<p><strong>ಜೈಪುರ:</strong> ಉದಯಪುರದಲ್ಲಿ 2022ರಲ್ಲಿ ಹತ್ಯೆಗೀಡಾದ ದರ್ಜಿ ಕನ್ಹಯ್ಯ ಲಾಲ್ ಅವರ ಕುಟುಂಬಕ್ಕೆ ನ್ಯಾಯ ಒದಗಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಕಾಂಗ್ರೆಸ್ನ ಹಿರಿಯ ನಾಯಕ ಅಶೋಕ್ ಗೆಹಲೋತ್ ಶನಿವಾರ ಆರೋಪಿಸಿದರು. </p>.<p>ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜಸ್ಥಾನಕ್ಕೆ ಶನಿವಾರ ಭೇಟಿನೀಡಿದ ಕುರಿತು ಮಾತನಾಡಿದ ಅಶೋಕ್ ಗೆಹಲೋತ್, ‘ಅಮಿತ್ ಶಾ ಅವರು ತಮ್ಮ ರಾಜಕೀಯ ಮೌನವನ್ನು ಮುರಿಯಬೇಕು ಮತ್ತು ಕನ್ಹಯ್ಯ ಲಾಲ್ ಕುಟುಂಬಕ್ಕೆ ಯಾವಾಗ ನ್ಯಾಯ ಸಿಗುತ್ತದೆ ಎಂಬುದನ್ನು ಹೇಳಬೇಕು’ ಎಂದರು.</p>.<p>‘ಕನ್ಹಯ್ಯ ಹತ್ಯೆಯ ಘಟನೆ ನಡೆದ ರಾತ್ರಿಯಂದೇ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಪ್ರಕರಣವನ್ನು ಪೊಲೀಸರಿಂದ ವಹಿಸಿಕೊಂಡಿತು. ಎನ್ಐಎಯು ಕೇಂದ್ರ ಗೃಹ ಸಚಿವಾಲಯದಡಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಎನ್ಐಎ ತನಿಖೆ ನಡೆಸುತ್ತಿದ್ದರೂ ಇನ್ನೂ ಏಕೆ ಕನ್ಹಯ್ಯ ಕುಟುಂಬಕ್ಕೆ ನ್ಯಾಯ ದೊರಕಿಲ್ಲ’ ಎಂದು ಪ್ರಶ್ನಿಸಿದರು. </p>.<p>‘ಕನ್ಹಯ್ಯ ಕುಟುಂಬಕ್ಕೆ ಪರಿಹಾರ ನೀಡಿರುವುದಾಗಿ ಅಮಿತ್ ಶಾ ಅವರು ಚುನಾವಣೆ ಸಮಯದಲ್ಲಿ ಸುಳ್ಳು ಪ್ರಚಾರ ಮಾಡುತ್ತಿದ್ದಾರೆ. ಆದರೆ ₹50 ಲಕ್ಷವನ್ನು ಪರಿಹಾರವನ್ನು ಹಾಗೂ ಇಬ್ಬರೂ ಪುತ್ರರಿಗೆ ಸರ್ಕಾರಿ ನೌಕರಿ ನೀಡಿರುವುದು ಕಾಂಗ್ರೆಸ್ ಸರ್ಕಾರ ಎಂದು ಕನ್ಹಯ್ಯ ಅವರ ಕುಟುಂಬ ಹೇಳಿದೆ. ರಾಜಸ್ಥಾನದ ಜನರನ್ನು ದಾರಿ ತಪ್ಪಿಸಿದ್ದಕ್ಕಾಗಿ ಬಿಜೆಪಿ ಕ್ಷಮೆಯಾಚಿಸಬೇಕು’ ಎಂದರು.</p>.<p>ಸಾಮಾಜಿಕ ಜಾಲತಾಣದಲ್ಲಿ ಇಸ್ಲಾಂ ವಿರುದ್ಧದ ಪೋಸ್ಟ್ ಅನ್ನು ಬೆಂಬಲಿಸಿದ್ದರು ಎಂಬ ಕಾರಣಕ್ಕೆ, ತಮ್ಮ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಕನ್ಹಯ್ಯ ಅವರನ್ನು ಇಬ್ಬರು ವ್ಯಕ್ತಿಗಳು ಹತ್ಯೆ ಮಾಡಿದರು. ಈ ಘಟನೆಯು ದೇಶದಾದ್ಯಂತ ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು.</p>.<div><blockquote>ರಾಜಸ್ಥಾನದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ನೆಲಸಮವಾಗಿದೆ. ಸುಲಿಗೆ ಅತ್ಯಾಚಾರ ಹಾಗೂ ಮಾಫಿಯಾ ಚಟುವಟಿಕೆಗಳು ಹೆಚ್ಚಾಗುತ್ತಿವೆ. ಬಾಷಣಗಳ ಬದಲು ಗೃಹ ಸಚಿವರು ರಾಜಸ್ಥಾನದ ಪರಿಸ್ಥಿತಿ ಕುರಿತು ಉತ್ತರಿಸಬೇಕು</blockquote><span class="attribution"> –ಅಶೋಕ್ ಗೆಹಲೋತ್, ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಕಾಂಗ್ರೆಸ್ ನಾಯಕ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೈಪುರ:</strong> ಉದಯಪುರದಲ್ಲಿ 2022ರಲ್ಲಿ ಹತ್ಯೆಗೀಡಾದ ದರ್ಜಿ ಕನ್ಹಯ್ಯ ಲಾಲ್ ಅವರ ಕುಟುಂಬಕ್ಕೆ ನ್ಯಾಯ ಒದಗಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಕಾಂಗ್ರೆಸ್ನ ಹಿರಿಯ ನಾಯಕ ಅಶೋಕ್ ಗೆಹಲೋತ್ ಶನಿವಾರ ಆರೋಪಿಸಿದರು. </p>.