<p>ರಾಷ್ಟ್ರೀಯ, ಅಂತರರಾಷ್ಟ್ರೀಯ, ಕ್ರೀಡೆ ಸೇರಿದಂತೆ ಈ ದಿನದ 10 ಪ್ರಮುಖ ಸುದ್ದಿಗಳು ಇಲ್ಲಿವೆ....</p>.<p> ಹೊರ್ಮುಜ್ ಜಲಸಂಧಿ ವಿಚಾರದಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ಉದ್ವಿಗ್ನ ಸ್ಥಿತಿ ಮತ್ತಷ್ಟು ಹೆಚ್ಚಿರುವುದರಿಂದ ಎರಡನೇ ಸುತ್ತಿನ ಮಾತುಕತೆ ಬಗ್ಗೆ ಅನಿಶ್ಚಿತತೆ ಮುಂದುವರಿದಿದೆ. ಅಮೆರಿಕವು ಮಾತುಕತೆಗೆ ಉತ್ಸುಕತೆ ತೋರಿದೆಯಾದರೂ, ಇರಾನ್ ಸಕಾರಾತ್ಮಕವಾಗಿ ಸ್ಪಂದಿಸಿಲ್ಲ.</p>.ಅಮೆರಿಕ ಜತೆ ಮಾತುಕತೆಗೆ ಇರಾನ್ ಹಿಂದೇಟು: ಹೊರ್ಮುಜ್ ನಿರ್ಬಂಧ ಮುಂದುವರಿಕೆ.<p>ಪ್ರಧಾನಿ ನರೇಂದ್ರ ಮೋದಿ ಅವರಿಂದ ಮಂಗಳವಾರ ಉದ್ಘಾಟನೆಗೊಳ್ಳಬೇಕಿದ್ದ ರಾಜಸ್ಥಾನದ ಪೆಟ್ರೋಲಿಯಂ ಉತ್ಪನ್ನಗಳ ಸಂಸ್ಕರಣಾ ಘಟಕವೊಂದರಲ್ಲಿ ಸೋಮವಾರ ಬೆಂಕಿ ಅವಘಡ ಸಂಭವಿಸಿದೆ.</p>.ಪ್ರಧಾನಿ ಮೋದಿ ಉದ್ಘಾಟಿಸಬೇಕಿದ್ದ ಘಟಕಕ್ಕೆ ಬೆಂಕಿ: ಕಾರ್ಯಕ್ರಮ ಮುಂದೂಡಿಕೆ.<p>ಕೌಟುಂಬಿಕ ಕಾರಣದಿಂದ ವ್ಯಕ್ತಿಯೊಬ್ಬ ತನ್ನ ಏಳು ಮಕ್ಕಳು ಸೇರಿದಂತೆ ಎಂಟು ಮಕ್ಕಳನ್ನು ಗುಂಡಿಕ್ಕಿ ಹತ್ಯೆ ಮಾಡಿದ ಪ್ರಕರಣ ಅಮೆರಿಕದ ದಕ್ಷಿಣ ಭಾಗದ ಲೂಸಿಯಾನದಲ್ಲಿ ನಡೆದಿದೆ. </p>.ಅಮೆರಿಕ: ತನ್ನದೇ 7 ಮಕ್ಕಳನ್ನು ಗುಂಡಿಕ್ಕಿ ಕೊಂದ ವ್ಯಕ್ತಿ.<p>ಕಲಬುರಗಿ, ಹಾಸನ, ಉಡುಪಿ ಸೇರಿದಂತೆ 11 ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಏ.21ರಂದು ಗುಡುಗು ಸಹಿತ ಹಗುರ ಮಳೆಯಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.</p>.Karnataka Rains: 11 ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ.<p>ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಮುಖ್ಯ ಶಿಕ್ಷಕರ ಹುದ್ದೆಗೆ ಬಡ್ತಿ ನೀಡುವ ಪ್ರಕ್ರಿಯೆ ಮಂಗಳವಾರದಿಂದ (ಏ.21) ಆರಂಭವಾಗಲಿದೆ.</p>.ಶಾಲಾ ಶಿಕ್ಷಕರಿಗೆ ಮುಖ್ಯ ಶಿಕ್ಷಕರ ಹುದ್ದೆಗೆ ಬಡ್ತಿ: ಪ್ರಕ್ರಿಯೆ ಇಂದು ಆರಂಭ.