<p><strong>ಶಿಮ್ಲಾ:</strong> ಪ್ರವಾಹದ ಹೊಡೆತಕ್ಕೆ ಸಿಲುಕಿ ನಲುಗಿರುವ ಹಿಮಾಚಲ ಪ್ರದೇಶದ ಮನಾಲಿಗೆ ಸಂಸದೆ, ಬಾಲಿವುಡ್ ನಟಿ ಕಂಗನಾ ರನೌತ್ ಭೇಟಿ ನೀಡಿದ್ದರು. ಈ ವೇಳೆ ‘ವಾಪಸ್ ಹೋಗಿ ಕಂಗನಾ, ನೀವು ತಡವಾಗಿ ಬಂದಿದ್ದೀರಿ’ ಎನ್ನುವ ಘೋಷಣೆಗಳನ್ನು ಅಲ್ಲಿನ ಜನ ಕೂಗಿದ್ದಾರೆ.</p><p>ಕಂಗನಾ ಬರುತ್ತಿದ್ದಂತೆ ಸ್ಥಳೀಯರು ಕಪ್ಪು ಬಾವುಟ ಹಿಡಿದು, ಘೋಷಣೆಗಳನ್ನು ಕೂಗುತ್ತಿರುವುದು ಕಂಡುಬಂದಿತು. </p><p>ಮಹಿಳೆಯೊಬ್ಬರು ಪ್ರವಾಹದಿಂದಾದ ನಷ್ಟದ ಬಗ್ಗೆ ಹೇಳಿಕೊಳ್ಳುತ್ತಿದ್ದರೆ ಕಂಗನಾ ಮಾತ್ರ, ‘ಇಲ್ಲಿ ನನ್ನದೂ ರೆಸ್ಟೋರೆಂಟ್ ಇದೆ, ನಿನ್ನೆ ಒಂದು ದಿನ ಕೇವಲ ₹50 ವ್ಯಾಪಾರವಾಗಿದೆ. ನಾನು ಅಲ್ಲಿರುವ ಉದ್ಯೋಗಿಗಳಿಗೆ ₹15 ಲಕ್ಷ ಪಾವತಿಸುತ್ತೇನೆ. ದಯವಿಟ್ಟು ನನ್ನ ನೋವನ್ನೂ ಅರ್ಥಮಾಡಿಕೊಳ್ಳಿ, ನಾನು ಮನುಷ್ಯಳು’ ಎಂದು ಪ್ರತಿಕ್ರಿಯಿಸಿದ್ದಾರೆ. </p><p>ಕ್ಷೇತ್ರದ ಸಂಸದೆಯಾಗಿ ಕಂಗನಾ ಅವರ ಪ್ರತಿಕ್ರಿಯೆ ಸ್ಥಳೀಯರನ್ನು ಕೆರಳಿಸಿದೆ. ಸದ್ಯ ಕಂಗನಾ ಅವರು ಮಾತನಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.</p><p>ಆ.25, 26ರಂದು ಹಿಮಾಚಲ ಪ್ರದೇಶದ ಕುಲು, ಮನಾಲಿ ಪ್ರದೇಶಗಳಲ್ಲಿ ಭಾರಿ ಮಳೆ ಸುರಿದ ಪರಿಣಾಮ ಪ್ರವಾಹ ಸ್ಥಿತಿ ಎದುರಾಗಿತ್ತು. ಬಿಯಾಸ್ ನದಿ ಅಪಾಯ ಮಟ್ಟ ಮೀರಿ ಹರಿದ ಪರಿಣಾಮ ಬಹುಅಂತಸ್ತಿನ ಹೋಟೆಲ್ ಸೇರಿ ನಾಲ್ಕು ಅಂಗಡಿಗಳು ಕೊಚ್ಚಿ ಹೋಗಿವೆ.</p>.ಹಿಮಾಚಲ: ಪ್ರವಾಹ ಪರಿಹಾರಕ್ಕೆ ನನ್ನ ಬಳಿ ದುಡ್ಡಿಲ್ಲ; ಕಂಗನಾ ಹೇಳಿಕೆಗೆ ಭಾರಿ ಟೀಕೆ.