<p><strong>ಹೈದರಾಬಾದ್:</strong> ಕಾಳೇಶ್ವರಂ ಏತ ನೀರಾವರಿ ಯೋಜನೆ ಹಗರಣಕ್ಕೆ ಸಂಬಂಧಿಸಿದಂತೆ ಬಿಆರ್ಎಸ್ ಮುಖ್ಯಸ್ಥ ಕೆ.ಚಂದ್ರಶೇಖರ್ ರಾವ್ (ಕೆಸಿಆರ್) ಮತ್ತು ಇತರ ಮೂವರಿಗೆ ತೆಲಂಗಾಣ ಹೈಕೋರ್ಟ್ ಬುಧವಾರ ಬಿಗ್ ರಿಲೀಫ್ ನೀಡಿದೆ.</p><p>ನಿವೃತ್ತ ನ್ಯಾಯಮೂರ್ತಿ ಪಿ.ಸಿ.ಘೋಷ್ ಸಮಿತಿ ವರದಿ ಆಧಾರದ ಮೇಲೆ ಕೆಸಿಆರ್ ಮತ್ತು ಇತರರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಂತೆ ನ್ಯಾಯಾಲಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.</p><p>ಕೆಸಿಆರ್, ಮಾಜಿ ಸಚಿವ ಟಿ.ಹರೀಶ್ ರಾವ್ ಮತ್ತು ಇತರರು ಸಲ್ಲಿಸಿದ್ದ ಅರ್ಜಿಗಳನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಅಪರೇಶ್ ಕುಮಾರ್ ಸಿಂಗ್ ಮತ್ತು ನ್ಯಾಯಮೂರ್ತಿ ಜಿ.ಎಂ.ಮೊಹಿದ್ದಿನ್ ಅವರಿದ್ದ ವಿಭಾಗೀಯ ಪೀಠ ಈ ತೀರ್ಪು ನೀಡಿದೆ.</p><p>ಸಮಿತಿ ಸಲ್ಲಿಸಿರುವ ವರದಿಯಲ್ಲಿ ಕೆಲವು ಲೋಪಗಳಿದ್ದು ಅರ್ಜಿದಾರರ ವಿವರಣೆ ಪಡೆಯದೆ ವರದಿಯನ್ನು ನೀಡಲಾಗಿದೆ. ಇದನ್ನು ಆಧರಿಸಿ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.</p><p>ಆದಾಗ್ಯೂ, ತನಿಖಾ ಸಮಿತಿ ರಚನೆ ಕಾನೂನುಬಾಹಿರವೇನಲ್ಲ ಮತ್ತು ಅದು ಸಾಂವಿಧಾನಿಕವಾಗಿ ಸರಿಯಾಗಿದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.</p><p><strong>ಪ್ರಕರಣದ ಹಿನ್ನೆಲೆ:</strong> ಬಿಆರ್ಎಸ್ ಸರ್ಕಾರದ ಅವಧಿಯಲ್ಲಿ ನಿರ್ಮಿಸಲಾದ ಕಾಳೇಶ್ವರಂ ಏತ ನೀರಾವರಿ ಯೋಜನೆಯಲ್ಲಿ ಅಕ್ರಮಗಳು ನಡೆದಿವೆ ಎಂಬ ಆರೋಪದ ಮೇಲೆ ನಿವೃತ್ತ ನ್ಯಾಯಮೂರ್ತಿ ಪಿ.ಸಿ. ಘೋಷ್ ನೇತೃತ್ವದ ಸಮಿತಿಯು ತನಿಖೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿತ್ತು.</p><p>ಈ ವರದಿಯಲ್ಲಿ ಕೆಸಿಆರ್ ಮತ್ತು ಹರೀಶ್ ರಾವ್ ಸೇರಿದಂತೆ ಇತರರು ಯೋಜನೆಯ ಅಕ್ರಮಗಳಿಗೆ ಹೊಣೆಗಾರರಾಗಿದ್ದಾರೆ ಎಂದು ಸಮಿತಿ ತಿಳಿಸಿತ್ತು. ಈ ವರದಿಯ ಆಧಾರದ ಮೇಲೆ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಪ್ರಕರಣವನ್ನು ಸಿಬಿಐಗೆ ವಹಿಸುವುದಾಗಿ ಘೋಷಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್:</strong> ಕಾಳೇಶ್ವರಂ ಏತ ನೀರಾವರಿ ಯೋಜನೆ ಹಗರಣಕ್ಕೆ ಸಂಬಂಧಿಸಿದಂತೆ ಬಿಆರ್ಎಸ್ ಮುಖ್ಯಸ್ಥ ಕೆ.