<p><strong>ಮಂಗಳೂರು:</strong> ‘ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ಸಿ) ಮತ್ತು ಪೌರತ್ವ(ತಿದ್ದುಪಡಿ) ಮಸೂದೆಯು (ಸಿಎಬಿ) ಪ್ರಜಾಪ್ರಭುತ್ವಕ್ಕೆ ಸವಾಲಾಗಿರುವುದು ಮಾತ್ರವಲ್ಲ, ಅಸಾಂವಿಧಾನಿಕ ಮತ್ತು ಅಮಾನವೀಯವಾಗಿವೆ’ ಎಂದು ಮಾಜಿ ಐಎಎಸ್ ಅಧಿಕಾರಿ ಕಣ್ಣನ್ ಗೋಪಿನಾಥನ್ ಹೇಳಿದ್ದಾರೆ.</p>.<p>ನಗರದ ಎಸ್ಡಿಎಂ ಕಾನೂನು ಕಾಲೇಜು ಮಂಗಳವಾರ ಆಯೋಜಿಸಿದ್ದ ಮಾನವ ಹಕ್ಕುಗಳ ದಿನ ‘ಹ್ಯುಮಾನೋ 2ಕೆ19’ ಆಚರಣೆಯಲ್ಲಿ ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<p>‘ಯಾರಾದರೂ ಅಕ್ರಮ ವಲಸಿಗರು ಎಂದು ಸರ್ಕಾರಕ್ಕೆ ಹೇಗೆ ಗೊತ್ತಾಗುತ್ತದೆ? ಅದನ್ನು ಸಾಬೀತುಪಡಿಸಲು 50 ವರ್ಷಕ್ಕಿಂತ ಹಳೆಯದಾದ ದಾಖಲೆಗಳು ಬೇಕಾಗುತ್ತವೆ. ಹಾಗಿದ್ದರೆ, ದಾಖಲೆ ಗಳನ್ನು ಹೊಂದಿರದ ಜನರನ್ನು ನಾವು ಹೊರಗೆ ಕಳುಹಿಸಬೇಕೇ? ಇದನ್ನೇ ಎನ್ಆರ್ಸಿ ಮಾಡುತ್ತಿದೆ’ ಎಂದು ಟೀಕಿಸಿದರು.</p>.<p>‘ತಾನು ಭಾರತೀಯ ಪ್ರಜೆ ಎಂದು ಸಾಬೀತುಪಡಿಸುವ ಸಲುವಾಗಿ ದಾಖಲೆಗಳನ್ನು ಸಂಗ್ರಹಿಸುವ ಸಾಹಸವು, ದೇಶದ ಆರ್ಥಿಕತೆಗೆ ಹೊಡೆತ ನೀಡುತ್ತದೆ. ತಾವು ‘ಭಾರತೀಯರು’ ಎಂದು ಸಾಬೀತುಪಡಿಸಲು ಸಾಕಷ್ಟು ಮಾನಸಿಕ ಕಿರುಕುಳ ಪಡಬೇಕಾಗುತ್ತದೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p><strong>***</strong></p>.<p>ಬಡವರು, ಆದಿವಾಸಿಗಳು, ಮಹಿಳೆಯರು, ಭೂ ರಹಿತರು ಎನ್ಆರ್ಸಿಗೆ ತುತ್ತಾಗಲಿದ್ದಾರೆ. ಒಬ್ಬ ವ್ಯಕ್ತಿಯ ಪೌರತ್ವವನ್ನು ತೆಗೆದು ಹಾಕಲು ಸರ್ಕಾರಕ್ಕೆ ಹಕ್ಕಿಲ್ಲ</p>.<p>-ಕಣ್ಣನ್ ಗೋಪಿನಾಥನ್, ಮಾಜಿ ಐಎಎಸ್ ಅಧಿಕಾರಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ‘ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ಸಿ) ಮತ್ತು ಪೌರತ್ವ(ತಿದ್ದುಪಡಿ) ಮಸೂದೆಯು (ಸಿಎಬಿ) ಪ್ರಜಾಪ್ರಭುತ್ವಕ್ಕೆ ಸವಾಲಾಗಿರುವುದು ಮಾತ್ರವಲ್ಲ, ಅಸಾಂವಿಧಾನಿಕ ಮತ್ತು ಅಮಾನವೀಯವಾಗಿವೆ’ ಎಂದು ಮಾಜಿ ಐಎಎಸ್ ಅಧಿಕಾರಿ ಕಣ್ಣನ್ ಗೋಪಿನಾಥನ್ ಹೇಳಿದ್ದಾರೆ.</p>.<p>ನಗರದ ಎಸ್ಡಿಎಂ ಕಾನೂನು ಕಾಲೇಜು ಮಂಗಳವಾರ ಆಯೋಜಿಸಿದ್ದ ಮಾನವ ಹಕ್ಕುಗಳ ದಿನ ‘ಹ್ಯುಮಾನೋ 2ಕೆ19’ ಆಚರಣೆಯಲ್ಲಿ ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<p>‘ಯಾರಾದರೂ ಅಕ್ರಮ ವಲಸಿಗರು ಎಂದು ಸರ್ಕಾರಕ್ಕೆ ಹೇಗೆ ಗೊತ್ತಾಗುತ್ತದೆ? ಅದನ್ನು ಸಾಬೀತುಪಡಿಸಲು 50 ವರ್ಷಕ್ಕಿಂತ ಹಳೆಯದಾದ ದಾಖಲೆಗಳು ಬೇಕಾಗುತ್ತವೆ. ಹಾಗಿದ್ದರೆ, ದಾಖಲೆ ಗಳನ್ನು ಹೊಂದಿರದ ಜನರನ್ನು ನಾವು ಹೊರಗೆ ಕಳುಹಿಸಬೇಕೇ? ಇದನ್ನೇ ಎನ್ಆರ್ಸಿ ಮಾಡುತ್ತಿದೆ’ ಎಂದು ಟೀಕಿಸಿದರು.</p>.<p>‘ತಾನು ಭಾರತೀಯ ಪ್ರಜೆ ಎಂದು ಸಾಬೀತುಪಡಿಸುವ ಸಲುವಾಗಿ ದಾಖಲೆಗಳನ್ನು ಸಂಗ್ರಹಿಸುವ ಸಾಹಸವು, ದೇಶದ ಆರ್ಥಿಕತೆಗೆ ಹೊಡೆತ ನೀಡುತ್ತದೆ. ತಾವು ‘ಭಾರತೀಯರು’ ಎಂದು ಸಾಬೀತುಪಡಿಸಲು ಸಾಕಷ್ಟು ಮಾನಸಿಕ ಕಿರುಕುಳ ಪಡಬೇಕಾಗುತ್ತದೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p><strong>***</strong></p>.<p>ಬಡವರು, ಆದಿವಾಸಿಗಳು, ಮಹಿಳೆಯರು, ಭೂ ರಹಿತರು ಎನ್ಆರ್ಸಿಗೆ ತುತ್ತಾಗಲಿದ್ದಾರೆ. ಒಬ್ಬ ವ್ಯಕ್ತಿಯ ಪೌರತ್ವವನ್ನು ತೆಗೆದು ಹಾಕಲು ಸರ್ಕಾರಕ್ಕೆ ಹಕ್ಕಿಲ್ಲ</p>.<p>-ಕಣ್ಣನ್ ಗೋಪಿನಾಥನ್, ಮಾಜಿ ಐಎಎಸ್ ಅಧಿಕಾರಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>