<p><strong>ನವದೆಹಲಿ:</strong> ಕಾಳೇಶ್ವರಂ ಏತ ನೀರಾವರಿ ಯೋಜನೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ತನಿಖೆ ಪ್ರಗತಿಯಲ್ಲಿದ್ದು, ಈವರೆಗೆ ಕೇವಲ ಸಣ್ಣ ಮೀನುಗಳನ್ನು ಮಾತ್ರ ಹಿಡಿಯಲಾಗಿದೆ ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಹೇಳಿದ್ದಾರೆ.</p>.ಕಾಳೇಶ್ವರಂ ಯೋಜನೆ: ಆಯೋಗದ ಮುಂದೆ ಹಾಜರಾದ ಕೆಸಿಆರ್.<p>ತನಿಖೆ ಯಾವ ಹಂತದಲ್ಲಿದೆ ಎನ್ನುವ ಪ್ರಶ್ನೆಗೆ ಸಿನಿಮಾ ಸಾದೃಶ್ಯವನ್ನು ಉಲ್ಲೇಖಿಸಿ ರೆಡ್ಡಿ ಉತ್ತರಿಸಿದ್ದಾರೆ. ‘ಸಿನಿಮಾದಲ್ಲಿ ಯಾವತ್ತೂ ವಿಲನ್ ಮೊದಲಿಗೆ ಸಾಯುವುದಿಲ್ಲ. ನೀವು ಸಿನಿಮಾ ನೋಡುವುದಿಲ್ಲವೇ? ದೆಹಲಿ ಅಬಕಾರಿ ಹಗರಣದಲ್ಲಿ ಅರವಿಂದ ಕೇಜ್ರಿವಾಲ್ ಅವರನ್ನು ಕೊನೆಗೆ ಬಂಧಿಸಲಾಗಿತ್ತು’ ಎಂದು ರೆಡ್ಡಿ ಹೇಳಿದ್ದಾರೆ.</p><p>ತನಿಖೆಯ ಭಾಗವಾಗಿ ನಡೆದ ದಾಳಿಯಲ್ಲಿ ಅಧಿಕಾರಿಗಳ ಮನೆಯಲ್ಲಿ ಹೆಚ್ಚಿನ ಆಸ್ತಿಗಳು ಪತ್ತೆಯಾಗಿವೆ. ನ್ಯಾಯಮೂರ್ತಿ ಪಿ.ಸಿ. ಘೋಷ್ ಸಮಿತಿ ನಿರಂತರವಾಗಿ ವಿಚಾರಣೆಗಳನ್ನು ನಡೆಸುತ್ತಿದ್ದು, ಹೆಚ್ಚಿನ ಮಾಹಿತಿ ಹಾಗೂ ಸ್ಪಷ್ಟೀಕರಣಗಳು ಲಭ್ಯವಾಗುತ್ತಿವೆ ಎಂದು ತಿಳಿಸಿದ್ದಾರೆ.</p>.ಕಾಳೇಶ್ವರಂ ಯೋಜನೆ ಕೆಸಿಆರ್ ಅವರ ಎಟಿಎಂ: ರಾಹುಲ್ ಗಾಂಧಿ.<p>ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರು ಜೂನ್ 11 ರಂದು ಆಯೋಗದ ಮುಂದೆ ವಿಚಾರಣೆಗೆ ಹಾಜರಾಗಿದ್ದರು. ಮಾಜಿ ನೀರಾವರಿ ಸಚಿವ ಟಿ. ಹರೀಶ್ ರಾವ್ ಸೇರಿ ಎಂಜಿನಿಯರ್ಗಳು, ಅಧಿಕಾರಿಗಳು ಹಲವು ಬಾರಿ ಆಯೋಗದಿಂದ ವಿಚಾರಣೆಗೆ ಒಳಪಟ್ಟಿದ್ದಾರೆ.</p><p>ವಿಚಾರಣೆ ಪೂರ್ಣಗೊಳಿಸಲು ಘೋಷ್ ಆಯೋಗದ ಅವಧಿಯನ್ನು ಜುಲೈ 31, 2025ರವರೆಗೆ ವಿಸ್ತರಿಸಲಾಗಿದೆ.</p>.ಕಾಳೇಶ್ವರಂ ಯೋಜನೆ ಉದ್ಘಾಟನೆ.<p>ಪ್ರಕರಣದ ತನಿಖೆಯನ್ನು ಇ.ಡಿಗೆ ವರ್ಗಾಯಿಸಬೇಕು ಎನ್ನುವ ಬಿಜೆಪಿಯ ಆಗ್ರಹದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಕೇಂದ್ರ ಸಚಿವ ಜಿ. ಕಿಶನ್ ರೆಡ್ಡಿಯವರು ಕೆಸಿಆರ್ ಅವರನ್ನು ರಕ್ಷಿಸಲು ಈ ಬೇಡಿಕೆ ಇಡುತ್ತಿದ್ದಾರೆ. ಹಾಗಿದ್ದರೆ ಫಾರ್ಮುಲ–ಇ ರೇಸ್ ಹಾಗೂ ಕುರಿ ಖರೀದಿಯಲ್ಲಿ ನಡೆದಿದೆ ಎನ್ನುವ ಭ್ರಷ್ಟಾಚಾರದ ಬಗ್ಗೆ ಇ.ಡಿ ತನಿಖೆ ಏಕೆ ಮಾಡುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.</p> .ತೆಲಂಗಾಣ ಮಾಜಿ ಸಿಎಂ ಕೆಸಿಆರ್ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿದ್ದವನ ಬರ್ಬರ ಕೊಲೆ!.