<p><strong>ಸೂರತ್: </strong>ಕಾಶ್ಮೀರದಲ್ಲಿ ಅಭಿವ್ಯಕ್ತಿ ಸ್ವಾತಂತ್ರವನ್ನು ನಿರಾಕರಿಸಲಾಗುತ್ತಿದೆ ಎಂದು ಎಂದು ಹೇಳಿ ರಾಜೀನಾಮೆ ನೀಡಿದ್ದ ಐಎಎಸ್ ಅಧಿಕಾರಿ ಕಣ್ಣನ್ ಗೋಪಿನಾಥನ್ ಕರ್ತವ್ಯಕ್ಕೆ ಹಾಜರಾಗುವುದಿಲ್ಲ ಎಂದಿದ್ದಾರೆ.</p>.<p><span style="color:#800000;"><strong>ಇದನ್ನೂ ಓದಿ:</strong></span> <strong><a href="https://www.prajavani.net/stories/national/no-shortage-medicines-phone-660515.html" target="_top">ಸಂಪರ್ಕ ನಿರ್ಬಂಧಿಸಿ ಜೀವಹಾನಿ ತಡೆದಿದ್ದೇವೆ</a></strong></p>.<p>ದಾಮನ್ ಮತ್ತು ದಿಯು, ದಾದ್ರ ಮತ್ತು ನಾಗರಹವೇಲಿ (ಡಿಡಿಡಿಎನ್ಎಚ್) ಐಎಎಸ್ ಅಧಿಕಾರಿ ಕಣ್ಣನ್ ಗೋಪಿನಾಥನ್ ರಾಜೀನಾಮೆ ನೀಡಿದ್ದರೂ ಅದನ್ನು ಅಲ್ಲಿನ ಆಡಳಿತಾಧಿಕಾರಿಗಳು ಸ್ವೀಕರಿಸಿರಲಿಲ್ಲ. ಕರ್ತವ್ಯಕ್ಕೆ ಹಾಜರಾಗುವಂತೆ ಅಲ್ಲಿನ ಅಲ್ಲಿನ ಆಡಳಿತಾಧಿಕಾರಿಗಳು ನೋಟಿಸ್ ಕಳುಹಿಸಿದ್ದು, ಕಣ್ಣನ್ ತಾನು ಹಾಜರಾಗಲ್ಲ ಎಂದು ಹೇಳಿರುವುದಾಗಿ <a href="https://www.prajavani.net/stories/national/no-shortage-medicines-phone-660515.html" target="_blank">ದಿ ಇಂಡಿಯನ್ ಎಕ್ಸ್ಪ್ರೆಸ್</a> ವರದಿ ಮಾಡಿದೆ.</p>.<p>ಬುಧವಾರ ನಾನು ಸಿಲ್ವಸ್ಸಾದಲ್ಲಿರುವ ಮನೆಗೆ ವಾಪಸ್ ಬಂದೆ. ಅಲ್ಲಿ ಮನೆ ಬಾಗಿಲಿಗೆ ನೋಟಿಸ್ ಅಂಟಿಸಲಾಗಿತ್ತು. ರಾಜೀನಾಮೆ ಸ್ವೀಕರಿಸುವ ಅವಧಿವರೆಗೆ ನಾನು ಕರ್ತವ್ಯಕ್ಕೆ ಹಾಜರಾಗಬಹುದಾಗಿದೆ. ನಾನು ರಾಜೀನಾಮೆ ನೀಡುವಿ ವಿಚಾರವನ್ನು ಸಾರ್ವಜನಿಕವಾಗಿಯೇ ತಿಳಿಸಿದ್ದೆ. ಆ ನಿರ್ಧಾರವನ್ನು ನಾನು ಬದಲಾಯಿಸುವುದಿಲ್ಲ. ರಾಜೀನಾಮೆ ಸ್ವೀಕರಿಸುವ ವರೆಗಿನ ಅವಧಿಯಲ್ಲಿ ಕರ್ತವ್ಯಕ್ಕೆ ಹಾಜರಾಗುವುದು ನನಗೆ ಸರಿ ಅನಿಸುತ್ತಿಲ್ಲ.</p>.<p>ನಾನು ಮುಂದಿನ ಜೀವನದ ಬಗ್ಗೆ ಯೋಚಿಸಿಲ್ಲ.ಸಾರ್ವಜನಿಕ ಸೇವೆ ಮಾಡುತ್ತಿರುವ ಖಾಸಗಿ ಸಂಸ್ಥೆಗಳೊಂದಿಗಿನ ಕೆಲಸ ಕಾರ್ಯ ಬಗ್ಗೆ ನಾನು ಯೋಚಿಸುತ್ತಿದ್ದೇನೆ. ಕಳೆದ ಒಂದು ವಾರ ತುಂಬಾ ಬ್ಯುಸಿಯಾಗಿದ್ದ ಕಾರಣ ಈ ಬಗ್ಗೆ ಹೆಚ್ಚು ಗಮನ ಹರಿಸಲು ಸಾಧ್ಯವಾಗಿಲ್ಲ ಎಂದುಕಣ್ಣನ್ ಹೇಳಿದ್ದಾರೆ.