<p><strong>ಹೈದರಾಬಾದ್:</strong> ಸಾಮಾಜಿಕ ಜಾಲತಾಣಗಳನ್ನು ಮಕ್ಕಳು ಹೆಚ್ಚಾಗಿ ಬಳಸುವುದರಿಂದ ಅವರ ಮೇಲೆ ಕೆಟ್ಟ ಪರಿಣಾಮ ಉಂಟಾಗುತ್ತದೆ. ಹಾಗಾಗಿ, ಬಳಕೆಯ ಮೇಲೆ ನಿಯಂತ್ರಣ ವಿಧಿಸುವುದಕ್ಕೆ ನನ್ನ ಬೆಂಬಲವಿದೆ ಎಂದು ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತ ಕೈಲಾಶ್ ಸತ್ಯಾರ್ಥಿ ಅವರು ಶನಿವಾರ ಹೇಳಿದ್ದಾರೆ.</p><p>ಕೈಲಾಶ್ ಸತ್ಯಾರ್ಥಿ ಅವರು ಹೈದರಾಬಾದ್ನಲ್ಲಿ ಜರುಗುತ್ತಿರುವ ಸಾಹಿತ್ಯ ಸಮ್ಮೇಳನದಲ್ಲಿ ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ಅವರ ‘ಕರುಣ; ದಿ ಪವರ್ ಆಫ್ ಕಂಪ್ಯಾಷನ್’ ಕೃತಿ ಬಿಡುಗಡೆಗೊಳಿಸಿ ಮಾತನಾಡಿದರು. </p><p>ಆಸ್ಟ್ರೇಲಿಯಾ ಸೇರಿದಂತೆ ಕೆಲವು ದೇಶಗಳು ಮಾಡಿದಂತೆ ಮಕ್ಕಳಿಗೆ ಸಾಮಾಜಿಕ ಜಾಲತಾಣಗಳನ್ನು ನಿರ್ಬಂಧಿಸಿ ಎಂದು ನಾನು ಹೇಳುತ್ತಿಲ್ಲ. ಆದರೆ, ಅದರ ಮೇಲೆ ಕೆಲವು ನಿಯಂತ್ರಣಗಳನ್ನು ಹೇರುವುದರಿಂದ ನೈತಿಕ ಮೌಲ್ಯಗಳನ್ನು ಹೊಂದಿರುವ ಸಮುದಾಯವನ್ನು ನಿರ್ಮಿಸಲು ಸಹಾಯ ಮಾಡುತ್ತದೆ ಎಂದು ಹೇಳಿದ್ದಾರೆ. </p><p>ಸಾಮಾಜಿಕ ಜಾಲತಾಣಗಳ ಮೂಲಕ ದ್ವೇಷ, ಅಶಾಂತಿ ಉಂಟು ಮಾಡುವ ಕೆಲಸವಾಗುತ್ತಿದೆ. ಸತ್ಯಕ್ಕಿಂತ ಹೆಚ್ಚು ಸುಳ್ಳು ಸುದ್ದಿಗಳು ಅದರಲ್ಲಿ ಹರಡುತ್ತವೆ. ಇದು ಮಕ್ಕಳ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಎಂದು ತಿಳಿಸಿದ್ದಾರೆ. </p><p>ಮಕ್ಕಳ ಕಳ್ಳಸಾಗಣೆ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಜಾಲತಾಣಗಳನ್ನು ಬಳಸಿಕೊಳ್ಳಲಾಗುತ್ತಿದೆ. ಇದರ ಮೇಲೆ ನಿಯಂತ್ರಣಕ್ಕೆ ಕ್ರಮ ತೆಗೆದುಕೊಳ್ಳಬೇಕು. ಈ ಕುರಿತು ಅಂತರರಾಷ್ಟ್ರೀಯ ಕಾನೂನು ಜಾರಿ ಮಾಡುವಂತೆ ನಾನು ಒತ್ತಾಯಿಸುತ್ತೇನೆ ಎಂದು ಹೇಳಿದ್ದಾರೆ. </p><p>ಇತ್ತೀಚೆಗೆ ಆಂಧ್ರಪ್ರದೇಶ ಸರ್ಕಾರವು 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆಗೆ ನಿರ್ಬಂಧ ವಿಧಿಸುವ ಕುರಿತು ವರದಿ ನೀಡುವಂತೆ ಸಮಿತಿಯನ್ನು ಕೂಡ ರಚಿಸಿತ್ತು. </p>.