<p><strong>ನವದೆಹಲಿ:</strong> ತಮಿಳುನಾಡಿನಿಂದ ರಾಜ್ಯಸಭೆ ಸದಸ್ಯರಾಗಿ ನಟ, ರಾಜಕಾರಣಿ ಕಮಲ್ ಹಾಸನ್ ಇಂದು (ಗುರುವಾರ) ಪ್ರಮಾವಚನ ಸ್ವೀಕರಿಸಿದರು. </p><p>ಮಕ್ಕಳ್ ನೀಧಿ ಮೈಯ್ಯಂ (ಎಂಎನ್ಎಂ) ಪಕ್ಷದ ಸ್ಥಾಪಕರೂ ಆಗಿರುವ ಕಮಲ್ ಹಾಸನ್ ಅವರಿಗೆ ರಾಜ್ಯಸಭೆಯ ಉಪ ಸಭಾಪತಿ ಹರಿವಂಶ್ ನಾರಾಯಣ ಸಿಂಗ್ ಅವರು ಪ್ರಮಾಣವಚನ ಬೋಧಿಸಿದರು. </p><p>ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಪಕ್ಷ ತನ್ನ ಮಿತ್ರಪಕ್ಷವಾದ ಎಂಎನ್ಎಂ ಪಕ್ಷಕ್ಕೆ ಒಂದು ಸ್ಥಾನ ಬಿಟ್ಟುಕೊಟ್ಟಿತ್ತು. ಆ ಮೂಲಕ ರಾಜ್ಯಸಭೆಗೆ ಕಮಲ್ ಹಾಸನ್ ಅವರನ್ನು ಬೆಂಬಲಿಸಿತ್ತು. </p><p>ಈ ಹಿಂದೆ ಕಮಲ್ ಹಾಸನ್ ನೇತೃತ್ವದ ಎಂಎನ್ಎಂ ಪಕ್ಷದ ಜೊತೆ 2024ರ ಲೋಕಸಭಾ ಚುನಾವಣೆಗೆ ಮೊದಲು ಮಾಡಿಕೊಂಡ ಒಪ್ಪಂದಕ್ಕೆ ಅನುಗುಣವಾಗಿ ಆ ಪಕ್ಷಕ್ಕೆ ಒಂದು ಸ್ಥಾನ ಬಿಟ್ಟುಕೊಡಲಾಗಿದೆ ಎಂದು ಡಿಎಂಕೆ ಪಕ್ಷದ ಅಧ್ಯಕ್ಷರೂ ಆಗಿರುವ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಹೇಳಿದ್ದರು. </p>.ಕಮಲ್ ಹಾಸನ್ ಸಿನಿಮಾ 'ಥಗ್ ಲೈಫ್' ಪ್ರದರ್ಶನಕ್ಕೆ ನಿರ್ಬಂಧ ಹೇರಿಲ್ಲ: ಸರ್ಕಾರ.ಕಮಲ್ ಹಾಸನ್ ಕ್ಷಮೆ ಕೇಳದಿದ್ದರೆ ಕರ್ನಾಟಕ ಬಂದ್: ವಾಟಾಳ್ ನಾಗರಾಜ್ ಎಚ್ಚರಿಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ತಮಿಳುನಾಡಿನಿಂದ ರಾಜ್ಯಸಭೆ ಸದಸ್ಯರಾಗಿ ನಟ, ರಾಜಕಾರಣಿ ಕಮಲ್ ಹಾಸನ್ ಇಂದು (ಗುರುವಾರ) ಪ್ರಮಾವಚನ ಸ್ವೀಕರಿಸಿದರು. </p><p>ಮಕ್ಕಳ್ ನೀಧಿ ಮೈಯ್ಯಂ (ಎಂಎನ್ಎಂ) ಪಕ್ಷದ ಸ್ಥಾಪಕರೂ ಆಗಿರುವ ಕಮಲ್ ಹಾಸನ್ ಅವರಿಗೆ ರಾಜ್ಯಸಭೆಯ ಉಪ ಸಭಾಪತಿ ಹರಿವಂಶ್ ನಾರಾಯಣ ಸಿಂಗ್ ಅವರು ಪ್ರಮಾಣವಚನ ಬೋಧಿಸಿದರು. </p><p>ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಪಕ್ಷ ತನ್ನ ಮಿತ್ರಪಕ್ಷವಾದ ಎಂಎನ್ಎಂ ಪಕ್ಷಕ್ಕೆ ಒಂದು ಸ್ಥಾನ ಬಿಟ್ಟುಕೊಟ್ಟಿತ್ತು. ಆ ಮೂಲಕ ರಾಜ್ಯಸಭೆಗೆ ಕಮಲ್ ಹಾಸನ್ ಅವರನ್ನು ಬೆಂಬಲಿಸಿತ್ತು. </p><p>ಈ ಹಿಂದೆ ಕಮಲ್ ಹಾಸನ್ ನೇತೃತ್ವದ ಎಂಎನ್ಎಂ ಪಕ್ಷದ ಜೊತೆ 2024ರ ಲೋಕಸಭಾ ಚುನಾವಣೆಗೆ ಮೊದಲು ಮಾಡಿಕೊಂಡ ಒಪ್ಪಂದಕ್ಕೆ ಅನುಗುಣವಾಗಿ ಆ ಪಕ್ಷಕ್ಕೆ ಒಂದು ಸ್ಥಾನ ಬಿಟ್ಟುಕೊಡಲಾಗಿದೆ ಎಂದು ಡಿಎಂಕೆ ಪಕ್ಷದ ಅಧ್ಯಕ್ಷರೂ ಆಗಿರುವ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಹೇಳಿದ್ದರು. </p>.ಕಮಲ್ ಹಾಸನ್ ಸಿನಿಮಾ 'ಥಗ್ ಲೈಫ್' ಪ್ರದರ್ಶನಕ್ಕೆ ನಿರ್ಬಂಧ ಹೇರಿಲ್ಲ: ಸರ್ಕಾರ.ಕಮಲ್ ಹಾಸನ್ ಕ್ಷಮೆ ಕೇಳದಿದ್ದರೆ ಕರ್ನಾಟಕ ಬಂದ್: ವಾಟಾಳ್ ನಾಗರಾಜ್ ಎಚ್ಚರಿಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>