<p>ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜಸ್ಥಾನಕ್ಕೆ ಶನಿವಾರ ಭೇಟಿನೀಡಿದ ಕುರಿತು ಮಾತನಾಡಿದ ಅಶೋಕ್ ಗೆಹಲೋತ್, ‘ಅಮಿತ್ ಶಾ ಅವರು ತಮ್ಮ ರಾಜಕೀಯ ಮೌನವನ್ನು ಮುರಿಯಬೇಕು ಮತ್ತು ಕನ್ಹಯ್ಯ ಲಾಲ್ ಕುಟುಂಬಕ್ಕೆ ಯಾವಾಗ ನ್ಯಾಯ ಸಿಗುತ್ತದೆ ಎಂಬುದನ್ನು ಹೇಳಬೇಕು’ ಎಂದರು.</p>.<p>‘ಕನ್ಹಯ್ಯ ಹತ್ಯೆಯ ಘಟನೆ ನಡೆದ ರಾತ್ರಿಯಂದೇ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಪ್ರಕರಣವನ್ನು ಪೊಲೀಸರಿಂದ ವಹಿಸಿಕೊಂಡಿತು. ಎನ್ಐಎಯು ಕೇಂದ್ರ ಗೃಹ ಸಚಿವಾಲಯದಡಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಎನ್ಐಎ ತನಿಖೆ ನಡೆಸುತ್ತಿದ್ದರೂ ಇನ್ನೂ ಏಕೆ ಕನ್ಹಯ್ಯ ಕುಟುಂಬಕ್ಕೆ ನ್ಯಾಯ ದೊರಕಿಲ್ಲ’ ಎಂದು ಪ್ರಶ್ನಿಸಿದರು. </p>.<p>‘ಕನ್ಹಯ್ಯ ಕುಟುಂಬಕ್ಕೆ ಪರಿಹಾರ ನೀಡಿರುವುದಾಗಿ ಅಮಿತ್ ಶಾ ಅವರು ಚುನಾವಣೆ ಸಮಯದಲ್ಲಿ ಸುಳ್ಳು ಪ್ರಚಾರ ಮಾಡುತ್ತಿದ್ದಾರೆ. ಆದರೆ ₹50 ಲಕ್ಷವನ್ನು ಪರಿಹಾರವನ್ನು ಹಾಗೂ ಇಬ್ಬರೂ ಪುತ್ರರಿಗೆ ಸರ್ಕಾರಿ ನೌಕರಿ ನೀಡಿರುವುದು ಕಾಂಗ್ರೆಸ್ ಸರ್ಕಾರ ಎಂದು ಕನ್ಹಯ್ಯ ಅವರ ಕುಟುಂಬ ಹೇಳಿದೆ. ರಾಜಸ್ಥಾನದ ಜನರನ್ನು ದಾರಿ ತಪ್ಪಿಸಿದ್ದಕ್ಕಾಗಿ ಬಿಜೆಪಿ ಕ್ಷಮೆಯಾಚಿಸಬೇಕು’ ಎಂದರು.</p>.<p>ಸಾಮಾಜಿಕ ಜಾಲತಾಣದಲ್ಲಿ ಇಸ್ಲಾಂ ವಿರುದ್ಧದ ಪೋಸ್ಟ್ ಅನ್ನು ಬೆಂಬಲಿಸಿದ್ದರು ಎಂಬ ಕಾರಣಕ್ಕೆ, ತಮ್ಮ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಕನ್ಹಯ್ಯ ಅವರನ್ನು ಇಬ್ಬರು ವ್ಯಕ್ತಿಗಳು ಹತ್ಯೆ ಮಾಡಿದರು. ಈ ಘಟನೆಯು ದೇಶದಾದ್ಯಂತ ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು.</p>.<div><blockquote>ರಾಜಸ್ಥಾನದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ನೆಲಸಮವಾಗಿದೆ. ಸುಲಿಗೆ ಅತ್ಯಾಚಾರ ಹಾಗೂ ಮಾಫಿಯಾ ಚಟುವಟಿಕೆಗಳು ಹೆಚ್ಚಾಗುತ್ತಿವೆ. ಬಾಷಣಗಳ ಬದಲು ಗೃಹ ಸಚಿವರು ರಾಜಸ್ಥಾನದ ಪರಿಸ್ಥಿತಿ ಕುರಿತು ಉತ್ತರಿಸಬೇಕು</blockquote><span class="attribution"> –ಅಶೋಕ್ ಗೆಹಲೋತ್, ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಕಾಂಗ್ರೆಸ್ ನಾಯಕ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>