<p><strong>ಭೋಪಾಲ್:</strong> ಅತ್ಯಂತ ಹಿರಿಯ ಸಂಸದ, ಮುಖಂಡ ಕಮಲನಾಥ್ (72) ಅವರು ಮಧ್ಯ ಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಡಿ.17ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ.</p>.<p>ರಾಜ್ಯದಲ್ಲಿ ಉಪ ಮುಖ್ಯಮಂತ್ರಿ ಸ್ಥಾನ ಇರುವುದಿಲ್ಲ. ಮುಖ್ಯಮಂತ್ರಿಗಾದಿ ವಿಚಾರದಲ್ಲಿ ಜ್ಯೋತಿರಾಧ್ಯ ಸಿಂಧ್ಯಾ ಹಾಗೂ ಕಮಲನಾಥ್ ನಡುವೆ ತೀವ್ರ ಪೈಪೋಟಿ ಎದುರಾಗಿತ್ತು. ಸಾಕಷ್ಟು ಬೆಳವಣಿಗೆಯ ನಂತರ ಮಧ್ಯಪ್ರದೇಶದ ಕಾಂಗ್ರೆಸ್ ಸಮಿತಿಯು ಕಮಲನಾಥ್ ಅವರನ್ನು ಗುರುವಾರ ರಾತ್ರಿ ನೂತನ ಸಿಎಂ ಆಗಿ ಘೋಷಿಸಿತ್ತು.</p>.<p>ಛಿಂದ್ವಾರಾ ಲೋಕಸಭಾ ಕ್ಷೇತ್ರದಿಂದ 9 ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಕಮಲನಾಥ್ 2014ರಲ್ಲಿ 16ನೇ ಲೋಕಸಭೆಗೆ ಹಂಗಾಮಿ ಸ್ಪೀಕರ್ ಆಗಿ ಸೇವೆ ಸಲ್ಲಿಸಿದ್ದರು.</p>.<p>ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರದಲ್ಲಿ ವಾಣಿಜ್ಯ ಮತ್ತು ಕೈಗಾರಿಕೋದ್ಯಮ, ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವರಾಗಿ ಜವಾಬ್ದಾರಿ ನಿರ್ವಹಿಸಿದ್ದರು. ಈ ವರ್ಷ ಮೇನಲ್ಲಿ ಮಧ್ಯಪ್ರದೇಶ ಕಾಂಗ್ರೆಸ್ನ ಅಧ್ಯಕ್ಷರಾಗಿ ಆಯ್ಕೆಯಾಗಿ ವಿಧಾನಸಭಾ ಚುನಾವಣೆಯ ನೇತೃತ್ವ ವಹಿಸಿದ್ದರು.</p>.<p><strong>ಇದನ್ನೂ ಓದಿ:</strong><strong><a href="https://www.prajavani.net/stories/national/madhya-paradesh-kamalnath-new-594256.html" target="_blank">ಒಂಭತ್ತು ಬಾರಿ ‘ಎಂಪಿ’ ಮಧ್ಯಪ್ರದೇಶದ ಸಿಎಂ ಕಮಲನಾಥ್</a></strong></p>.<p><strong>ಇಂದಿರಾ ಗಾಂಧಿ ‘ಮೂರನೇ ಮಗ’</strong></p>.<p>1979ರಲ್ಲಿ ಮಧ್ಯ ಪ್ರದೇಶದ ಛಿಂದ್ವಾರಾ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಮಲನಾಥ್ ಪರ ಇಂದಿರಾ ಗಾಂಧಿ ಪ್ರಚಾರ ನಡೆಸಿದ್ದರು.‘ಕಮಲ್ ನನ್ನ ಮೂರನೇ ಮಗ’ ಎಂದು ಮತ ಯಾಚಿಸಿದ್ದರು.</p>.<p>ಅದಾದ ನಂತರ ಛಿಂದ್ವಾರಾ ಕ್ಷೇತ್ರದಿಂದ ಒಂಬತ್ತು ಬಾರಿ ಕಮಲನಾಥ್ ಸಂಸದರಾಗಿ ಆಯ್ಕೆಯಾಗಿದ್ದಾರೆ. ಅಂದಿನಿಂದಲೂ ಕಾಂಗ್ರೆಸ್ ಮತ್ತು ನೆಹರೂ–ಗಾಂಧಿ ಕುಟುಂಬದ ಮೇಲಿನ ತಮ್ಮ ನಿಷ್ಠೆ ಬದಲಿಸಿಲ್ಲ.</p>.