<p>ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಏಪ್ರಿಲ್ 23ರಂದು ಮೊದಲ ಹಂತದ ಮತದಾನ ನಡೆಯಲಿದ್ದು. ಮುಕ್ತ, ನ್ಯಾಯಯುತ ಹಾಗೂ ಪಾರದರ್ಶಕ ಚುನಾವಣೆ ನಡೆಸಲಾಗುವುದು ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಹೇಳಿದ್ದಾರೆ.</p>.ಪಶ್ಚಿಮ ಬಂಗಾಳದಲ್ಲಿ ನ್ಯಾಯಯುತ, ಪಾರದರ್ಶಕ ಚುನಾವಣೆ ನಡೆಸುತ್ತೇವೆ: ಸಿಇಸಿ .<p> ಭಾರತ ಮತ್ತು ದಕ್ಷಿಣ ಕೊರಿಯಾ ನಡುವಿನ ಆರ್ಥಿಕ ಸಂಬಂಧವನ್ನು ಮತ್ತಷ್ಟು ವೃದ್ಧಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ದಕ್ಷಿಣ ಕೊರಿಯಾದ ಅಧ್ಯಕ್ಷ ಲೀ ಜೇ ಮ್ಯುಂಗ್ ಅವರು ಮಹತ್ವದ ಚರ್ಚೆ ನಡೆಸಿದ್ದಾರೆ.</p>.ಭಾರತ–ದಕ್ಷಿಣ ಕೊರಿಯಾ ಒಪ್ಪಂದ: ಮೋದಿ–ಮ್ಯುಂಗ್ ಮಾತುಕತೆಯ ಮುಖ್ಯಾಂಶಗಳು ಇಲ್ಲಿವೆ.<p>ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದ್ವಿಪೌರತ್ವ ಹೊಂದಿದ್ದಾರೆ ಎಂಬ ಆರೋಪದ ಕುರಿತ ಪ್ರಕರಣದ ವಿಚಾರಣೆಯಿಂದ ಅಲಹಾಬಾದ್ ಹೈಕೋರ್ಟ್ನ ಲಖನೌ ಪೀಠದ ನ್ಯಾಯಮೂರ್ತಿ ಸುಭಾಷ್ ವಿದ್ಯಾರ್ಥಿ ಅವರು ಸೋಮವಾರ ಹಿಂದೆ ಸರಿದಿದ್ದಾರೆ.</p>.ರಾಹುಲ್ ಗಾಂಧಿ ದ್ವಿಪೌರತ್ವ ವಿವಾದ: ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಮೂರ್ತಿ.<p>ತೆಲುಗು ನಟ ಅಲ್ಲು ಅರ್ಜುನ್, ಅಟ್ಲಿ ನಿರ್ದೇಶನದ ಹೊಸ ಸಿನಿಮಾದಲ್ಲಿ ‘ರಾಕಾ’ ಆಗಿ ತೆರೆ ಮೇಲೆ ಬರಲಿದ್ದಾರೆ. ಅರ್ಧ ಮೃಗ, ಅರ್ಧ ಮನುಷ್ಯನ ಅವತಾರದಲ್ಲಿ ಅವರಿಲ್ಲಿ ಕಾಣಿಸಿಕೊಂಡಿದ್ದು ಈ ಲುಕ್ಗಾಗಿ ಅಲ್ಲು ಪ್ರತಿ ದಿನ ಮೂರ್ನಾಲ್ಕು ಗಂಟೆ ವ್ಯಯಿಸಿದ್ದಾರೆ ಎಂದಿದೆ ಚಿತ್ರತಂಡ.</p>.ಮೇಕಪ್ಗೇ ಮೂರ್ನಾಲ್ಕು ಗಂಟೆ ವ್ಯಯಿಸಿದ ಅಲ್ಲು ಅರ್ಜುನ್!.<p>ಸನ್ರೈಸರ್ಸ್ ಹೈದರಾಬಾದ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಪಾಯಿಂಟ್ ಪಟ್ಟಿಯ ಮಧ್ಯದಲ್ಲಿವೆ. ಎರಡೂ ತಂಡಗಳು ಮಂಗಳವಾರ ಹೈದರಾಬಾದಿನಲ್ಲಿಮುಖಾಮುಖಿ ಆಗಲಿದ್ದು, ಸನ್ರೈಸರ್ಸ್ ತಂಡವು ತವರಿನ ಅಂಗಳದಲ್ಲಿ ಆಡುವ ಲಾಭವನ್ನು ಪಡೆಯಲು ಯತ್ನಿಸಲಿದೆ.</p>.IPL 2026 SRH vs DC: ಹ್ಯಾಟ್ರಿಕ್ ಜಯದ ನಿರೀಕ್ಷೆಯಲ್ಲಿ ಸನ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಷ್ಟ್ರೀಯ, ಅಂತರರಾಷ್ಟ್ರೀಯ, ಕ್ರೀಡೆ ಸೇರಿದಂತೆ ಈ ದಿನದ 10 ಪ್ರಮುಖ ಸುದ್ದಿಗಳು ಇಲ್ಲಿವೆ....