<p><strong>ಮುಂಬೈ</strong>: ಹಾಸ್ಯನಟ ಕುನಾಲ್ ಕಾಮ್ರಾ ಅವರ ವಿವಾದಾತ್ಮಕ ಹೇಳಿಕೆ ಸಂಬಂಧ ಪ್ರತಿಕ್ರಿಯಿಸಿರುವ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಏಕನಾಥ್, ಬೇರೊಬ್ಬರ ವಿರುದ್ಧ ಮಾತನಾಡಲು 'ಸುಪಾರಿ' ತೆಗೆದುಕೊಂಡಂತಿದೆ ಎಂದು ಹೇಳಿದ್ದಾರೆ.</p><p>ಬೇರೊಬ್ಬರ ಬಗ್ಗೆ ಮಾತನಾಡುವಾಗ ಕನಿಷ್ಢ ಸಭ್ಯತೆಯನ್ನು ಕಾಪಾಡಿಕೊಳ್ಳಬೇಕು. ವಾಕ್ ಸ್ವಾತಂತ್ರ್ಯವಿದೆ, ಆದರೆ ಅದಕ್ಕೂ ಒಂದು ಮಿತಿ ಇರಬೇಕು. ಇಲ್ಲದಿದ್ದರೆ ಕ್ರಿಯೆಯು ಪ್ರತಿಕ್ರಿಯೆಗೆ ಕಾರಣವಾಗುತ್ತದೆ ಎಂದು ಹೇಳಿದ್ದಾರೆ.</p><p>ವಿಡಂಬನೆ ಅರ್ಥವಾಗುತ್ತದೆ. ಆದರೆ ಅದಕ್ಕೊಂದು ಮಿತಿ ಇರಬೇಕು. ಆದರೆ ಕಾಮ್ರಾ ನೀಡಿರುವ ಹೇಳಿಕೆ ಬೇರೊಬ್ಬರ ವಿರುದ್ಧ ಮಾತನಾಡಲು ಸುಪಾರಿ ತೆಗೆದುಕೊಂಡಂತೆ ಕಾಣುತ್ತಿದೆ ಎಂದು ಶಿಂದೆ ತಿಳಿಸಿದ್ದಾರೆ.</p>.5ನೇ ತರಗತಿ ವಿದ್ಯಾರ್ಥಿನಿಯನ್ನು ಥಳಿಸಿದ ಶಿಕ್ಷಕಿಯ ವಿರುದ್ಧ ಎಫ್ಐಆರ್ .ಶಿಂದೆ ಕ್ಷಮೆಯಾಚಿಸುವುದಿಲ್ಲ, ವಿಧ್ವಂಸಕ ಕೃತ್ಯ ಖಂಡಿಸುವೆ: ಕಾಮ್ರಾ. <p>ಇದೇ ವ್ಯಕ್ತಿ (ಕಾಮ್ರಾ) ಭಾರತದ ಸುಪ್ರೀಂ ಕೋರ್ಟ್, ಪ್ರಧಾನಿ, ಅರ್ನಬ್ ಗೋಸ್ವಾಮಿ (ಪತ್ರಕರ್ತ) ಮತ್ತು ಕೆಲವು ಕೈಗಾರಿಕೋದ್ಯಮಿಗಳ ಬಗ್ಗೆ ಕಾಮೆಂಟ್ ಮಾಡಿದ್ದರು. ಇದು ವಾಕ್ ಸ್ವಾತಂತ್ರ್ಯವಲ್ಲ. ಇವರ ಹೇಳಿಕೆಗಳನ್ನು ಗಮನಿಸಿದರೆ ಯಾರಿಗೋ ಕೆಲಸ ಮಾಡುತ್ತಿದ್ದಾರೆ ಎಂದು ಭಾಸವಾಗುತ್ತದೆ ಎಂದು ಶಿಂದೆ ಹೇಳಿದ್ದಾರೆ.</p><p>ಶಿಂದೆ ಅವರ ಬಗ್ಗೆ ನೀಡಿರುವ ವಿವಾದಾತ್ಮಕ ಹೇಳಿಕೆಗಳಿಗೆ ಕ್ಷಮೆಯಾಚಿಸುವುದಿಲ್ಲ ಎಂದು ಹಾಸ್ಯ ಕಲಾವಿದ ಕುನಾಲ್ ಕಾಮ್ರಾ ಹೇಳಿದ್ದಾರೆ. ಮುಂಬೈನಲ್ಲಿ ಹಾಸ್ಯ ಕಾರ್ಯಕ್ರಮ ನಡೆದ ಸ್ಥಳದ ವಿಧ್ವಂಸಕ ಕೃತ್ಯವನ್ನು ಖಂಡಿಸಿದ್ದಾರೆ.