<br />ಜನರು ಮತ್ತು ಜನರ ಸೇವೆಗೆಂದು ನಿಯೋಜಿತರಾದ ಅಧಿಕಾರಗಳ ಧ್ವನಿಯನ್ನು ಸರ್ಕಾರ ಅಡಗಿಸುತ್ತಿದೆ. ಇದರಿಂದ ಮನನೊಂದು ಕೆಲಸಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಕಣ್ಣನ್ ಹೇಳಿರುವುದಾಗಿ ಸುದ್ದಿಮೂಲಗಳು <a href="https://www.prajavani.net/stories/national/no-shortage-medicines-phone-660515.html" target="_blank">ವರದಿ</a> ಮಾಡಿದ್ದವು.</p>.<p><span style="color:#800000;"><strong>ಇದನ್ನೂ ಓದಿ:</strong></span><strong><a href="https://www.prajavani.net/stories/national/communication-blockade-jk-pci-661114.html" target="_blank">ಜಮ್ಮು–ಕಾಶ್ಮೀರ: ವಿಶೇಷಾಧಿಕಾರ ರದ್ದು ವಿಚಾರಣೆ ಸಂವಿಧಾನ ಪೀಠಕ್ಕೆ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೂರತ್: </strong>ಕಾಶ್ಮೀರದಲ್ಲಿ ಅಭಿವ್ಯಕ್ತಿ ಸ್ವಾತಂತ್ರವನ್ನು ನಿರಾಕರಿಸಲಾಗುತ್ತಿದೆ ಎಂದು ಎಂದು ಹೇಳಿ ರಾಜೀನಾಮೆ ನೀಡಿದ್ದ ಐಎಎಸ್ ಅಧಿಕಾರಿ ಕಣ್ಣನ್ ಗೋಪಿನಾಥನ್ ಕರ್ತವ್ಯಕ್ಕೆ ಹಾಜರಾಗುವುದಿಲ್ಲ ಎಂದಿದ್ದಾರೆ.</p>.<p><span style="color:#800000;"><strong>ಇದನ್ನೂ ಓದಿ:</strong></span> <strong><a href="https://www.prajavani.net/stories/national/no-shortage-medicines-phone-660515.html" target="_top">ಸಂಪರ್ಕ ನಿರ್ಬಂಧಿಸಿ ಜೀವಹಾನಿ ತಡೆದಿದ್ದೇವೆ</a></strong></p>.<p>ದಾಮನ್ ಮತ್ತು ದಿಯು, ದಾದ್ರ ಮತ್ತು ನಾಗರಹವೇಲಿ (ಡಿಡಿಡಿಎನ್ಎಚ್) ಐಎಎಸ್ ಅಧಿಕಾರಿ ಕಣ್ಣನ್ ಗೋಪಿನಾಥನ್ ರಾಜೀನಾಮೆ ನೀಡಿದ್ದರೂ ಅದನ್ನು ಅಲ್ಲಿನ ಆಡಳಿತಾಧಿಕಾರಿಗಳು ಸ್ವೀಕರಿಸಿರಲಿಲ್ಲ. ಕರ್ತವ್ಯಕ್ಕೆ ಹಾಜರಾಗುವಂತೆ ಅಲ್ಲಿನ ಅಲ್ಲಿನ ಆಡಳಿತಾಧಿಕಾರಿಗಳು ನೋಟಿಸ್ ಕಳುಹಿಸಿದ್ದು, ಕಣ್ಣನ್ ತಾನು ಹಾಜರಾಗಲ್ಲ ಎಂದು ಹೇಳಿರುವುದಾಗಿ <a href="https://www.prajavani.net/stories/national/no-shortage-medicines-phone-660515.html" target="_blank">ದಿ ಇಂಡಿಯನ್ ಎಕ್ಸ್ಪ್ರೆಸ್</a> ವರದಿ ಮಾಡಿದೆ.