ಮಕ್ಕಳಿಗೆ ಆನ್ಲೈನ್ ನಿರ್ಬಂಧ: ಆಂಧ್ರ ಸರ್ಕಾರ ಚಿಂತನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್:</strong> ಸಾಮಾಜಿಕ ಜಾಲತಾಣಗಳನ್ನು ಮಕ್ಕಳು ಹೆಚ್ಚಾಗಿ ಬಳಸುವುದರಿಂದ ಅವರ ಮೇಲೆ ಕೆಟ್ಟ ಪರಿಣಾಮ ಉಂಟಾಗುತ್ತದೆ. ಹಾಗಾಗಿ, ಬಳಕೆಯ ಮೇಲೆ ನಿಯಂತ್ರಣ ವಿಧಿಸುವುದಕ್ಕೆ ನನ್ನ ಬೆಂಬಲವಿದೆ ಎಂದು ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತ ಕೈಲಾಶ್ ಸತ್ಯಾರ್ಥಿ ಅವರು ಶನಿವಾರ ಹೇಳಿದ್ದಾರೆ.</p><p>ಕೈಲಾಶ್ ಸತ್ಯಾರ್ಥಿ ಅವರು ಹೈದರಾಬಾದ್ನಲ್ಲಿ ಜರುಗುತ್ತಿರುವ ಸಾಹಿತ್ಯ ಸಮ್ಮೇಳನದಲ್ಲಿ ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ಅವರ ‘ಕರುಣ; ದಿ ಪವರ್ ಆಫ್ ಕಂಪ್ಯಾಷನ್’ ಕೃತಿ ಬಿಡುಗಡೆಗೊಳಿಸಿ ಮಾತನಾಡಿದರು. </p><p>ಆಸ್ಟ್ರೇಲಿಯಾ ಸೇರಿದಂತೆ ಕೆಲವು ದೇಶಗಳು ಮಾಡಿದಂತೆ ಮಕ್ಕಳಿಗೆ ಸಾಮಾಜಿಕ ಜಾಲತಾಣಗಳನ್ನು ನಿರ್ಬಂಧಿಸಿ ಎಂದು ನಾನು ಹೇಳುತ್ತಿಲ್ಲ. ಆದರೆ, ಅದರ ಮೇಲೆ ಕೆಲವು ನಿಯಂತ್ರಣಗಳನ್ನು ಹೇರುವುದರಿಂದ ನೈತಿಕ ಮೌಲ್ಯಗಳನ್ನು ಹೊಂದಿರುವ ಸಮುದಾಯವನ್ನು ನಿರ್ಮಿಸಲು ಸಹಾಯ ಮಾಡುತ್ತದೆ ಎಂದು ಹೇಳಿದ್ದಾರೆ. </p><p>ಸಾಮಾಜಿಕ ಜಾಲತಾಣಗಳ ಮೂಲಕ ದ್ವೇಷ, ಅಶಾಂತಿ ಉಂಟು ಮಾಡುವ ಕೆಲಸವಾಗುತ್ತಿದೆ. ಸತ್ಯಕ್ಕಿಂತ ಹೆಚ್ಚು ಸುಳ್ಳು ಸುದ್ದಿಗಳು ಅದರಲ್ಲಿ ಹರಡುತ್ತವೆ. ಇದು ಮಕ್ಕಳ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಎಂದು ತಿಳಿಸಿದ್ದಾರೆ. </p><p>ಮಕ್ಕಳ ಕಳ್ಳಸಾಗಣೆ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಜಾಲತಾಣಗಳನ್ನು ಬಳಸಿಕೊಳ್ಳಲಾಗುತ್ತಿದೆ. ಇದರ ಮೇಲೆ ನಿಯಂತ್ರಣಕ್ಕೆ ಕ್ರಮ ತೆಗೆದುಕೊಳ್ಳಬೇಕು. ಈ ಕುರಿತು ಅಂತರರಾಷ್ಟ್ರೀಯ ಕಾನೂನು ಜಾರಿ ಮಾಡುವಂತೆ ನಾನು ಒತ್ತಾಯಿಸುತ್ತೇನೆ ಎಂದು ಹೇಳಿದ್ದಾರೆ. </p><p>ಇತ್ತೀಚೆಗೆ ಆಂಧ್ರಪ್ರದೇಶ ಸರ್ಕಾರವು 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆಗೆ ನಿರ್ಬಂಧ ವಿಧಿಸುವ ಕುರಿತು ವರದಿ ನೀಡುವಂತೆ ಸಮಿತಿಯನ್ನು ಕೂಡ ರಚಿಸಿತ್ತು. </p>.ಮಕ್ಕಳಿಗೆ ಆನ್ಲೈನ್ ನಿರ್ಬಂಧ: ಆಂಧ್ರ ಸರ್ಕಾರ ಚಿಂತನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>