<p><strong>ಚೆನ್ನೈ</strong>: ನಟ-ರಾಜಕಾರಣಿ ಕಮಲ್ ಹಾಸನ್ ನೇತೃತ್ವದ ಮಕ್ಕಳ್ ನೀದಿ ಮೈಯಂ(ಎಂಎನ್ಎಂ) ಪಕ್ಷವು, ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಡಿಎಂಕೆ ಪಕ್ಷದೊಂದಿಗೆ ಸ್ಥಾನ ಹಂಚಿಕೆ ಕುರಿತು ಮಾತುಕತೆ ನಡೆಸಿದೆ.</p>.<p>ಪಕ್ಷದ ಪ್ರಧಾನ ಕಾರ್ಯದರ್ಶಿ ಎ. ಅರುಣಾಚಲಂ, ‘ನಿವೃತ್ತ ಐಪಿಎಸ್ ಅಧಿಕಾರಿ ಎ.ಜಿ. ಮೌರ್ಯ ಸೇರಿದಂತೆ ಪಕ್ಷದ ಹಿರಿಯ ಸಹದ್ಯೋಗಿಗಳೊಂದಿಗೆ ಎಂಎನ್ಎಂ ಮೈತ್ರಿ ಬಲಪಡಿಸುವುದು ಹೇಗೆ ಎಂಬುದರ ಬಗ್ಗೆ ಚರ್ಚಿಸಿ, ಆ ವಿವರಗಳನ್ನು ಡಿಎಂಕೆ ಪಕ್ಷದ ಖಜಾಂಚಿ ಟಿ.ಆರ್. ಬಾಲು ನೇತೃತ್ವದ ಸಮಿತಿಗೆ ನೀಡಿದ್ದೇನೆ’ ಎಂದು ತಿಳಿಸಿದರು.</p>.<p>ಇಲ್ಲಿನ ಅಣ್ಣಾ ಅರಿವಲಯಂನಲ್ಲಿರುವ ಡಿಎಂಕೆ ಪ್ರಧಾನ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅರುಣಾಚಲಂ, ‘ಎಂಎನ್ಎಂ– ಡಿಎಂಕೆ ಮೈತ್ರಿಯನ್ನು ಬಲಗೊಳಿಸುವುದು ಹೇಗೆ ಎಂಬುದರ ಕುರಿತು ಬುಧವಾರ ಡಿಎಂಕೆ ಸೀಟು ಹಂಚಿಕೆ ಸಮಿತಿ ಮತ್ತು ಎಂಎನ್ಎಂ ಸಮಿತಿ ನಡುವೆ ಚರ್ಚೆ ನಡೆಯಿತು. ಈ ಬಗ್ಗೆ ನಾವು ಕೆಲವು ದತ್ತಾಂಶಗಳನ್ನು ಒದಗಿಸಿದ್ದೇವೆ. ಈ ವಿವರಗಳನ್ನು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರ ಎದುರು ಪ್ರಸ್ತುತಪಡಿಸುವುದಾಗಿ ಡಿಎಂಕೆ ನಾಯಕರು ತಿಳಿಸಿದ್ದಾರೆ’ ಎಂದು ಹೇಳಿದರು.</p>.<p>ನಮ್ಮ ಪಕ್ಷದ ನಾಯಕ ಕಮಲ ಹಾಸನ್ ಅವರ ನಿರ್ದೇಶನದಂತೆ, ಮೈತ್ರಿ ಕುರಿತ ದತ್ತಾಂಶಗಳನ್ನು ಡಿಎಂಕೆ ಸಮಿತಿಗೆ ಸಲ್ಲಿಸಿದ್ದೇವೆ. ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ನಿರೀಕ್ಷೆಯಲ್ಲಿದ್ದೇವೆ’ ಎಂದು ಅವರು ತಿಳಿಸಿದರು.</p>.<p>’ಎಂಎನ್ಎಂ ಎಷ್ಟು ಸ್ಥಾನಗಳಲ್ಲಿ ಸ್ಪರ್ಧಿಸಲು ಯೋಜಿಸುತ್ತಿದೆ’ ಎಂಬ ಸುದ್ದಿಗಾರರ ಪ್ರಶ್ನೆಗೆ ಅರುಣಾಚಲಂ, ‘ಇಂದು ಪ್ರಾಥಮಿಕ ಹಂತದ ಮಾತುಕತೆ ನಡೆದಿದೆ. ಆ ವಿವರಗಳನ್ನು ನಾವು ಸಾರ್ವಜನಿಕವಾಗಿ ಹಂಚಿಕೊಳ್ಳಲು ಸಾಧ್ಯವಿಲ್ಲ’ ಎಂದು ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ</strong>: ನಟ-ರಾಜಕಾರಣಿ ಕಮಲ್ ಹಾಸನ್ ನೇತೃತ್ವದ ಮಕ್ಕಳ್ ನೀದಿ ಮೈಯಂ(ಎಂಎನ್ಎಂ) ಪಕ್ಷವು, ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಡಿಎಂಕೆ ಪಕ್ಷದೊಂದಿಗೆ ಸ್ಥಾನ ಹಂಚಿಕೆ ಕುರಿತು ಮಾತುಕತೆ ನಡೆಸಿದೆ.