<p><strong>ಮಂಡಿ (ಹಿಮಾಚಲ ಪ್ರದೇಶ):</strong> ಮಂಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕಂಗನಾ ರನೌತ್ ವಿರುದ್ಧ ಕಿಡಿಕಾರಿರುವ ಕಾಂಗ್ರೆಸ್ ನಾಯಕ ರಾಕೇಶ್ ಕುಮಾರ್ ಸಿಂಗ್, ‘ಸಹಜವಾಗಿರುವವರು ಆಧಾರರಹಿತ ಆರೋಪ ಮಾಡಲು ಸಾಧ್ಯವಿಲ್ಲ’ ಎಂದು ಹೇಳಿದ್ದಾರೆ.</p>.ಕಾಂಗ್ರೆಸ್ನ ರಾಜಕುಮಾರನಿಗೆ ಮಂಡಿ ಜನ ಪಾಠ ಕಲಿಸಲಿದ್ದಾರೆ: ಕಂಗನಾ ರನೌತ್.<p>ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಕಂಗನಾ ಅವರು ಮಾನಸಿಕ ತೊಂದರೆಯಿಂದ ಬಳಲುತ್ತಿದ್ದಾರೆ ಹೀಗಾಗಿ ಆಧಾರರಹಿತ ಹೇಳಿಕೆ ನೀಡುತ್ತಿದ್ದಾರೆ’ ಎಂದು ಹೇಳಿದ್ದಾರೆ.</p><p>ಕಂಗನಾ ಅವರನ್ನು ಮನೋವೈದ್ಯರೊಂದಿಗೆ ಪರೀಕ್ಷೆ ಮಾಡಿಸಬೇಕು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರಲ್ಲಿ ರಾಕೇಶ್ ಕುಮಾರ್ ಮನವಿ ಮಾಡಿದ್ದಾರೆ.</p>.ಟಿಬೆಟಿಯನ್ ಬೌದ್ಧ ಧರ್ಮ ಗುರು ದಲೈ ಲಾಮಾ ಭೇಟಿಯಾದ ನಟಿ ಕಂಗನಾ ರನೌತ್.<p>‘ಇತಿಹಾಸ ಹಾಗೂ ರಾಜಕೀಯದ ಬಗ್ಗೆ ಕಡಿಮೆ ಮಾಹಿತಿ ಇರುವ ಕಂಗನಾ ವಿವಾದಾತ್ಮಕ ಹೇಳಿಕೆ ನೀಡುತ್ತಿದ್ದಾರೆ. ಸಹಜವಾಗಿರುವವರು ಈ ರೀತಿಯ ಹೇಳಿಕೆ ನೀಡಲು ಸಾಧ್ಯವಿಲ್ಲ. ಬಿಜೆಪಿ ನಾಯಕರು ಕಂಗನಾಗೆ ಸ್ವಲ್ಪ ಇತಿಹಾಸದ ಬಗ್ಗೆ ಹೇಳಿ ಕೊಡಬೇಕು’ ಎಂದು ನುಡಿದಿದ್ದಾರೆ.</p><p>ಸುಭಾಷ್ಚಂದ್ರ ಬೋಸ್ ಅವರು ದೇಶದ ಮೊದಲ ಪ್ರಧಾನಿ ಎಂದು ಹೇಳಿರುವ ಕಂಗನಾ ಅವರ ವಿಡಿಯೊವನ್ನು ಉಲ್ಲೇಖಿಸಿ ಪ್ರತಿಕ್ರಿಯಿಸಿದ ಅವರು, ದೇಶದ ಮೊದಲ ಪ್ರಧಾನಿ ಜವಹರಲಾಲ್ ನೆಹರೂ ಎಂದು ಎರಡನೇ ತರಗತಿಯ ವಿದ್ಯಾರ್ಥಿಗೂ ತಿಳಿದಿದೆ ಎಂದು ಕುಟುಕಿದ್ದಾರೆ.</p>.ನನ್ನನ್ನು ಬೆದರಿಸಲಾಗದು; ವಿಕ್ರಮಾದಿತ್ಯ ಸಿಂಗ್ಗೆ ಕಂಗನಾ ತಿರುಗೇಟು. <p>ರೈತರ ಹೋರಾಟದ ವೇಳೆ ಕಂಗನಾ ಅವರು ರೈತ ವಿರೋಧಿ ಹೇಳಿಕೆಯನ್ನೂ ನೀಡಿದ್ದರು ಎಂದು ಆರೋಪಿಸಿರುವ ರಾಕೇಶ್, ರೈತರ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.</p><p>ರಾಕೇಶ್ ಕುಮಾರ್ ಮಂಡಿ ಹಾಗೂ ಜೋಗಿಂದರ್ನಗರ ಲೋಕಸಭಾ ಕ್ಷೇತ್ರದ ಉಸ್ತುವಾರಿಯಾಗಿದ್ದಾರೆ.</p> .