<p><strong>ಚೆನ್ನೈ:</strong> ತಮಿಳುನಾಡಿನಲ್ಲಿ ನೂತನ ಸರ್ಕಾರ ರಚನೆ ಸಂಬಂಧ ರಾಜಕೀಯ ಅನಿಶ್ಚಿತತೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಡಿಎಂಕೆ ನಾಯಕಿ ಕನಿಮೊಳಿ ಕರುಣಾನಿಧಿ, 'ನಮಗೆ ರಾಜ್ಯಪಾಲರ ಅಗತ್ಯವೇ ಇಲ್ಲ' ಎಂದು ಹೇಳಿದ್ದಾರೆ. </p><p>'ಡಿಎಂಕೆ ಪಕ್ಷದ ನಿಲುವಿನಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ನಮಗೆ ರಾಜ್ಯಪಾಲರ ಅವಶ್ಯಕತೆ ಇಲ್ಲ' ಎಂದು ಅವರು ಪುನರುಚ್ಚರಿಸಿದ್ದಾರೆ. </p><p>ಪಿಟಿಐ ವಿಡಿಯೊಗೆ ಪ್ರತಿಕ್ರಿಯಿಸಿದ ಅವರು ರಾಜ್ಯಪಾಲರ ಹುದ್ದೆಯನ್ನು ಅನೂರ್ಜಿತಗೊಳಿಸಬೇಕೆಂಬ ಡಿಎಂಕೆ ಬೇಡಿಕೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ತಿಳಿಸಿದ್ದಾರೆ. </p>.ಸರ್ಕಾರ ರಚಿಸಲು ಬಹುಮತ ಇಲ್ಲ: ಟಿವಿಕೆ ಮುಖ್ಯಸ್ಥ ವಿಜಯ್ಗೆ ತಿಳಿಸಿದ ರಾಜ್ಯಪಾಲ.ತಮಿಳುನಾಡು ಸರ್ಕಾರ ರಚನೆಗೆ ಕಸರತ್ತು: ರಾಜ್ಯಪಾಲರ ಮುಂದಿರುವ ಆಯ್ಕೆಗಳೇನು? . <p>ಟಿವಿಕೆ ಅತಿ ದೊಡ್ಡ ಪಕ್ಷವಾಗಿರುವ ಹೊರತಾಗಿಯೂ ಹೊಸ ಸರ್ಕಾರ ರಚನೆಗೆ ಬಹುಮತದ ಕೊರತೆಯಿದೆ ಎಂಬ ಕಾರಣ ನೀಡಿ ರಾಜ್ಯಪಾಲರು ಸರ್ಕಾರ ರಚನೆಗೆ ಆಹ್ವಾನ ನೀಡಿರಲಿಲ್ಲ. ಈ ಕುರಿತು ಕೇಳಿದಾಗ, 'ರಾಜ್ಯಪಾಲರ ಕಚೇರಿ ಹಾಗೂ ರಾಜಕೀಯ ಹಿತಾಸಕ್ತಿಗಳ ನಡುವಣ ಆಂತರಿಕ ಸಂರ್ಘಷ ನಡೆಯುತ್ತಿದೆ. ಇದು ಹಲವಾರು ಪ್ರಶ್ನೆಗಳನ್ನು ಹುಟ್ಟು ಹಾಕುತ್ತದೆ. ಸಾಂವಿಧಾನಿಕ ಕಾರ್ಯವಿಧಾನಗಳ ಕುರಿತು ಆತ್ಮಾವಲೋಕನ ಮಾಡಬೇಕಿದೆ' ಎಂದು ಹೇಳಿದ್ದಾರೆ. </p><p>'ಚುನಾವಣಾ ಫಲಿತಾಂಶದಲ್ಲಿ ಸ್ಪಷ್ಟ ಜನಾದೇಶದ ಅಭಾವ ಕಾಡುತ್ತಿದೆ. ಇದು ಈಗಿನ ರಾಜಕೀಯ ಅನಿಶ್ಚಿತತೆಗೆ ಕಾರಣವಾಗಿರಬಹುದು. ಜನರು ಏನು ನಿರ್ಧರಿಸುತ್ತಾರೆಯೇ ಅದುವೇ ಸರ್ವೋಚ್ಚ. ಅದನ್ನು ಗೌರವಿಸಬೇಕು' ಎಂದು ಹೇಳಿದ್ದಾರೆ. </p><p><strong>ಡಿಎಂಕೆ-ಎಐಎಡಿಎಂಕೆ ಮೈತ್ರಿ ನಿರಾಕರಿಸಿದ ಕನಿಮೋಳಿ...</strong></p><p>ಏತನ್ಮಧ್ಯೆ ನೂತನ ಸರ್ಕಾರ ರಚಿಸಲು ಎಐಎಡಿಎಂಕೆಗೆ ಡಿಎಂಕೆ ಬಾಹ್ಯ ಬೆಂಬಲ ನೀಡಲಿದೆ ಎಂಬ ವರದಿಗಳನ್ನು ಕನಿಮೊಳಿ ತಳ್ಳಿ ಹಾಕಿದರು. 