</p>.<p> ಹೊರ್ಮುಜ್ ಜಲಸಂಧಿ ವಿಚಾರದಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ಉದ್ವಿಗ್ನ ಸ್ಥಿತಿ ಮತ್ತಷ್ಟು ಹೆಚ್ಚಿರುವುದರಿಂದ ಎರಡನೇ ಸುತ್ತಿನ ಮಾತುಕತೆ ಬಗ್ಗೆ ಅನಿಶ್ಚಿತತೆ ಮುಂದುವರಿದಿದೆ. ಅಮೆರಿಕವು ಮಾತುಕತೆಗೆ ಉತ್ಸುಕತೆ ತೋರಿದೆಯಾದರೂ, ಇರಾನ್ ಸಕಾರಾತ್ಮಕವಾಗಿ ಸ್ಪಂದಿಸಿಲ್ಲ.</p>.ಅಮೆರಿಕ ಜತೆ ಮಾತುಕತೆಗೆ ಇರಾನ್ ಹಿಂದೇಟು: ಹೊರ್ಮುಜ್ ನಿರ್ಬಂಧ ಮುಂದುವರಿಕೆ.<p>ಪ್ರಧಾನಿ ನರೇಂದ್ರ ಮೋದಿ ಅವರಿಂದ ಮಂಗಳವಾರ ಉದ್ಘಾಟನೆಗೊಳ್ಳಬೇಕಿದ್ದ ರಾಜಸ್ಥಾನದ ಪೆಟ್ರೋಲಿಯಂ ಉತ್ಪನ್ನಗಳ ಸಂಸ್ಕರಣಾ ಘಟಕವೊಂದರಲ್ಲಿ ಸೋಮವಾರ ಬೆಂಕಿ ಅವಘಡ ಸಂಭವಿಸಿದೆ.</p>.ಪ್ರಧಾನಿ ಮೋದಿ ಉದ್ಘಾಟಿಸಬೇಕಿದ್ದ ಘಟಕಕ್ಕೆ ಬೆಂಕಿ: ಕಾರ್ಯಕ್ರಮ ಮುಂದೂಡಿಕೆ.<p>ಕೌಟುಂಬಿಕ ಕಾರಣದಿಂದ ವ್ಯಕ್ತಿಯೊಬ್ಬ ತನ್ನ ಏಳು ಮಕ್ಕಳು ಸೇರಿದಂತೆ ಎಂಟು ಮಕ್ಕಳನ್ನು ಗುಂಡಿಕ್ಕಿ ಹತ್ಯೆ ಮಾಡಿದ ಪ್ರಕರಣ ಅಮೆರಿಕದ ದಕ್ಷಿಣ ಭಾಗದ ಲೂಸಿಯಾನದಲ್ಲಿ ನಡೆದಿದೆ. </p>.ಅಮೆರಿಕ: ತನ್ನದೇ 7 ಮಕ್ಕಳನ್ನು ಗುಂಡಿಕ್ಕಿ ಕೊಂದ ವ್ಯಕ್ತಿ.<p>ಕಲಬುರಗಿ, ಹಾಸನ, ಉಡುಪಿ ಸೇರಿದಂತೆ 11 ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಏ.21ರಂದು ಗುಡುಗು ಸಹಿತ ಹಗುರ ಮಳೆಯಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.</p>.Karnataka Rains: 11 ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ.<p>ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಮುಖ್ಯ ಶಿಕ್ಷಕರ ಹುದ್ದೆಗೆ ಬಡ್ತಿ ನೀಡುವ ಪ್ರಕ್ರಿಯೆ ಮಂಗಳವಾರದಿಂದ (ಏ.21) ಆರಂಭವಾಗಲಿದೆ.</p>.ಶಾಲಾ ಶಿಕ್ಷಕರಿಗೆ ಮುಖ್ಯ ಶಿಕ್ಷಕರ ಹುದ್ದೆಗೆ ಬಡ್ತಿ: ಪ್ರಕ್ರಿಯೆ ಇಂದು ಆರಂಭ.