<p>ಕನಕಗಿರಿ: ನಾಲ್ಕು ಕಾರ್ಮಿಕ ಕಾನೂನುಗಳಿಗೆ ತಿದ್ದುಪಡಿ ಮಾಡುತ್ತಿರುವ ಕೇಂದ್ರ ಸರ್ಕಾರದ ವಿರುದ್ದ ಇಲ್ಲಿನ ಸಿಐಟಿಯು ತಾಲ್ಲೂಕು ಸಮಿತಿ ಕರಾಳ ದಿನ ಆಚರಿಸಿತು.</p>.<p>ಸಿಐಟಿಯು ಜಿಲ್ಲಾ ಕೋಶಾಧ್ಯಕ್ಷೆ ಲಕ್ಷ್ಮೀದೇವಿ ಮಾತನಾಡಿ, ‘ಕೇಂದ್ರ ಸರ್ಕಾರ ಕಾರ್ಮಿಕ ವಿರೋಧಿ ಹಾಗೂ ಮಾಲೀಕರ ಪರ ನೀತಿ ಅನುಸರಿಸುತ್ತಿದೆ’ ಎಂದು ಆರೋಪಿಸಿದರು.</p>.<p>‘ಕಾರ್ಮಿಕ ವಿರೋಧಿ ನೀತಿಯನ್ನು ವಿರೋಧಿಸಿ ಕಳೆದ ಫೆ.12ರಂದು ಅಖಿಲ ಭಾರತ ಮಟ್ಟದಲ್ಲಿ ಕೇಂದ್ರ ಸರ್ಕಾರದ ವಿರುದ್ದ ಆಯೋಜಿಸಿದ್ದ ಸಾರ್ವತ್ರಿಕ ಮುಷ್ಕರ ಐತಿಹಾಸಿಕವಾಗಿದೆ. ಈ ಹೋರಾಟದ ಗಂಭೀರತೆ ಅರಿಯದ ಕೇಂದ್ರ ಸರ್ಕಾರ ಕಾನೂನುಗಳ ಜಾರಿಗೆ ಸಂಬಂಧಿಸಿದಂತೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ, ಕಾರ್ಮಿಕರ ಸಂಘಟನೆಗಳ ಜತೆಗೆ ಚರ್ಚೆ ಸಹ ಮಾಡಿಲ್ಲ’ ಎಂದರು.</p>.<p>‘ಕಾರ್ಮಿಕರ ಹೋರಾಟಕ್ಕೆ ಮಣಿಯದ ಕೇಂದ್ರದ ವಿರುದ್ದ ದೇಶದಾದ್ಯಂತ ಎಲ್ಲಾ ಕೆಲಸದ ಸ್ಥಳಗಳಲ್ಲಿ ಕಾರ್ಮಿಕರು ಕಪ್ಪು ಪಟ್ಟಿ ಧರಿಸಿ ಕರಾಳ ದಿನಾಚರಣೆಯನ್ನು ಆಚರಿಸುತ್ತಿದ್ದೇವೆ’ ಎಂದರು.</p>.<p>ಪ್ರಮುಖರಾದ ಮುಖಂಡ ಮಲ್ಲಪ್ಪ ಮ್ಯಾಗಡೆ, ನಿಂಗಪ್ಪ, ಶಿವು, ಮರಿಯಪ್ಪ, ಮೌಲಹುಸೇನ, ಹೊನ್ನೂರುಸಾಬ, ಪರಶುರಾಮ, ರಮೇಶ್, ಹನುಮಂತ, ಬಾಳಪ್ಪ ಹುಲಿಹೈದರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260402-35-1612712379</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕನಕಗಿರಿ: ನಾಲ್ಕು ಕಾರ್ಮಿಕ ಕಾನೂನುಗಳಿಗೆ ತಿದ್ದುಪಡಿ ಮಾಡುತ್ತಿರುವ ಕೇಂದ್ರ ಸರ್ಕಾರದ ವಿರುದ್ದ ಇಲ್ಲಿನ ಸಿಐಟಿಯು ತಾಲ್ಲೂಕು ಸಮಿತಿ ಕರಾಳ ದಿನ ಆಚರಿಸಿತು.</p>.<p>ಸಿಐಟಿಯು ಜಿಲ್ಲಾ ಕೋಶಾಧ್ಯಕ್ಷೆ ಲಕ್ಷ್ಮೀದೇವಿ ಮಾತನಾಡಿ, ‘ಕೇಂದ್ರ ಸರ್ಕಾರ ಕಾರ್ಮಿಕ ವಿರೋಧಿ ಹಾಗೂ ಮಾಲೀಕರ ಪರ ನೀತಿ ಅನುಸರಿಸುತ್ತಿದೆ’ ಎಂದು ಆರೋಪಿಸಿದರು.</p>.<p>‘ಕಾರ್ಮಿಕ ವಿರೋಧಿ ನೀತಿಯನ್ನು ವಿರೋಧಿಸಿ ಕಳೆದ ಫೆ.12ರಂದು ಅಖಿಲ ಭಾರತ ಮಟ್ಟದಲ್ಲಿ ಕೇಂದ್ರ ಸರ್ಕಾರದ ವಿರುದ್ದ ಆಯೋಜಿಸಿದ್ದ ಸಾರ್ವತ್ರಿಕ ಮುಷ್ಕರ ಐತಿಹಾಸಿಕವಾಗಿದೆ. ಈ ಹೋರಾಟದ ಗಂಭೀರತೆ ಅರಿಯದ ಕೇಂದ್ರ ಸರ್ಕಾರ ಕಾನೂನುಗಳ ಜಾರಿಗೆ ಸಂಬಂಧಿಸಿದಂತೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ, ಕಾರ್ಮಿಕರ ಸಂಘಟನೆಗಳ ಜತೆಗೆ ಚರ್ಚೆ ಸಹ ಮಾಡಿಲ್ಲ’ ಎಂದರು.</p>.<p>‘ಕಾರ್ಮಿಕರ ಹೋರಾಟಕ್ಕೆ ಮಣಿಯದ ಕೇಂದ್ರದ ವಿರುದ್ದ ದೇಶದಾದ್ಯಂತ ಎಲ್ಲಾ ಕೆಲಸದ ಸ್ಥಳಗಳಲ್ಲಿ ಕಾರ್ಮಿಕರು ಕಪ್ಪು ಪಟ್ಟಿ ಧರಿಸಿ ಕರಾಳ ದಿನಾಚರಣೆಯನ್ನು ಆಚರಿಸುತ್ತಿದ್ದೇವೆ’ ಎಂದರು.</p>.<p>ಪ್ರಮುಖರಾದ ಮುಖಂಡ ಮಲ್ಲಪ್ಪ ಮ್ಯಾಗಡೆ, ನಿಂಗಪ್ಪ, ಶಿವು, ಮರಿಯಪ್ಪ, ಮೌಲಹುಸೇನ, ಹೊನ್ನೂರುಸಾಬ, ಪರಶುರಾಮ, ರಮೇಶ್, ಹನುಮಂತ, ಬಾಳಪ್ಪ ಹುಲಿಹೈದರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260402-35-1612712379</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>