<p><strong>ಗಯಾ ಜಿ</strong>: ಬಿಹಾರ ಚುನಾವಣೆವರೆಗೂ ನಿತೀಶ್ ಕುಮಾರ್ ಅವರನ್ನು ಬಳಸಿಕೊಂಡು ನಂತರ ಅವರ ಕೈಬಿಡುವುದೇ ಬಿಜೆಪಿಯ ಉದ್ದೇಶ ಎಂದು ಕಾಂಗ್ರೆಸ್ ನಾಯಕ ಕನ್ಹಯ್ಯ ಕುಮಾರ್ ಮಂಗಳವಾರ ಆರೋಪಿಸಿದರು.</p>.<p>ರಾಜ್ಯದಲ್ಲಿ ಸ್ವಂತ ಬಲದಲ್ಲಿ ಸರ್ಕಾರ ರಚಿಸಲು ಸಾಧ್ಯವಿಲ್ಲ ಎಂದು ಬಿಜೆಪಿಗೆ ತಿಳಿದಿದೆ. ಹೀಗಾಗಿ ಹಿಂಬಾಗಿಲ ಮೂಲಕ ಸರ್ಕಾರ ರಚಿಸಿ, ನಂತರ ತನ್ನದೇ ಪಕ್ಷದ ನಾಯಕರೊಬ್ಬರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಕೂರಿಸುವ ಇಚ್ಛೆಯನ್ನು ಅದು ಹೊಂದಿದೆ ಎಂದು ಹೇಳಿದರು.</p>.<p>‘ಮತದಾರನ ಅಧಿಕಾರ ಯಾತ್ರೆ’ ಸಂದರ್ಭದಲ್ಲಿ ‘ಪಿಟಿಐ’ ಸುದ್ದಿಸಂಸ್ಥೆ ಜತೆ ಮಾತನಾಡಿದ ಅವರು, ಚುನಾವಣಾ ಆಯೋಗವು ಬಿಜೆಪಿ ರೀತಿ ಮಾತನಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.</p>.<p>‘ಆಡಳಿತ ಪಕ್ಷ ಅಥವಾ ವಿಪಕ್ಷ ಎಂಬ ಭೇದ ಇಲ್ಲ ಎಂದು ಆಯೋಗ ಹೇಳಿದೆ. ಆದರೆ ನಿಜಕ್ಕೂ ಅದು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕಾದ ಅಗತ್ಯವಿದೆ’ ಎಂದು ಒತ್ತಿ ಹೇಳಿದರು.</p>.<p>ಚುನಾವಣಾ ಆಯೋಗವು ಜನರ ಮನಸ್ಸಿನಲ್ಲಿ ಸಂದೇಹಗಳನ್ನು ಹುಟ್ಟುಹಾಕಿರುವ ಕಾರಣ ಮತದಾರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಕುರಿತು ಬಿಕ್ಕಟ್ಟು ಉಂಟಾಗಿದೆ ಎಂದು ತಿಳಿಸಿದರು.</p>.<div><blockquote>ವಿರೋಧ ಪಕ್ಷಗಳದ್ದೇ ತಪ್ಪು ಎಂದು ಸಾಬೀತು ಮಾಡಲು ಮತ್ತು ಜನರಲ್ಲಿ ಗೊಂದಲ ಸೃಷ್ಟಿಸಲು ಆಯೋಗ ಯತ್ನಿಸುತ್ತಿದೆ </blockquote><span class="attribution">ಕನ್ಹಯ್ಯ ಕುಮಾರ್ ಕಾಂಗ್ರೆಸ್ ನಾಯಕ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಯಾ ಜಿ</strong>: ಬಿಹಾರ ಚುನಾವಣೆವರೆಗೂ ನಿತೀಶ್ ಕುಮಾರ್ ಅವರನ್ನು ಬಳಸಿಕೊಂಡು ನಂತರ ಅವರ ಕೈಬಿಡುವುದೇ ಬಿಜೆಪಿಯ ಉದ್ದೇಶ ಎಂದು ಕಾಂಗ್ರೆಸ್ ನಾಯಕ ಕನ್ಹಯ್ಯ ಕುಮಾರ್ ಮಂಗಳವಾರ ಆರೋಪಿಸಿದರು.</p>.<p>ರಾಜ್ಯದಲ್ಲಿ ಸ್ವಂತ ಬಲದಲ್ಲಿ ಸರ್ಕಾರ ರಚಿಸಲು ಸಾಧ್ಯವಿಲ್ಲ ಎಂದು ಬಿಜೆಪಿಗೆ ತಿಳಿದಿದೆ. ಹೀಗಾಗಿ ಹಿಂಬಾಗಿಲ ಮೂಲಕ ಸರ್ಕಾರ ರಚಿಸಿ, ನಂತರ ತನ್ನದೇ ಪಕ್ಷದ ನಾಯಕರೊಬ್ಬರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಕೂರಿಸುವ ಇಚ್ಛೆಯನ್ನು ಅದು ಹೊಂದಿದೆ ಎಂದು ಹೇಳಿದರು.</p>.<p>‘ಮತದಾರನ ಅಧಿಕಾರ ಯಾತ್ರೆ’ ಸಂದರ್ಭದಲ್ಲಿ ‘ಪಿಟಿಐ’ ಸುದ್ದಿಸಂಸ್ಥೆ ಜತೆ ಮಾತನಾಡಿದ ಅವರು, ಚುನಾವಣಾ ಆಯೋಗವು ಬಿಜೆಪಿ ರೀತಿ ಮಾತನಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.</p>.<p>‘ಆಡಳಿತ ಪಕ್ಷ ಅಥವಾ ವಿಪಕ್ಷ ಎಂಬ ಭೇದ ಇಲ್ಲ ಎಂದು ಆಯೋಗ ಹೇಳಿದೆ. ಆದರೆ ನಿಜಕ್ಕೂ ಅದು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕಾದ ಅಗತ್ಯವಿದೆ’ ಎಂದು ಒತ್ತಿ ಹೇಳಿದರು.</p>.<p>ಚುನಾವಣಾ ಆಯೋಗವು ಜನರ ಮನಸ್ಸಿನಲ್ಲಿ ಸಂದೇಹಗಳನ್ನು ಹುಟ್ಟುಹಾಕಿರುವ ಕಾರಣ ಮತದಾರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಕುರಿತು ಬಿಕ್ಕಟ್ಟು ಉಂಟಾಗಿದೆ ಎಂದು ತಿಳಿಸಿದರು.</p>.<div><blockquote>ವಿರೋಧ ಪಕ್ಷಗಳದ್ದೇ ತಪ್ಪು ಎಂದು ಸಾಬೀತು ಮಾಡಲು ಮತ್ತು ಜನರಲ್ಲಿ ಗೊಂದಲ ಸೃಷ್ಟಿಸಲು ಆಯೋಗ ಯತ್ನಿಸುತ್ತಿದೆ </blockquote><span class="attribution">ಕನ್ಹಯ್ಯ ಕುಮಾರ್ ಕಾಂಗ್ರೆಸ್ ನಾಯಕ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>