<p><strong>ಜೈಪುರ: </strong>ನ್ಯಾಯಾಲಯದಲ್ಲಿ ಟೈಲರ್ ಕನ್ಹಯ್ಯಾ ಲಾಲ್ ಹತ್ಯೆ ಪ್ರಕರಣದ ವಿಚಾರಣೆ ವಿಳಂಬವಾಗುತ್ತಿರುವ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ಪಷ್ಟಪಡಿಸಬೇಕು ಎಂದು ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಗುರುವಾರ ಹೇಳಿದ್ದಾರೆ.</p><p>ಮೂರು ವರ್ಷಗಳಿಂದ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ತನಿಖೆ ನಡೆಸುತ್ತಿದ್ದು ಯಾವುದೇ ಪ್ರಗತಿ ಕಂಡುಬಂದಿಲ್ಲ, ಇದಕ್ಕೆ ಅಮಿತ್ ಶಾ ಉತ್ತರಿಸಬೇಕು ಎಂದು ಅವರು ಒತ್ತಾಯಿಸಿದರು.</p><p>2022ರ ಜೂನ್ನಲ್ಲಿ ಉದಯಪುರದಲ್ಲಿ ಕನ್ಹಯ್ಯಾ ಲಾಲ್ ಅವರನ್ನು ಇಬ್ಬರು ವ್ಯಕ್ತಿಗಳು ಚೂರಿಯಿಂದ ಬರ್ಬರವಾಗಿ ಹತ್ಯೆ ಮಾಡಿದ್ದರು. ಆ ಸಮಯದಲ್ಲಿ ಅಶೋಕ ಗೆಹಲೋತ್ ಮುಖ್ಯಮಂತ್ರಿಯಾಗಿದ್ದರು.</p><p>ಘಟನೆ ನಡೆದ ನಾಲ್ಕು ಗಂಟೆಗಳ ಒಳಗೆ ರಾಜಸ್ಥಾನದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು. ಎನ್ಐಎ ರಾತ್ರಿಯೇ ಪ್ರಕರಣವನ್ನು ತನಿಖೆಗೆ ಕೈಗೆತ್ತಿಕೊಂಡಿತ್ತು. ಮೂರು ವರ್ಷಗಳು ಕಳೆದರೂ ಪ್ರಕರಣದ ಬಗ್ಗೆ ಯಾವುದೇ ಪ್ರಗತಿ ಸಾಧಿಸಲು ಎನ್ಐಎ ವಿಫಲವಾಗಿದೆ ಎಂದು ಅಶೋಕ್ ಗೆಹಲೋತ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.</p><p>ಹಲವು ಪ್ರಕರಣಗಳಲ್ಲಿ ಕೆಲವೇ ತಿಂಗಳಲ್ಲಿ ನ್ಯಾಯಾಲಯಗಳು ತೀರ್ಪು ಪ್ರಕಟಿಸುತ್ತವೆ. ಆದರೆ ಈ ಪ್ರಕರಣ ಇನ್ನೂ ಬಾಕಿ ಇದೆ. ಸರ್ಕಾರದ ನಡೆಯ ಬಗ್ಗೆ ಜನರಲ್ಲಿ ಹಲವು ಪ್ರಶ್ನೆಗಳು ಹುಟ್ಟಿವೆ ಎಂದರು.</p><p>ನಾವು ಕನ್ಹಯ್ಯಾ ಲಾಲ್ ಅವರ ಇಬ್ಬರು ಮಕ್ಕಳಿಗೆ ಸರ್ಕಾರಿ ನೌಕರಿ ಸೇರಿದಂತೆ ₹ 50 ಲಕ್ಷ ಮೊತ್ತದ ಪರಿಹಾರ ಪ್ಯಾಕೇಜ್ ನೀಡಿದ್ದೇವೆ. ಸ್ವಾತಂತ್ರ್ಯದ ನಂತರ ನೀಡಿದ ಅತಿದೊಡ್ಡ ಪರಿಹಾರ ಪ್ಯಾಕೇಜ್ ಇದಾಗಿದೆ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೈಪುರ: </strong>ನ್ಯಾಯಾಲಯದಲ್ಲಿ ಟೈಲರ್ ಕನ್ಹಯ್ಯಾ ಲಾಲ್ ಹತ್ಯೆ ಪ್ರಕರಣದ ವಿಚಾರಣೆ ವಿಳಂಬವಾಗುತ್ತಿರುವ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ಪಷ್ಟಪಡಿಸಬೇಕು ಎಂದು ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಗುರುವಾರ ಹೇಳಿದ್ದಾರೆ.</p><p>ಮೂರು ವರ್ಷಗಳಿಂದ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ತನಿಖೆ ನಡೆಸುತ್ತಿದ್ದು ಯಾವುದೇ ಪ್ರಗತಿ ಕಂಡುಬಂದಿಲ್ಲ, ಇದಕ್ಕೆ ಅಮಿತ್ ಶಾ ಉತ್ತರಿಸಬೇಕು ಎಂದು ಅವರು ಒತ್ತಾಯಿಸಿದರು.</p><p>2022ರ ಜೂನ್ನಲ್ಲಿ ಉದಯಪುರದಲ್ಲಿ ಕನ್ಹಯ್ಯಾ ಲಾಲ್ ಅವರನ್ನು ಇಬ್ಬರು ವ್ಯಕ್ತಿಗಳು ಚೂರಿಯಿಂದ ಬರ್ಬರವಾಗಿ ಹತ್ಯೆ ಮಾಡಿದ್ದರು. ಆ ಸಮಯದಲ್ಲಿ ಅಶೋಕ ಗೆಹಲೋತ್ ಮುಖ್ಯಮಂತ್ರಿಯಾಗಿದ್ದರು.</p><p>ಘಟನೆ ನಡೆದ ನಾಲ್ಕು ಗಂಟೆಗಳ ಒಳಗೆ ರಾಜಸ್ಥಾನದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು. ಎನ್ಐಎ ರಾತ್ರಿಯೇ ಪ್ರಕರಣವನ್ನು ತನಿಖೆಗೆ ಕೈಗೆತ್ತಿಕೊಂಡಿತ್ತು. ಮೂರು ವರ್ಷಗಳು ಕಳೆದರೂ ಪ್ರಕರಣದ ಬಗ್ಗೆ ಯಾವುದೇ ಪ್ರಗತಿ ಸಾಧಿಸಲು ಎನ್ಐಎ ವಿಫಲವಾಗಿದೆ ಎಂದು ಅಶೋಕ್ ಗೆಹಲೋತ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.</p><p>ಹಲವು ಪ್ರಕರಣಗಳಲ್ಲಿ ಕೆಲವೇ ತಿಂಗಳಲ್ಲಿ ನ್ಯಾಯಾಲಯಗಳು ತೀರ್ಪು ಪ್ರಕಟಿಸುತ್ತವೆ. ಆದರೆ ಈ ಪ್ರಕರಣ ಇನ್ನೂ ಬಾಕಿ ಇದೆ. ಸರ್ಕಾರದ ನಡೆಯ ಬಗ್ಗೆ ಜನರಲ್ಲಿ ಹಲವು ಪ್ರಶ್ನೆಗಳು ಹುಟ್ಟಿವೆ ಎಂದರು.</p><p>ನಾವು ಕನ್ಹಯ್ಯಾ ಲಾಲ್ ಅವರ ಇಬ್ಬರು ಮಕ್ಕಳಿಗೆ ಸರ್ಕಾರಿ ನೌಕರಿ ಸೇರಿದಂತೆ ₹ 50 ಲಕ್ಷ ಮೊತ್ತದ ಪರಿಹಾರ ಪ್ಯಾಕೇಜ್ ನೀಡಿದ್ದೇವೆ. ಸ್ವಾತಂತ್ರ್ಯದ ನಂತರ ನೀಡಿದ ಅತಿದೊಡ್ಡ ಪರಿಹಾರ ಪ್ಯಾಕೇಜ್ ಇದಾಗಿದೆ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>