<p>ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಏಪ್ರಿಲ್ 23ರಂದು ಮೊದಲ ಹಂತದ ಮತದಾನ ನಡೆಯಲಿದ್ದು. ಮುಕ್ತ, ನ್ಯಾಯಯುತ ಹಾಗೂ ಪಾರದರ್ಶಕ ಚುನಾವಣೆ ನಡೆಸಲಾಗುವುದು ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಹೇಳಿದ್ದಾರೆ.</p>.ಪಶ್ಚಿಮ ಬಂಗಾಳದಲ್ಲಿ ನ್ಯಾಯಯುತ, ಪಾರದರ್ಶಕ ಚುನಾವಣೆ ನಡೆಸುತ್ತೇವೆ: ಸಿಇಸಿ .<p> ಭಾರತ ಮತ್ತು ದಕ್ಷಿಣ ಕೊರಿಯಾ ನಡುವಿನ ಆರ್ಥಿಕ ಸಂಬಂಧವನ್ನು ಮತ್ತಷ್ಟು ವೃದ್ಧಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ದಕ್ಷಿಣ ಕೊರಿಯಾದ ಅಧ್ಯಕ್ಷ ಲೀ ಜೇ ಮ್ಯುಂಗ್ ಅವರು ಮಹತ್ವದ ಚರ್ಚೆ ನಡೆಸಿದ್ದಾರೆ.</p>.ಭಾರತ–ದಕ್ಷಿಣ ಕೊರಿಯಾ ಒಪ್ಪಂದ: ಮೋದಿ–ಮ್ಯುಂಗ್ ಮಾತುಕತೆಯ ಮುಖ್ಯಾಂಶಗಳು ಇಲ್ಲಿವೆ.<p>ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದ್ವಿಪೌರತ್ವ ಹೊಂದಿದ್ದಾರೆ ಎಂಬ ಆರೋಪದ ಕುರಿತ ಪ್ರಕರಣದ ವಿಚಾರಣೆಯಿಂದ ಅಲಹಾಬಾದ್ ಹೈಕೋರ್ಟ್ನ ಲಖನೌ ಪೀಠದ ನ್ಯಾಯಮೂರ್ತಿ ಸುಭಾಷ್ ವಿದ್ಯಾರ್ಥಿ ಅವರು ಸೋಮವಾರ ಹಿಂದೆ ಸರಿದಿದ್ದಾರೆ.</p>.ರಾಹುಲ್ ಗಾಂಧಿ ದ್ವಿಪೌರತ್ವ ವಿವಾದ: ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಮೂರ್ತಿ.<p>ತೆಲುಗು ನಟ ಅಲ್ಲು ಅರ್ಜುನ್, ಅಟ್ಲಿ ನಿರ್ದೇಶನದ ಹೊಸ ಸಿನಿಮಾದಲ್ಲಿ ‘ರಾಕಾ’ ಆಗಿ ತೆರೆ ಮೇಲೆ ಬರಲಿದ್ದಾರೆ. ಅರ್ಧ ಮೃಗ, ಅರ್ಧ ಮನುಷ್ಯನ ಅವತಾರದಲ್ಲಿ ಅವರಿಲ್ಲಿ ಕಾಣಿಸಿಕೊಂಡಿದ್ದು ಈ ಲುಕ್ಗಾಗಿ ಅಲ್ಲು ಪ್ರತಿ ದಿನ ಮೂರ್ನಾಲ್ಕು ಗಂಟೆ ವ್ಯಯಿಸಿದ್ದಾರೆ ಎಂದಿದೆ ಚಿತ್ರತಂಡ.</p>.ಮೇಕಪ್ಗೇ ಮೂರ್ನಾಲ್ಕು ಗಂಟೆ ವ್ಯಯಿಸಿದ ಅಲ್ಲು ಅರ್ಜುನ್!.<p>ಸನ್ರೈಸರ್ಸ್ ಹೈದರಾಬಾದ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಪಾಯಿಂಟ್ ಪಟ್ಟಿಯ ಮಧ್ಯದಲ್ಲಿವೆ. ಎರಡೂ ತಂಡಗಳು ಮಂಗಳವಾರ ಹೈದರಾಬಾದಿನಲ್ಲಿಮುಖಾಮುಖಿ ಆಗಲಿದ್ದು, ಸನ್ರೈಸರ್ಸ್ ತಂಡವು ತವರಿನ ಅಂಗಳದಲ್ಲಿ ಆಡುವ ಲಾಭವನ್ನು ಪಡೆಯಲು ಯತ್ನಿಸಲಿದೆ.</p>.IPL 2026 SRH vs DC: ಹ್ಯಾಟ್ರಿಕ್ ಜಯದ ನಿರೀಕ್ಷೆಯಲ್ಲಿ ಸನ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>