ನಾನು ದನದ ಮಾಂಸ ಸೇರಿದಂತೆ ಯಾವುದೇ ಮಾಂಸ ತಿನ್ನುವುದಿಲ್ಲ; ಕಂಗನಾ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡಿ (ಹಿಮಾಚಲ ಪ್ರದೇಶ):</strong> ಮಂಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕಂಗನಾ ರನೌತ್ ವಿರುದ್ಧ ಕಿಡಿಕಾರಿರುವ ಕಾಂಗ್ರೆಸ್ ನಾಯಕ ರಾಕೇಶ್ ಕುಮಾರ್ ಸಿಂಗ್, ‘ಸಹಜವಾಗಿರುವವರು ಆಧಾರರಹಿತ ಆರೋಪ ಮಾಡಲು ಸಾಧ್ಯವಿಲ್ಲ’ ಎಂದು ಹೇಳಿದ್ದಾರೆ.</p>.ಕಾಂಗ್ರೆಸ್ನ ರಾಜಕುಮಾರನಿಗೆ ಮಂಡಿ ಜನ ಪಾಠ ಕಲಿಸಲಿದ್ದಾರೆ: ಕಂಗನಾ ರನೌತ್.<p>ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಕಂಗನಾ ಅವರು ಮಾನಸಿಕ ತೊಂದರೆಯಿಂದ ಬಳಲುತ್ತಿದ್ದಾರೆ ಹೀಗಾಗಿ ಆಧಾರರಹಿತ ಹೇಳಿಕೆ ನೀಡುತ್ತಿದ್ದಾರೆ’ ಎಂದು ಹೇಳಿದ್ದಾರೆ.</p><p>ಕಂಗನಾ ಅವರನ್ನು ಮನೋವೈದ್ಯರೊಂದಿಗೆ ಪರೀಕ್ಷೆ ಮಾಡಿಸಬೇಕು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರಲ್ಲಿ ರಾಕೇಶ್ ಕುಮಾರ್ ಮನವಿ ಮಾಡಿದ್ದಾರೆ.</p>.ಟಿಬೆಟಿಯನ್ ಬೌದ್ಧ ಧರ್ಮ ಗುರು ದಲೈ ಲಾಮಾ ಭೇಟಿಯಾದ ನಟಿ ಕಂಗನಾ ರನೌತ್.<p>‘ಇತಿಹಾಸ ಹಾಗೂ ರಾಜಕೀಯದ ಬಗ್ಗೆ ಕಡಿಮೆ ಮಾಹಿತಿ ಇರುವ ಕಂಗನಾ ವಿವಾದಾತ್ಮಕ ಹೇಳಿಕೆ ನೀಡುತ್ತಿದ್ದಾರೆ. ಸಹಜವಾಗಿರುವವರು ಈ ರೀತಿಯ ಹೇಳಿಕೆ ನೀಡಲು ಸಾಧ್ಯವಿಲ್ಲ. ಬಿಜೆಪಿ ನಾಯಕರು ಕಂಗನಾಗೆ ಸ್ವಲ್ಪ ಇತಿಹಾಸದ ಬಗ್ಗೆ ಹೇಳಿ ಕೊಡಬೇಕು’ ಎಂದು ನುಡಿದಿದ್ದಾರೆ.</p><p>ಸುಭಾಷ್ಚಂದ್ರ ಬೋಸ್ ಅವರು ದೇಶದ ಮೊದಲ ಪ್ರಧಾನಿ ಎಂದು ಹೇಳಿರುವ ಕಂಗನಾ ಅವರ ವಿಡಿಯೊವನ್ನು ಉಲ್ಲೇಖಿಸಿ ಪ್ರತಿಕ್ರಿಯಿಸಿದ ಅವರು, ದೇಶದ ಮೊದಲ ಪ್ರಧಾನಿ ಜವಹರಲಾಲ್ ನೆಹರೂ ಎಂದು ಎರಡನೇ ತರಗತಿಯ ವಿದ್ಯಾರ್ಥಿಗೂ ತಿಳಿದಿದೆ ಎಂದು ಕುಟುಕಿದ್ದಾರೆ.</p>.ನನ್ನನ್ನು ಬೆದರಿಸಲಾಗದು; ವಿಕ್ರಮಾದಿತ್ಯ ಸಿಂಗ್ಗೆ ಕಂಗನಾ ತಿರುಗೇಟು. <p>ರೈತರ ಹೋರಾಟದ ವೇಳೆ ಕಂಗನಾ ಅವರು ರೈತ ವಿರೋಧಿ ಹೇಳಿಕೆಯನ್ನೂ ನೀಡಿದ್ದರು ಎಂದು ಆರೋಪಿಸಿರುವ ರಾಕೇಶ್, ರೈತರ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.</p><p>ರಾಕೇಶ್ ಕುಮಾರ್ ಮಂಡಿ ಹಾಗೂ ಜೋಗಿಂದರ್ನಗರ ಲೋಕಸಭಾ ಕ್ಷೇತ್ರದ ಉಸ್ತುವಾರಿಯಾಗಿದ್ದಾರೆ.</p> .ನಾನು ದನದ ಮಾಂಸ ಸೇರಿದಂತೆ ಯಾವುದೇ ಮಾಂಸ ತಿನ್ನುವುದಿಲ್ಲ; ಕಂಗನಾ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>