</p><p>2022ರಲ್ಲಿ ಏಕನಾಥ ಶಿಂದೆ ಅವರು ಉದ್ಧವ್ ಠಾಕ್ರೆ ವಿರುದ್ಧ ನಡೆಸಿದ ಬಂಡಾಯವನ್ನು ವಿವರಿಸಲು ಕುನಾಲ್ ಅವರು ‘ದಿಲ್ ತೊ ಪಾಗಲ್ ಹೈ’ ಸಿನಿಮಾದ ಹಾಡೊಂದನ್ನು ಮಾರ್ಪಾಡು ಮಾಡಿ ಹಾಡಿದ್ದರು. ಇದರಿಂದ ಕೆರಳಿದ ಶಿವಸೇನಾ ಕಾರ್ಯಕರ್ತರು ಕುನಾಲ್ ಅವರು ಈ ಹಾಡನ್ನು ಹೇಳಿದ್ದ ಕಾರ್ಯಕ್ರಮ ಚಿತ್ರೀಕರಿಸಿದ್ದ ‘ಹ್ಯಾಬಿಟ್ಯಾಟ್ ಸ್ಟುಡಿಯೊ’ದಲ್ಲಿ ಭಾನುವಾರ ರಾತ್ರಿ ದಾಂದಲೆ ನಡೆಸಿದ್ದರು.</p><p>ಶಿಂದೆ ಅವರನ್ನು ಗುರಿಯಾಗಿಸಿ ಅವಹೇಳನಕಾರಿ ಮಾತು ಆಡಿದ್ದಾರೆ ಎಂಬ ಆರೋಪದ ಅಡಿಯಲ್ಲಿ ಮುಂಬೈ ಪೊಲೀಸರು ಕುನಾಲ್ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.</p>.ಮದುವೆಯಾದ ಕೆಲವೇ ದಿನಗಳಲ್ಲಿ ಪ್ರಿಯಕರನ ಜತೆ ಸೇರಿ ಪತಿಯ ಹತ್ಯೆಗೆ ಪತ್ನಿ ಸುಪಾರಿ!.ವಕ್ಫ್ ಕಾಯ್ದೆ ತಿದ್ದುಪಡಿಯನ್ನು ಪಕ್ಷ ಬಲವಾಗಿ ವಿರೋಧಿಸುತ್ತದೆ: ಬಿಆರ್ಎಸ್ ನಾಯಕಿ.Tiruchirappalli Airport | ₹5 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ವಶ, ಬಂಧನ.Fact Check | ಮಗಳನ್ನೇ ಮದುವೆಯಾದ ಅಪ್ಪ; ಇದು ಸುಳ್ಳು ಸುದ್ದಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಹಾಸ್ಯನಟ ಕುನಾಲ್ ಕಾಮ್ರಾ ಅವರ ವಿವಾದಾತ್ಮಕ ಹೇಳಿಕೆ ಸಂಬಂಧ ಪ್ರತಿಕ್ರಿಯಿಸಿರುವ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಏಕನಾಥ್, ಬೇರೊಬ್ಬರ ವಿರುದ್ಧ ಮಾತನಾಡಲು 'ಸುಪಾರಿ' ತೆಗೆದುಕೊಂಡಂತಿದೆ ಎಂದು ಹೇಳಿದ್ದಾರೆ.</p><p>ಬೇರೊಬ್ಬರ ಬಗ್ಗೆ ಮಾತನಾಡುವಾಗ ಕನಿಷ್ಢ ಸಭ್ಯತೆಯನ್ನು ಕಾಪಾಡಿಕೊಳ್ಳಬೇಕು. ವಾಕ್ ಸ್ವಾತಂತ್ರ್ಯವಿದೆ, ಆದರೆ ಅದಕ್ಕೂ ಒಂದು ಮಿತಿ ಇರಬೇಕು. ಇಲ್ಲದಿದ್ದರೆ ಕ್ರಿಯೆಯು ಪ್ರತಿಕ್ರಿಯೆಗೆ ಕಾರಣವಾಗುತ್ತದೆ ಎಂದು ಹೇಳಿದ್ದಾರೆ.</p><p>ವಿಡಂಬನೆ ಅರ್ಥವಾಗುತ್ತದೆ. ಆದರೆ ಅದಕ್ಕೊಂದು ಮಿತಿ ಇರಬೇಕು. ಆದರೆ ಕಾಮ್ರಾ ನೀಡಿರುವ ಹೇಳಿಕೆ ಬೇರೊಬ್ಬರ ವಿರುದ್ಧ ಮಾತನಾಡಲು ಸುಪಾರಿ ತೆಗೆದುಕೊಂಡಂತೆ ಕಾಣುತ್ತಿದೆ ಎಂದು ಶಿಂದೆ ತಿಳಿಸಿದ್ದಾರೆ.</p>.5ನೇ ತರಗತಿ ವಿದ್ಯಾರ್ಥಿನಿಯನ್ನು ಥಳಿಸಿದ ಶಿಕ್ಷಕಿಯ ವಿರುದ್ಧ ಎಫ್ಐಆರ್ .