<p>ತುರ್ತು ಪರಿಸ್ಥಿತಿ ನಂತರ ಚುನಾವಣೆಯಲ್ಲಿ ಹೀನಾಯವಾಗಿ ಸೋತು ಮನೆ ಸೇರಿದ್ದ ಇಂದಿರಾ ಬೆನ್ನಿಗೆ ಕಮಲನಾಥ್ ನಿಂತಿದ್ದರು. ಅಂದು ಅಜ್ಜಿಗೆ ಕಮಲ್ ತೋರಿದ ನಿಷ್ಠೆಗೆ ಇಂದು ಮೊಮ್ಮಗ ರಾಹುಲ್ ಗಾಂಧಿ ಉಡುಗೊರೆ ನೀಡಿದ್ದಾರೆ.</p>.<p>ಮಧ್ಯ ಪ್ರದೇಶ ಮುಖ್ಯಮಂತ್ರಿ ಹುದ್ದೆಗೆ 72 ವರ್ಷದ ಕಮಲನಾಥ್ ಮತ್ತು 47 ವರ್ಷದ ಜ್ಯೋತಿರಾದಿತ್ಯ ಸಿಂಧಿಯಾ ನಡುವೆ ಪೈಪೋಟಿ ಇತ್ತು. ಕೊನೆಗೆ ಕಾಂಗ್ರೆಸ್ ಹೈಕಮಾಂಡ್ ‘ಅನುಭವ’ಕ್ಕೆ ಮಣೆ ಹಾಕಿದೆ.</p>.<p>ಇದೇ ಏಪ್ರಿಲ್ನಲ್ಲಿ ಜೋತಿರಾದಿತ್ಯ ಸಿಂಧಿಯಾ ಬದಲಿಸಿ ಕಮಲನಾಥ್ ಅವರನ್ನು ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು.ಇದಕ್ಕೂ ಮೊದಲು ಅವರು ಕೇಂದ್ರ ಸಚಿವ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹುದ್ದೆ ಸೇರಿದಂತೆ ಪಕ್ಷದ ವಿವಿಧ ಹುದ್ದೆಗಳನ್ನು ನಿಭಾಯಿಸಿದ್ದರು.</p>.<p>ಕಮಲನಾಥ್ ಮೂಲತಃ ಮಧ್ಯ ಪ್ರದೇಶದವರಲ್ಲ. ಅವರ ತಂದೆ ಮಹೇಂದ್ರ ನಾಥ್ ಉತ್ತರ ಪ್ರದೇಶದ ಕಾನ್ಪುರದ ಉದ್ಯಮಿ.ಪ್ರತಿಷ್ಠಿತ ಡೆಹ್ರಾಡೂನ್ನ ಡೂನ್ ಶಾಲೆ ಮತ್ತು ಕೋಲ್ಕತ್ತದ ಸೇಂಟ್ ಕ್ಸೇವಿಯರ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭೋಪಾಲ್:</strong> ಅತ್ಯಂತ ಹಿರಿಯ ಸಂಸದ, ಮುಖಂಡ ಕಮಲನಾಥ್ (72) ಅವರು ಮಧ್ಯ ಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಡಿ.17ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ.</p>.<p>ರಾಜ್ಯದಲ್ಲಿ ಉಪ ಮುಖ್ಯಮಂತ್ರಿ ಸ್ಥಾನ ಇರುವುದಿಲ್ಲ. ಮುಖ್ಯಮಂತ್ರಿಗಾದಿ ವಿಚಾರದಲ್ಲಿ ಜ್ಯೋತಿರಾಧ್ಯ ಸಿಂಧ್ಯಾ ಹಾಗೂ ಕಮಲನಾಥ್ ನಡುವೆ ತೀವ್ರ ಪೈಪೋಟಿ ಎದುರಾಗಿತ್ತು. ಸಾಕಷ್ಟು ಬೆಳವಣಿಗೆಯ ನಂತರ ಮಧ್ಯಪ್ರದೇಶದ ಕಾಂಗ್ರೆಸ್ ಸಮಿತಿಯು ಕಮಲನಾಥ್ ಅವರನ್ನು ಗುರುವಾರ ರಾತ್ರಿ ನೂತನ ಸಿಎಂ ಆಗಿ ಘೋಷಿಸಿತ್ತು.</p>.<p>ಛಿಂದ್ವಾರಾ ಲೋಕಸಭಾ ಕ್ಷೇತ್ರದಿಂದ 9 ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಕಮಲನಾಥ್ 2014ರಲ್ಲಿ 16ನೇ ಲೋಕಸಭೆಗೆ ಹಂಗಾಮಿ ಸ್ಪೀಕರ್ ಆಗಿ ಸೇವೆ ಸಲ್ಲಿಸಿದ್ದರು.</p>.<p>ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರದಲ್ಲಿ ವಾಣಿಜ್ಯ ಮತ್ತು ಕೈಗಾರಿಕೋದ್ಯಮ, ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವರಾಗಿ ಜವಾಬ್ದಾರಿ ನಿರ್ವಹಿಸಿದ್ದರು. ಈ ವರ್ಷ ಮೇನಲ್ಲಿ ಮಧ್ಯಪ್ರದೇಶ ಕಾಂಗ್ರೆಸ್ನ ಅಧ್ಯಕ್ಷರಾಗಿ ಆಯ್ಕೆಯಾಗಿ ವಿಧಾನಸಭಾ ಚುನಾವಣೆಯ ನೇತೃತ್ವ ವಹಿಸಿದ್ದರು.