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕಾಳೇಶ್ವರಂ ಏತ ನೀರಾವರಿ ಯೋಜನೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ತನಿಖೆ ಪ್ರಗತಿಯಲ್ಲಿದ್ದು, ಈವರೆಗೆ ಕೇವಲ ಸಣ್ಣ ಮೀನುಗಳನ್ನು ಮಾತ್ರ ಹಿಡಿಯಲಾಗಿದೆ ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಹೇಳಿದ್ದಾರೆ.</p>.ಕಾಳೇಶ್ವರಂ ಯೋಜನೆ: ಆಯೋಗದ ಮುಂದೆ ಹಾಜರಾದ ಕೆಸಿಆರ್.<p>ತನಿಖೆ ಯಾವ ಹಂತದಲ್ಲಿದೆ ಎನ್ನುವ ಪ್ರಶ್ನೆಗೆ ಸಿನಿಮಾ ಸಾದೃಶ್ಯವನ್ನು ಉಲ್ಲೇಖಿಸಿ ರೆಡ್ಡಿ ಉತ್ತರಿಸಿದ್ದಾರೆ. ‘ಸಿನಿಮಾದಲ್ಲಿ ಯಾವತ್ತೂ ವಿಲನ್ ಮೊದಲಿಗೆ ಸಾಯುವುದಿಲ್ಲ. ನೀವು ಸಿನಿಮಾ ನೋಡುವುದಿಲ್ಲವೇ? ದೆಹಲಿ ಅಬಕಾರಿ ಹಗರಣದಲ್ಲಿ ಅರವಿಂದ ಕೇಜ್ರಿವಾಲ್ ಅವರನ್ನು ಕೊನೆಗೆ ಬಂಧಿಸಲಾಗಿತ್ತು’ ಎಂದು ರೆಡ್ಡಿ ಹೇಳಿದ್ದಾರೆ.</p><p>ತನಿಖೆಯ ಭಾಗವಾಗಿ ನಡೆದ ದಾಳಿಯಲ್ಲಿ ಅಧಿಕಾರಿಗಳ ಮನೆಯಲ್ಲಿ ಹೆಚ್ಚಿನ ಆಸ್ತಿಗಳು ಪತ್ತೆಯಾಗಿವೆ. ನ್ಯಾಯಮೂರ್ತಿ ಪಿ.ಸಿ. ಘೋಷ್ ಸಮಿತಿ ನಿರಂತರವಾಗಿ ವಿಚಾರಣೆಗಳನ್ನು ನಡೆಸುತ್ತಿದ್ದು, ಹೆಚ್ಚಿನ ಮಾಹಿತಿ ಹಾಗೂ ಸ್ಪಷ್ಟೀಕರಣಗಳು ಲಭ್ಯವಾಗುತ್ತಿವೆ ಎಂದು ತಿಳಿಸಿದ್ದಾರೆ.</p>.ಕಾಳೇಶ್ವರಂ ಯೋಜನೆ ಕೆಸಿಆರ್ ಅವರ ಎಟಿಎಂ: ರಾಹುಲ್ ಗಾಂಧಿ.<p>ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರು ಜೂನ್ 11 ರಂದು ಆಯೋಗದ ಮುಂದೆ ವಿಚಾರಣೆಗೆ ಹಾಜರಾಗಿದ್ದರು. ಮಾಜಿ ನೀರಾವರಿ ಸಚಿವ ಟಿ. ಹರೀಶ್ ರಾವ್ ಸೇರಿ ಎಂಜಿನಿಯರ್ಗಳು, ಅಧಿಕಾರಿಗಳು ಹಲವು ಬಾರಿ ಆಯೋಗದಿಂದ ವಿಚಾರಣೆಗೆ ಒಳಪಟ್ಟಿದ್ದಾರೆ.</p><p>ವಿಚಾರಣೆ ಪೂರ್ಣಗೊಳಿಸಲು ಘೋಷ್ ಆಯೋಗದ ಅವಧಿಯನ್ನು ಜುಲೈ 31, 2025ರವರೆಗೆ ವಿಸ್ತರಿಸಲಾಗಿದೆ.</p>.ಕಾಳೇಶ್ವರಂ ಯೋಜನೆ ಉದ್ಘಾಟನೆ.<p>ಪ್ರಕರಣದ ತನಿಖೆಯನ್ನು ಇ.ಡಿಗೆ ವರ್ಗಾಯಿಸಬೇಕು ಎನ್ನುವ ಬಿಜೆಪಿಯ ಆಗ್ರಹದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಕೇಂದ್ರ ಸಚಿವ ಜಿ. ಕಿಶನ್ ರೆಡ್ಡಿಯವರು ಕೆಸಿಆರ್ ಅವರನ್ನು ರಕ್ಷಿಸಲು ಈ ಬೇಡಿಕೆ ಇಡುತ್ತಿದ್ದಾರೆ. ಹಾಗಿದ್ದರೆ ಫಾರ್ಮುಲ–ಇ ರೇಸ್ ಹಾಗೂ ಕುರಿ ಖರೀದಿಯಲ್ಲಿ ನಡೆದಿದೆ ಎನ್ನುವ ಭ್ರಷ್ಟಾಚಾರದ ಬಗ್ಗೆ ಇ.ಡಿ ತನಿಖೆ ಏಕೆ ಮಾಡುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.</p> .ತೆಲಂಗಾಣ ಮಾಜಿ ಸಿಎಂ ಕೆಸಿಆರ್ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿದ್ದವನ ಬರ್ಬರ ಕೊಲೆ!.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>