</p>.<p>ಪಕ್ಷದ ಪ್ರಧಾನ ಕಾರ್ಯದರ್ಶಿ ಎ. ಅರುಣಾಚಲಂ, ‘ನಿವೃತ್ತ ಐಪಿಎಸ್ ಅಧಿಕಾರಿ ಎ.ಜಿ. ಮೌರ್ಯ ಸೇರಿದಂತೆ ಪಕ್ಷದ ಹಿರಿಯ ಸಹದ್ಯೋಗಿಗಳೊಂದಿಗೆ ಎಂಎನ್ಎಂ ಮೈತ್ರಿ ಬಲಪಡಿಸುವುದು ಹೇಗೆ ಎಂಬುದರ ಬಗ್ಗೆ ಚರ್ಚಿಸಿ, ಆ ವಿವರಗಳನ್ನು ಡಿಎಂಕೆ ಪಕ್ಷದ ಖಜಾಂಚಿ ಟಿ.ಆರ್. ಬಾಲು ನೇತೃತ್ವದ ಸಮಿತಿಗೆ ನೀಡಿದ್ದೇನೆ’ ಎಂದು ತಿಳಿಸಿದರು.</p>.<p>ಇಲ್ಲಿನ ಅಣ್ಣಾ ಅರಿವಲಯಂನಲ್ಲಿರುವ ಡಿಎಂಕೆ ಪ್ರಧಾನ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅರುಣಾಚಲಂ, ‘ಎಂಎನ್ಎಂ– ಡಿಎಂಕೆ ಮೈತ್ರಿಯನ್ನು ಬಲಗೊಳಿಸುವುದು ಹೇಗೆ ಎಂಬುದರ ಕುರಿತು ಬುಧವಾರ ಡಿಎಂಕೆ ಸೀಟು ಹಂಚಿಕೆ ಸಮಿತಿ ಮತ್ತು ಎಂಎನ್ಎಂ ಸಮಿತಿ ನಡುವೆ ಚರ್ಚೆ ನಡೆಯಿತು. ಈ ಬಗ್ಗೆ ನಾವು ಕೆಲವು ದತ್ತಾಂಶಗಳನ್ನು ಒದಗಿಸಿದ್ದೇವೆ. ಈ ವಿವರಗಳನ್ನು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರ ಎದುರು ಪ್ರಸ್ತುತಪಡಿಸುವುದಾಗಿ ಡಿಎಂಕೆ ನಾಯಕರು ತಿಳಿಸಿದ್ದಾರೆ’ ಎಂದು ಹೇಳಿದರು.</p>.<p>ನಮ್ಮ ಪಕ್ಷದ ನಾಯಕ ಕಮಲ ಹಾಸನ್ ಅವರ ನಿರ್ದೇಶನದಂತೆ, ಮೈತ್ರಿ ಕುರಿತ ದತ್ತಾಂಶಗಳನ್ನು ಡಿಎಂಕೆ ಸಮಿತಿಗೆ ಸಲ್ಲಿಸಿದ್ದೇವೆ. ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ನಿರೀಕ್ಷೆಯಲ್ಲಿದ್ದೇವೆ’ ಎಂದು ಅವರು ತಿಳಿಸಿದರು.</p>.<p>’ಎಂಎನ್ಎಂ ಎಷ್ಟು ಸ್ಥಾನಗಳಲ್ಲಿ ಸ್ಪರ್ಧಿಸಲು ಯೋಜಿಸುತ್ತಿದೆ’ ಎಂಬ ಸುದ್ದಿಗಾರರ ಪ್ರಶ್ನೆಗೆ ಅರುಣಾಚಲಂ, ‘ಇಂದು ಪ್ರಾಥಮಿಕ ಹಂತದ ಮಾತುಕತೆ ನಡೆದಿದೆ. ಆ ವಿವರಗಳನ್ನು ನಾವು ಸಾರ್ವಜನಿಕವಾಗಿ ಹಂಚಿಕೊಳ್ಳಲು ಸಾಧ್ಯವಿಲ್ಲ’ ಎಂದು ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>