ಶಿಂದೆ ಕ್ಷಮೆಯಾಚಿಸುವುದಿಲ್ಲ, ವಿಧ್ವಂಸಕ ಕೃತ್ಯ ಖಂಡಿಸುವೆ: ಕಾಮ್ರಾ. <p>ಇದೇ ವ್ಯಕ್ತಿ (ಕಾಮ್ರಾ) ಭಾರತದ ಸುಪ್ರೀಂ ಕೋರ್ಟ್, ಪ್ರಧಾನಿ, ಅರ್ನಬ್ ಗೋಸ್ವಾಮಿ (ಪತ್ರಕರ್ತ) ಮತ್ತು ಕೆಲವು ಕೈಗಾರಿಕೋದ್ಯಮಿಗಳ ಬಗ್ಗೆ ಕಾಮೆಂಟ್ ಮಾಡಿದ್ದರು. ಇದು ವಾಕ್ ಸ್ವಾತಂತ್ರ್ಯವಲ್ಲ. ಇವರ ಹೇಳಿಕೆಗಳನ್ನು ಗಮನಿಸಿದರೆ ಯಾರಿಗೋ ಕೆಲಸ ಮಾಡುತ್ತಿದ್ದಾರೆ ಎಂದು ಭಾಸವಾಗುತ್ತದೆ ಎಂದು ಶಿಂದೆ ಹೇಳಿದ್ದಾರೆ.</p><p>ಶಿಂದೆ ಅವರ ಬಗ್ಗೆ ನೀಡಿರುವ ವಿವಾದಾತ್ಮಕ ಹೇಳಿಕೆಗಳಿಗೆ ಕ್ಷಮೆಯಾಚಿಸುವುದಿಲ್ಲ ಎಂದು ಹಾಸ್ಯ ಕಲಾವಿದ ಕುನಾಲ್ ಕಾಮ್ರಾ ಹೇಳಿದ್ದಾರೆ. ಮುಂಬೈನಲ್ಲಿ ಹಾಸ್ಯ ಕಾರ್ಯಕ್ರಮ ನಡೆದ ಸ್ಥಳದ ವಿಧ್ವಂಸಕ ಕೃತ್ಯವನ್ನು ಖಂಡಿಸಿದ್ದಾರೆ.</p><p>2022ರಲ್ಲಿ ಏಕನಾಥ ಶಿಂದೆ ಅವರು ಉದ್ಧವ್ ಠಾಕ್ರೆ ವಿರುದ್ಧ ನಡೆಸಿದ ಬಂಡಾಯವನ್ನು ವಿವರಿಸಲು ಕುನಾಲ್ ಅವರು ‘ದಿಲ್ ತೊ ಪಾಗಲ್ ಹೈ’ ಸಿನಿಮಾದ ಹಾಡೊಂದನ್ನು ಮಾರ್ಪಾಡು ಮಾಡಿ ಹಾಡಿದ್ದರು. ಇದರಿಂದ ಕೆರಳಿದ ಶಿವಸೇನಾ ಕಾರ್ಯಕರ್ತರು ಕುನಾಲ್ ಅವರು ಈ ಹಾಡನ್ನು ಹೇಳಿದ್ದ ಕಾರ್ಯಕ್ರಮ ಚಿತ್ರೀಕರಿಸಿದ್ದ ‘ಹ್ಯಾಬಿಟ್ಯಾಟ್ ಸ್ಟುಡಿಯೊ’ದಲ್ಲಿ ಭಾನುವಾರ ರಾತ್ರಿ ದಾಂದಲೆ ನಡೆಸಿದ್ದರು.</p><p>ಶಿಂದೆ ಅವರನ್ನು ಗುರಿಯಾಗಿಸಿ ಅವಹೇಳನಕಾರಿ ಮಾತು ಆಡಿದ್ದಾರೆ ಎಂಬ ಆರೋಪದ ಅಡಿಯಲ್ಲಿ ಮುಂಬೈ ಪೊಲೀಸರು ಕುನಾಲ್ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.</p>.ಮದುವೆಯಾದ ಕೆಲವೇ ದಿನಗಳಲ್ಲಿ ಪ್ರಿಯಕರನ ಜತೆ ಸೇರಿ ಪತಿಯ ಹತ್ಯೆಗೆ ಪತ್ನಿ ಸುಪಾರಿ!.ವಕ್ಫ್ ಕಾಯ್ದೆ ತಿದ್ದುಪಡಿಯನ್ನು ಪಕ್ಷ ಬಲವಾಗಿ ವಿರೋಧಿಸುತ್ತದೆ: ಬಿಆರ್ಎಸ್ ನಾಯಕಿ.Tiruchirappalli Airport | ₹5 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ವಶ, ಬಂಧನ.Fact Check | ಮಗಳನ್ನೇ ಮದುವೆಯಾದ ಅಪ್ಪ; ಇದು ಸುಳ್ಳು ಸುದ್ದಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>