'ಇವೆಲ್ಲವೂ ಬರಿ ವದಂತಿಗಳಷ್ಟೇ. ಎಲ್ಲದಕ್ಕೂ ಪ್ರತಿಕ್ರಿಯಿಸಲು ಸಾಧ್ಯವಿಲ್ಲ' ಎಂದು ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ:</strong> ತಮಿಳುನಾಡಿನಲ್ಲಿ ನೂತನ ಸರ್ಕಾರ ರಚನೆ ಸಂಬಂಧ ರಾಜಕೀಯ ಅನಿಶ್ಚಿತತೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಡಿಎಂಕೆ ನಾಯಕಿ ಕನಿಮೊಳಿ ಕರುಣಾನಿಧಿ, 'ನಮಗೆ ರಾಜ್ಯಪಾಲರ ಅಗತ್ಯವೇ ಇಲ್ಲ' ಎಂದು ಹೇಳಿದ್ದಾರೆ. </p><p>'ಡಿಎಂಕೆ ಪಕ್ಷದ ನಿಲುವಿನಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ನಮಗೆ ರಾಜ್ಯಪಾಲರ ಅವಶ್ಯಕತೆ ಇಲ್ಲ' ಎಂದು ಅವರು ಪುನರುಚ್ಚರಿಸಿದ್ದಾರೆ. </p><p>ಪಿಟಿಐ ವಿಡಿಯೊಗೆ ಪ್ರತಿಕ್ರಿಯಿಸಿದ ಅವರು ರಾಜ್ಯಪಾಲರ ಹುದ್ದೆಯನ್ನು ಅನೂರ್ಜಿತಗೊಳಿಸಬೇಕೆಂಬ ಡಿಎಂಕೆ ಬೇಡಿಕೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ತಿಳಿಸಿದ್ದಾರೆ. </p>.ಸರ್ಕಾರ ರಚಿಸಲು ಬಹುಮತ ಇಲ್ಲ: ಟಿವಿಕೆ ಮುಖ್ಯಸ್ಥ ವಿಜಯ್ಗೆ ತಿಳಿಸಿದ ರಾಜ್ಯಪಾಲ.ತಮಿಳುನಾಡು ಸರ್ಕಾರ ರಚನೆಗೆ ಕಸರತ್ತು: ರಾಜ್ಯಪಾಲರ ಮುಂದಿರುವ ಆಯ್ಕೆಗಳೇನು? . <p>ಟಿವಿಕೆ ಅತಿ ದೊಡ್ಡ ಪಕ್ಷವಾಗಿರುವ ಹೊರತಾಗಿಯೂ ಹೊಸ ಸರ್ಕಾರ ರಚನೆಗೆ ಬಹುಮತದ ಕೊರತೆಯಿದೆ ಎಂಬ ಕಾರಣ ನೀಡಿ ರಾಜ್ಯಪಾಲರು ಸರ್ಕಾರ ರಚನೆಗೆ ಆಹ್ವಾನ ನೀಡಿರಲಿಲ್ಲ. ಈ ಕುರಿತು ಕೇಳಿದಾಗ, 'ರಾಜ್ಯಪಾಲರ ಕಚೇರಿ ಹಾಗೂ ರಾಜಕೀಯ ಹಿತಾಸಕ್ತಿಗಳ ನಡುವಣ ಆಂತರಿಕ ಸಂರ್ಘಷ ನಡೆಯುತ್ತಿದೆ. ಇದು ಹಲವಾರು ಪ್ರಶ್ನೆಗಳನ್ನು ಹುಟ್ಟು ಹಾಕುತ್ತದೆ. ಸಾಂವಿಧಾನಿಕ ಕಾರ್ಯವಿಧಾನಗಳ ಕುರಿತು ಆತ್ಮಾವಲೋಕನ ಮಾಡಬೇಕಿದೆ' ಎಂದು ಹೇಳಿದ್ದಾರೆ. </p><p>'ಚುನಾವಣಾ ಫಲಿತಾಂಶದಲ್ಲಿ ಸ್ಪಷ್ಟ ಜನಾದೇಶದ ಅಭಾವ ಕಾಡುತ್ತಿದೆ. ಇದು ಈಗಿನ ರಾಜಕೀಯ ಅನಿಶ್ಚಿತತೆಗೆ ಕಾರಣವಾಗಿರಬಹುದು. ಜನರು ಏನು ನಿರ್ಧರಿಸುತ್ತಾರೆಯೇ ಅದುವೇ ಸರ್ವೋಚ್ಚ. ಅದನ್ನು ಗೌರವಿಸಬೇಕು' ಎಂದು ಹೇಳಿದ್ದಾರೆ. </p><p><strong>ಡಿಎಂಕೆ-ಎಐಎಡಿಎಂಕೆ ಮೈತ್ರಿ ನಿರಾಕರಿಸಿದ ಕನಿಮೋಳಿ...</strong></p><p>ಏತನ್ಮಧ್ಯೆ ನೂತನ ಸರ್ಕಾರ ರಚಿಸಲು ಎಐಎಡಿಎಂಕೆಗೆ ಡಿಎಂಕೆ ಬಾಹ್ಯ ಬೆಂಬಲ ನೀಡಲಿದೆ ಎಂಬ ವರದಿಗಳನ್ನು ಕನಿಮೊಳಿ ತಳ್ಳಿ ಹಾಕಿದರು. 'ಇವೆಲ್ಲವೂ ಬರಿ ವದಂತಿಗಳಷ್ಟೇ. ಎಲ್ಲದಕ್ಕೂ ಪ್ರತಿಕ್ರಿಯಿಸಲು ಸಾಧ್ಯವಿಲ್ಲ' ಎಂದು ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>