ಚೆನ್ನೈ: ‘ಕೊರೊನಾದಿಂದಾಗಿ ಸೃಷ್ಟಿಯಾಗಿರುವ ಬಿಕ್ಕಟ್ಟಿನಿಂದ ಜನರ ಬದುಕು ದುಸ್ತರವಾಗಿದೆ. ದೇಶದ ಬಹುಪಾಲು ಮಂದಿ ಹಸಿವಿನಿಂದ ನರಳುತ್ತಿದ್ದಾರೆ. ಇಂತಹ ಸಮಯದಲ್ಲಿ ಸುಮಾರು ₹1,000 ಕೋಟಿ ವೆಚ್ಚದಲ್ಲಿ ನೂತನ ಸಂಸತ್ ಭವನದ ಕಟ್ಟಡ ನಿರ್ಮಿಸುವ ಅಗತ್ಯವಾದರೂ ಏನಿದೆ? ಇದರ ಹಿಂದಿನ ಉದ್ದೇಶವಾದರೂ ಏನು?’ ಎಂದು ತಮಿಳು ನಟ ಕಮಲ್ ಹಾಸನ್, ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನಿಸಿದ್ದಾರೆ.