</p>.<p><strong>ಇದನ್ನೂ ಓದಿ:</strong><strong><a href="https://www.prajavani.net/stories/national/madhya-paradesh-kamalnath-new-594256.html" target="_blank">ಒಂಭತ್ತು ಬಾರಿ ‘ಎಂಪಿ’ ಮಧ್ಯಪ್ರದೇಶದ ಸಿಎಂ ಕಮಲನಾಥ್</a></strong></p>.<p><strong>ಇಂದಿರಾ ಗಾಂಧಿ ‘ಮೂರನೇ ಮಗ’</strong></p>.<p>1979ರಲ್ಲಿ ಮಧ್ಯ ಪ್ರದೇಶದ ಛಿಂದ್ವಾರಾ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಮಲನಾಥ್ ಪರ ಇಂದಿರಾ ಗಾಂಧಿ ಪ್ರಚಾರ ನಡೆಸಿದ್ದರು.‘ಕಮಲ್ ನನ್ನ ಮೂರನೇ ಮಗ’ ಎಂದು ಮತ ಯಾಚಿಸಿದ್ದರು.</p>.<p>ಅದಾದ ನಂತರ ಛಿಂದ್ವಾರಾ ಕ್ಷೇತ್ರದಿಂದ ಒಂಬತ್ತು ಬಾರಿ ಕಮಲನಾಥ್ ಸಂಸದರಾಗಿ ಆಯ್ಕೆಯಾಗಿದ್ದಾರೆ. ಅಂದಿನಿಂದಲೂ ಕಾಂಗ್ರೆಸ್ ಮತ್ತು ನೆಹರೂ–ಗಾಂಧಿ ಕುಟುಂಬದ ಮೇಲಿನ ತಮ್ಮ ನಿಷ್ಠೆ ಬದಲಿಸಿಲ್ಲ.</p>.<p>ತುರ್ತು ಪರಿಸ್ಥಿತಿ ನಂತರ ಚುನಾವಣೆಯಲ್ಲಿ ಹೀನಾಯವಾಗಿ ಸೋತು ಮನೆ ಸೇರಿದ್ದ ಇಂದಿರಾ ಬೆನ್ನಿಗೆ ಕಮಲನಾಥ್ ನಿಂತಿದ್ದರು. ಅಂದು ಅಜ್ಜಿಗೆ ಕಮಲ್ ತೋರಿದ ನಿಷ್ಠೆಗೆ ಇಂದು ಮೊಮ್ಮಗ ರಾಹುಲ್ ಗಾಂಧಿ ಉಡುಗೊರೆ ನೀಡಿದ್ದಾರೆ.</p>.<p>ಮಧ್ಯ ಪ್ರದೇಶ ಮುಖ್ಯಮಂತ್ರಿ ಹುದ್ದೆಗೆ 72 ವರ್ಷದ ಕಮಲನಾಥ್ ಮತ್ತು 47 ವರ್ಷದ ಜ್ಯೋತಿರಾದಿತ್ಯ ಸಿಂಧಿಯಾ ನಡುವೆ ಪೈಪೋಟಿ ಇತ್ತು. ಕೊನೆಗೆ ಕಾಂಗ್ರೆಸ್ ಹೈಕಮಾಂಡ್ ‘ಅನುಭವ’ಕ್ಕೆ ಮಣೆ ಹಾಕಿದೆ.</p>.<p>ಇದೇ ಏಪ್ರಿಲ್ನಲ್ಲಿ ಜೋತಿರಾದಿತ್ಯ ಸಿಂಧಿಯಾ ಬದಲಿಸಿ ಕಮಲನಾಥ್ ಅವರನ್ನು ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು.ಇದಕ್ಕೂ ಮೊದಲು ಅವರು ಕೇಂದ್ರ ಸಚಿವ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹುದ್ದೆ ಸೇರಿದಂತೆ ಪಕ್ಷದ ವಿವಿಧ ಹುದ್ದೆಗಳನ್ನು ನಿಭಾಯಿಸಿದ್ದರು.</p>.<p>ಕಮಲನಾಥ್ ಮೂಲತಃ ಮಧ್ಯ ಪ್ರದೇಶದವರಲ್ಲ. ಅವರ ತಂದೆ ಮಹೇಂದ್ರ ನಾಥ್ ಉತ್ತರ ಪ್ರದೇಶದ ಕಾನ್ಪುರದ ಉದ್ಯಮಿ.ಪ್ರತಿಷ್ಠಿತ ಡೆಹ್ರಾಡೂನ್ನ ಡೂನ್ ಶಾಲೆ ಮತ್ತು ಕೋಲ್ಕತ್ತದ ಸೇಂಟ್ ಕ್ಸೇವಿಯರ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>