ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಿ ತಮ್ಮ ಹೇಳಿಕೆ ದಾಖಲಿಸಲು ಬಾಂದ್ರಾ ಪೊಲೀಸರು ಅಕ್ಟೋಬರ್ 21ರಂದು ಮೊದಲ ಬಾರಿ ನೋಟಿಸ್ ಕಳುಹಿಸಿದ್ದರು. ಅದಕ್ಕೆ ಕಂಗನಾ ರನೌತ್ ಅವರ ಪರ ವಕೀಲರು ’ಕಂಗನಾ ಹಿಮಾಚಲ ಪ್ರದೇಶದಲ್ಲಿದ್ದು, ಅವರ ಸೋದರ ಸಂಬಂಧಿಯ ಮದುವೆ ತಯಾರಿಯಲ್ಲಿ ತೊಡಗಿಸಿಕೊಂಡಿದ್ದಾರೆ‘ ಎಂದು ಪೊಲೀಸರಿಗೆ ಉತ್ತರಿಸಿದ್ದರು.