ಚಂದ್ರಶೇಖರ್ ರಾವ್ (ಕೆಸಿಆರ್) ಮತ್ತು ಇತರ ಮೂವರಿಗೆ ತೆಲಂಗಾಣ ಹೈಕೋರ್ಟ್ ಬುಧವಾರ ಬಿಗ್ ರಿಲೀಫ್ ನೀಡಿದೆ.</p><p>ನಿವೃತ್ತ ನ್ಯಾಯಮೂರ್ತಿ ಪಿ.ಸಿ.ಘೋಷ್ ಸಮಿತಿ ವರದಿ ಆಧಾರದ ಮೇಲೆ ಕೆಸಿಆರ್ ಮತ್ತು ಇತರರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಂತೆ ನ್ಯಾಯಾಲಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.</p><p>ಕೆಸಿಆರ್, ಮಾಜಿ ಸಚಿವ ಟಿ.ಹರೀಶ್ ರಾವ್ ಮತ್ತು ಇತರರು ಸಲ್ಲಿಸಿದ್ದ ಅರ್ಜಿಗಳನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಅಪರೇಶ್ ಕುಮಾರ್ ಸಿಂಗ್ ಮತ್ತು ನ್ಯಾಯಮೂರ್ತಿ ಜಿ.ಎಂ.ಮೊಹಿದ್ದಿನ್ ಅವರಿದ್ದ ವಿಭಾಗೀಯ ಪೀಠ ಈ ತೀರ್ಪು ನೀಡಿದೆ.</p><p>ಸಮಿತಿ ಸಲ್ಲಿಸಿರುವ ವರದಿಯಲ್ಲಿ ಕೆಲವು ಲೋಪಗಳಿದ್ದು ಅರ್ಜಿದಾರರ ವಿವರಣೆ ಪಡೆಯದೆ ವರದಿಯನ್ನು ನೀಡಲಾಗಿದೆ. ಇದನ್ನು ಆಧರಿಸಿ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.</p><p>ಆದಾಗ್ಯೂ, ತನಿಖಾ ಸಮಿತಿ ರಚನೆ ಕಾನೂನುಬಾಹಿರವೇನಲ್ಲ ಮತ್ತು ಅದು ಸಾಂವಿಧಾನಿಕವಾಗಿ ಸರಿಯಾಗಿದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.</p><p><strong>ಪ್ರಕರಣದ ಹಿನ್ನೆಲೆ:</strong> ಬಿಆರ್ಎಸ್ ಸರ್ಕಾರದ ಅವಧಿಯಲ್ಲಿ ನಿರ್ಮಿಸಲಾದ ಕಾಳೇಶ್ವರಂ ಏತ ನೀರಾವರಿ ಯೋಜನೆಯಲ್ಲಿ ಅಕ್ರಮಗಳು ನಡೆದಿವೆ ಎಂಬ ಆರೋಪದ ಮೇಲೆ ನಿವೃತ್ತ ನ್ಯಾಯಮೂರ್ತಿ ಪಿ.ಸಿ. ಘೋಷ್ ನೇತೃತ್ವದ ಸಮಿತಿಯು ತನಿಖೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿತ್ತು.</p><p>ಈ ವರದಿಯಲ್ಲಿ ಕೆಸಿಆರ್ ಮತ್ತು ಹರೀಶ್ ರಾವ್ ಸೇರಿದಂತೆ ಇತರರು ಯೋಜನೆಯ ಅಕ್ರಮಗಳಿಗೆ ಹೊಣೆಗಾರರಾಗಿದ್ದಾರೆ ಎಂದು ಸಮಿತಿ ತಿಳಿಸಿತ್ತು. ಈ ವರದಿಯ ಆಧಾರದ ಮೇಲೆ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಪ್ರಕರಣವನ್ನು ಸಿಬಿಐಗೆ ವಹಿಸುವುದಾಗಿ ಘೋಷಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>