕದ ಮಡಿಕೇರಿಯವರು. 1947ರಲ್ಲಿ ಪಾಕಿಸ್ತಾನದೊಂದಿಗೆ ಭಾರತ ಯುದ್ಧ ಆರಂಭಿಸಿದಾಗ ಇವರನ್ನು ಪಶ್ಚಿಮ ಸೈನ್ಯದ ಮುಖ್ಯಸ್ಥರನ್ನಾಗಿ ನೇಮಿಸಲಾಯಿತು. ಭಾರತದ ಸೇನೆಯ ಅಧಿಕಾರಿಗಳಲ್ಲಿ ಫೀಲ್ಡ್ ಮಾರ್ಷಲ್ ಗೌರವಕ್ಕೆ ಪಾತ್ರರಾದ ಇಬ್ಬರಲ್ಲಿ ಕಾರ್ಯಪ್ಪ ಸಹ ಒಬ್ಬರು.</p>.<p>ಸಮಾರಂಭದಲ್ಲಿ ಮಾತನಾಡಿದ ಕೆ.ಸಿ ಕಾರ್ಯಪ್ಪ ಅವರು, ನನ್ನ ತಂದೆ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಬಗ್ಗೆ ಬಹಳ ಗೌರವ ಹೊಂದಿದ್ದರು. ಅವರು ಭಾರತೀಯ ಸೈನ್ಯದ ದಂಡನಾಯಕರಾದ ಬಳಿಕ ನಮ್ಮನ್ನು ರಾಜ್ಘಾಟ್ಗೆ ಕರೆದೊಯ್ಯಿದಿದ್ದರು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಚೆನ್ನೈ: </strong>ಭಾರತೀಯ ಸೇನೆಯ ಮೊದಲ ಮುಖ್ಯಸ್ಥ, ಕೊಡಗಿನ ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಅವರ ಪ್ರತಿಮೆಯನ್ನು ಚೆನ್ನೈನಲ್ಲಿರುವ ಅಧಿಕಾರಿಗಳ ತರಬೇತಿ ಅಕಾಡೆಮಿಯಲ್ಲಿ ಶನಿವಾರ ಅನಾವರಣ ಮಾಡಲಾಯಿತು.</p>.<p class="title">ವಾಯುಪಡೆಯಲ್ಲಿ ಉನ್ನತ ಅಧಿಕಾರಿಯೂ ಆಗಿದ್ದ ಪುತ್ರ ಕೆ.ಸಿ.ಕಾರ್ಯಪ್ಪ ಅವರು ಪ್ರತಿಮೆಯನ್ನು ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ನಿವೃತ್ತ ಮೇಜರ್ ಜನರಲ್ ಟಿ.ಕೆ ಕೌಲ್ ಹಾಗೂ ವಿ.ಡಿ.ಚೌಗಲೆ ಪಾಲ್ಗೊಂಡಿದ್ದರು.</p>.<p>ಹಿಂದೆ ಇಲ್ಲಿ ತರಬೇತಿ ಪಡೆದವರು ಅಕಾಡೆಮಿಯ ಸುವರ್ಣಮಹೋತ್ಸವದ ಅಂಗವಾಗಿ ಈ ಪ್ರತಿಮೆಯನ್ನು ದಾನವಾಗಿ ನೀಡಿದ್ದಾರೆ.</p>.<p>ಕಾರ್ಯಪ್ಪ ಅವರು ಕರ್ನಾಟಕದ ಮಡಿಕೇರಿಯವರು. 1947ರಲ್ಲಿ ಪಾಕಿಸ್ತಾನದೊಂದಿಗೆ ಭಾರತ ಯುದ್ಧ ಆರಂಭಿಸಿದಾಗ ಇವರನ್ನು ಪಶ್ಚಿಮ ಸೈನ್ಯದ ಮುಖ್ಯಸ್ಥರನ್ನಾಗಿ ನೇಮಿಸಲಾಯಿತು. ಭಾರತದ ಸೇನೆಯ ಅಧಿಕಾರಿಗಳಲ್ಲಿ ಫೀಲ್ಡ್ ಮಾರ್ಷಲ್ ಗೌರವಕ್ಕೆ ಪಾತ್ರರಾದ ಇಬ್ಬರಲ್ಲಿ ಕಾರ್ಯಪ್ಪ ಸಹ ಒಬ್ಬರು.</p>.<p>ಸಮಾರಂಭದಲ್ಲಿ ಮಾತನಾಡಿದ ಕೆ.ಸಿ ಕಾರ್ಯಪ್ಪ ಅವರು, ನನ್ನ ತಂದೆ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಬಗ್ಗೆ ಬಹಳ ಗೌರವ ಹೊಂದಿದ್ದರು. ಅವರು ಭಾರತೀಯ ಸೈನ್ಯದ ದಂಡನಾಯಕರಾದ ಬಳಿಕ ನಮ್ಮನ್ನು ರಾಜ್ಘಾಟ್ಗೆ ಕರೆದೊಯ್ಯಿದಿದ್ದರು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>