<p><strong>ಬೆಂಗಳೂರು</strong>: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ 108 ಸ್ಥಾನಗಳನ್ನು ಗೆದ್ದಿರುವ ಟಿವಿಕೆ ನಾಯಕ ವಿಜಯ್ ಅವರನ್ನು ಸರ್ಕಾರ ರಚಿಸಲು ಆಹ್ವಾನಿಸದಿರುವುದು ತಮಿಳುನಾಡಿನ ಜನರ ಜನಾದೇಶವನ್ನು ಅಗೌರವಗೊಳಿಸಿದಂತೆ ಎಂದು ನಟ ಹಾಗೂ ಡಿಎಂಕೆ ಸಹವರ್ತಿ ಕಮಲ್ ಹಾಸನ್ ರಾಜ್ಯಪಾಲರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p><p>ಅಲ್ಲದೇ ಅವರು ರಾಜ್ಯಪಾಲರಿಗೆ ಎಸ್.ಆರ್. ಬೊಮ್ಮಾಯಿ ಪ್ರಕರಣವನ್ನು ನೆನಪಿಸಿದ್ದಾರೆ. ಬಹುಮತ ಸಾಬೀತುಪಡಿಸುವುದು ರಾಜ್ಯಪಾಲರ ಕಚೇರಿಯಲ್ಲಿ ಅಲ್ಲ, ವಿಧಾನಸಭೆಯಲ್ಲಿ ಎಂದು ಬೊಮ್ಮಾಯಿ ಪ್ರಕರಣ ಹೇಳುತ್ತದೆ.</p><p>ತಮಿಳುನಾಡು ರಾಜ್ಯಪಾಲರ ನಡೆಯಿಂದ 233 ಚುನಾಯಿತ ಸದಸ್ಯರು ಇನ್ನೂ ಪ್ರಮಾಣ ವಚನ ಸ್ವೀಕರಿಸಲು ಸಾಧ್ಯವಾಗುತ್ತಿಲ್ಲ. ಇದು ರಾಜ್ಯಕ್ಕೆ ಮಾಡಿದ ಅವಮಾನ ಎಂದು ಕಮಲ್ ಹಾಸನ್ ಕಿಡಿಕಾರಿದ್ದಾರೆ.</p><p>ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ, ಜನರು ಯಾವುದೇ ಒಂದು ಪಕ್ಷಕ್ಕೆ ಸ್ವತಂತ್ರವಾಗಿ ಸರ್ಕಾರ ರಚಿಸುವ ಅಧಿಕಾರವನ್ನು ನೀಡಿಲ್ಲ. ಈ ಫಲಿತಾಂಶ ತಮಿಳುನಾಡಿನ ಇತಿಹಾಸದಲ್ಲಿ ಅಭೂತಪೂರ್ವವಾಗಿದೆ. ಆದರೂ ನಮ್ಮ ಡಿಎಂಕೆ ಒಕ್ಕೂಟ ಟಿವಿಕೆ ಅಧಿಕಾರ ರಚಿಸಲು ಪ್ರೇರೆಪಿಸುತ್ತದೆ ಎಂದಿದ್ದಾರೆ.</p><p>ನಾನು ಈ ವಿಷಯದಲ್ಲಿ ರಾಜಕೀಯ ಮಾತನಾಡುತ್ತಿಲ್ಲ. ಇದು ಭಾರತೀಯ ನಾಗರಿಕನೊಬ್ಬನ ಒತ್ತಾಸೆ ತಮಿಳುನಾಡಿನ ಜನರ ತೀರ್ಪನ್ನು ರಾಜ್ಯಪಾಲರು ಗೌರವಿಸಬೇಕು ಎಂದು ಆಗ್ರಹಿಸಿದ್ದಾರೆ. ಈ ಕುರಿತು ಅವರು ಟ್ವೀಟ್ ಮಾಡಿದ್ದಾರೆ.</p>.ಸರ್ಕಾರ ರಚನೆಯಿಂದ TVK ತಡೆಯುವ ಅಧಿಕಾರ ರಾಜ್ಯಪಾಲರಿಗಿದೆಯೇ? ಹೀಗೊಂದು ಲೆಕ್ಕಾಚಾರ.ತಮಿಳುನಾಡು ಸರ್ಕಾರ ರಚನೆಗೆ ಕಸರತ್ತು: ರಾಜ್ಯಪಾಲರ ಮುಂದಿರುವ ಆಯ್ಕೆಗಳೇನು? .