</p>.<p>ಬುಧವಾರ ನಾನು ಸಿಲ್ವಸ್ಸಾದಲ್ಲಿರುವ ಮನೆಗೆ ವಾಪಸ್ ಬಂದೆ. ಅಲ್ಲಿ ಮನೆ ಬಾಗಿಲಿಗೆ ನೋಟಿಸ್ ಅಂಟಿಸಲಾಗಿತ್ತು. ರಾಜೀನಾಮೆ ಸ್ವೀಕರಿಸುವ ಅವಧಿವರೆಗೆ ನಾನು ಕರ್ತವ್ಯಕ್ಕೆ ಹಾಜರಾಗಬಹುದಾಗಿದೆ. ನಾನು ರಾಜೀನಾಮೆ ನೀಡುವಿ ವಿಚಾರವನ್ನು ಸಾರ್ವಜನಿಕವಾಗಿಯೇ ತಿಳಿಸಿದ್ದೆ. ಆ ನಿರ್ಧಾರವನ್ನು ನಾನು ಬದಲಾಯಿಸುವುದಿಲ್ಲ. ರಾಜೀನಾಮೆ ಸ್ವೀಕರಿಸುವ ವರೆಗಿನ ಅವಧಿಯಲ್ಲಿ ಕರ್ತವ್ಯಕ್ಕೆ ಹಾಜರಾಗುವುದು ನನಗೆ ಸರಿ ಅನಿಸುತ್ತಿಲ್ಲ.</p>.<p>ನಾನು ಮುಂದಿನ ಜೀವನದ ಬಗ್ಗೆ ಯೋಚಿಸಿಲ್ಲ.ಸಾರ್ವಜನಿಕ ಸೇವೆ ಮಾಡುತ್ತಿರುವ ಖಾಸಗಿ ಸಂಸ್ಥೆಗಳೊಂದಿಗಿನ ಕೆಲಸ ಕಾರ್ಯ ಬಗ್ಗೆ ನಾನು ಯೋಚಿಸುತ್ತಿದ್ದೇನೆ. ಕಳೆದ ಒಂದು ವಾರ ತುಂಬಾ ಬ್ಯುಸಿಯಾಗಿದ್ದ ಕಾರಣ ಈ ಬಗ್ಗೆ ಹೆಚ್ಚು ಗಮನ ಹರಿಸಲು ಸಾಧ್ಯವಾಗಿಲ್ಲ ಎಂದುಕಣ್ಣನ್ ಹೇಳಿದ್ದಾರೆ.<br />ಜನರು ಮತ್ತು ಜನರ ಸೇವೆಗೆಂದು ನಿಯೋಜಿತರಾದ ಅಧಿಕಾರಗಳ ಧ್ವನಿಯನ್ನು ಸರ್ಕಾರ ಅಡಗಿಸುತ್ತಿದೆ. ಇದರಿಂದ ಮನನೊಂದು ಕೆಲಸಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಕಣ್ಣನ್ ಹೇಳಿರುವುದಾಗಿ ಸುದ್ದಿಮೂಲಗಳು <a href="https://www.prajavani.net/stories/national/no-shortage-medicines-phone-660515.html" target="_blank">ವರದಿ</a> ಮಾಡಿದ್ದವು.</p>.<p><span style="color:#800000;"><strong>ಇದನ್ನೂ ಓದಿ:</strong></span><strong><a href="https://www.prajavani.net/stories/national/communication-blockade-jk-pci-661114.html" target="_blank">ಜಮ್ಮು–ಕಾಶ್ಮೀರ: ವಿಶೇಷಾಧಿಕಾರ ರದ್ದು ವಿಚಾರಣೆ ಸಂವಿಧಾನ ಪೀಠಕ್ಕೆ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>