ಹಿಮಾಚಲ ಪ್ರದೇಶ|ಕಾಂಗ್ರೆಸ್ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ: ಕಂಗನಾ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಮ್ಲಾ:</strong> ಪ್ರವಾಹದ ಹೊಡೆತಕ್ಕೆ ಸಿಲುಕಿ ನಲುಗಿರುವ ಹಿಮಾಚಲ ಪ್ರದೇಶದ ಮನಾಲಿಗೆ ಸಂಸದೆ, ಬಾಲಿವುಡ್ ನಟಿ ಕಂಗನಾ ರನೌತ್ ಭೇಟಿ ನೀಡಿದ್ದರು. ಈ ವೇಳೆ ‘ವಾಪಸ್ ಹೋಗಿ ಕಂಗನಾ, ನೀವು ತಡವಾಗಿ ಬಂದಿದ್ದೀರಿ’ ಎನ್ನುವ ಘೋಷಣೆಗಳನ್ನು ಅಲ್ಲಿನ ಜನ ಕೂಗಿದ್ದಾರೆ.</p><p>ಕಂಗನಾ ಬರುತ್ತಿದ್ದಂತೆ ಸ್ಥಳೀಯರು ಕಪ್ಪು ಬಾವುಟ ಹಿಡಿದು, ಘೋಷಣೆಗಳನ್ನು ಕೂಗುತ್ತಿರುವುದು ಕಂಡುಬಂದಿತು. </p><p>ಮಹಿಳೆಯೊಬ್ಬರು ಪ್ರವಾಹದಿಂದಾದ ನಷ್ಟದ ಬಗ್ಗೆ ಹೇಳಿಕೊಳ್ಳುತ್ತಿದ್ದರೆ ಕಂಗನಾ ಮಾತ್ರ, ‘ಇಲ್ಲಿ ನನ್ನದೂ ರೆಸ್ಟೋರೆಂಟ್ ಇದೆ, ನಿನ್ನೆ ಒಂದು ದಿನ ಕೇವಲ ₹50 ವ್ಯಾಪಾರವಾಗಿದೆ. ನಾನು ಅಲ್ಲಿರುವ ಉದ್ಯೋಗಿಗಳಿಗೆ ₹15 ಲಕ್ಷ ಪಾವತಿಸುತ್ತೇನೆ. ದಯವಿಟ್ಟು ನನ್ನ ನೋವನ್ನೂ ಅರ್ಥಮಾಡಿಕೊಳ್ಳಿ, ನಾನು ಮನುಷ್ಯಳು’ ಎಂದು ಪ್ರತಿಕ್ರಿಯಿಸಿದ್ದಾರೆ. </p><p>ಕ್ಷೇತ್ರದ ಸಂಸದೆಯಾಗಿ ಕಂಗನಾ ಅವರ ಪ್ರತಿಕ್ರಿಯೆ ಸ್ಥಳೀಯರನ್ನು ಕೆರಳಿಸಿದೆ. ಸದ್ಯ ಕಂಗನಾ ಅವರು ಮಾತನಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.</p><p>ಆ.25, 26ರಂದು ಹಿಮಾಚಲ ಪ್ರದೇಶದ ಕುಲು, ಮನಾಲಿ ಪ್ರದೇಶಗಳಲ್ಲಿ ಭಾರಿ ಮಳೆ ಸುರಿದ ಪರಿಣಾಮ ಪ್ರವಾಹ ಸ್ಥಿತಿ ಎದುರಾಗಿತ್ತು. ಬಿಯಾಸ್ ನದಿ ಅಪಾಯ ಮಟ್ಟ ಮೀರಿ ಹರಿದ ಪರಿಣಾಮ ಬಹುಅಂತಸ್ತಿನ ಹೋಟೆಲ್ ಸೇರಿ ನಾಲ್ಕು ಅಂಗಡಿಗಳು ಕೊಚ್ಚಿ ಹೋಗಿವೆ.</p>.ಹಿಮಾಚಲ: ಪ್ರವಾಹ ಪರಿಹಾರಕ್ಕೆ ನನ್ನ ಬಳಿ ದುಡ್ಡಿಲ್ಲ; ಕಂಗನಾ ಹೇಳಿಕೆಗೆ ಭಾರಿ ಟೀಕೆ.ಹಿಮಾಚಲ ಪ್ರದೇಶ|ಕಾಂಗ್ರೆಸ್ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ: ಕಂಗನಾ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>