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ 108 ಸ್ಥಾನಗಳನ್ನು ಗೆದ್ದಿರುವ ಟಿವಿಕೆ ನಾಯಕ ವಿಜಯ್ ಅವರನ್ನು ಸರ್ಕಾರ ರಚಿಸಲು ಆಹ್ವಾನಿಸದಿರುವುದು ತಮಿಳುನಾಡಿನ ಜನರ ಜನಾದೇಶವನ್ನು ಅಗೌರವಗೊಳಿಸಿದಂತೆ ಎಂದು ನಟ ಹಾಗೂ ಡಿಎಂಕೆ ಸಹವರ್ತಿ ಕಮಲ್ ಹಾಸನ್ ರಾಜ್ಯಪಾಲರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p><p>ಅಲ್ಲದೇ ಅವರು ರಾಜ್ಯಪಾಲರಿಗೆ ಎಸ್.ಆರ್. ಬೊಮ್ಮಾಯಿ ಪ್ರಕರಣವನ್ನು ನೆನಪಿಸಿದ್ದಾರೆ. ಬಹುಮತ ಸಾಬೀತುಪಡಿಸುವುದು ರಾಜ್ಯಪಾಲರ ಕಚೇರಿಯಲ್ಲಿ ಅಲ್ಲ, ವಿಧಾನಸಭೆಯಲ್ಲಿ ಎಂದು ಬೊಮ್ಮಾಯಿ ಪ್ರಕರಣ ಹೇಳುತ್ತದೆ.</p><p>ತಮಿಳುನಾಡು ರಾಜ್ಯಪಾಲರ ನಡೆಯಿಂದ 233 ಚುನಾಯಿತ ಸದಸ್ಯರು ಇನ್ನೂ ಪ್ರಮಾಣ ವಚನ ಸ್ವೀಕರಿಸಲು ಸಾಧ್ಯವಾಗುತ್ತಿಲ್ಲ. ಇದು ರಾಜ್ಯಕ್ಕೆ ಮಾಡಿದ ಅವಮಾನ ಎಂದು ಕಮಲ್ ಹಾಸನ್ ಕಿಡಿಕಾರಿದ್ದಾರೆ.</p><p>ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ, ಜನರು ಯಾವುದೇ ಒಂದು ಪಕ್ಷಕ್ಕೆ ಸ್ವತಂತ್ರವಾಗಿ ಸರ್ಕಾರ ರಚಿಸುವ ಅಧಿಕಾರವನ್ನು ನೀಡಿಲ್ಲ. ಈ ಫಲಿತಾಂಶ ತಮಿಳುನಾಡಿನ ಇತಿಹಾಸದಲ್ಲಿ ಅಭೂತಪೂರ್ವವಾಗಿದೆ. ಆದರೂ ನಮ್ಮ ಡಿಎಂಕೆ ಒಕ್ಕೂಟ ಟಿವಿಕೆ ಅಧಿಕಾರ ರಚಿಸಲು ಪ್ರೇರೆಪಿಸುತ್ತದೆ ಎಂದಿದ್ದಾರೆ.</p><p>ನಾನು ಈ ವಿಷಯದಲ್ಲಿ ರಾಜಕೀಯ ಮಾತನಾಡುತ್ತಿಲ್ಲ. ಇದು ಭಾರತೀಯ ನಾಗರಿಕನೊಬ್ಬನ ಒತ್ತಾಸೆ ತಮಿಳುನಾಡಿನ ಜನರ ತೀರ್ಪನ್ನು ರಾಜ್ಯಪಾಲರು ಗೌರವಿಸಬೇಕು ಎಂದು ಆಗ್ರಹಿಸಿದ್ದಾರೆ. ಈ ಕುರಿತು ಅವರು ಟ್ವೀಟ್ ಮಾಡಿದ್ದಾರೆ.</p>.ಸರ್ಕಾರ ರಚನೆಯಿಂದ TVK ತಡೆಯುವ ಅಧಿಕಾರ ರಾಜ್ಯಪಾಲರಿಗಿದೆಯೇ? ಹೀಗೊಂದು ಲೆಕ್ಕಾಚಾರ.ತಮಿಳುನಾಡು ಸರ್ಕಾರ ರಚನೆಗೆ ಕಸರತ್ತು: ರಾಜ್ಯಪಾಲರ ಮುಂದಿರುವ ಆಯ್ಕೆಗಳೇನು? .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>