<p><strong>ಕಾನ್ಪುರ:</strong> ಇಲ್ಲಿನ ಮೂಲಗಂಜ್ ಪ್ರದೇಶದ ಮಿಶ್ರಿ ಬಜಾರ್ ವ್ಯಾಪ್ತಿಯ ಮಸೀದಿ ಬಳಿ ನಿಲ್ಲಿಸಲಾಗಿದ್ದ ಎರಡು ಸ್ಕೂಟರ್ಗಳು ಸೆಕೆಂಡುಗಳ ಅಂತರದಲ್ಲಿ ಬುಧವಾರ ಸ್ಫೋಟಗೊಂಡಿದ್ದು, ಎಂಟು ಜನರು ಗಾಯಗೊಂಡಿದ್ದಾರೆ. ಸ್ಫೋಟದಿಂದ ಸಮೀಪದ ಅಂಗಡಿಗಳಿಗೆ ಹಾನಿಯಾಗಿದೆ.</p>.<p>ಮರ್ಕಜ್ ಮಸೀದಿ ಸಮೀಪ ಸಂಜೆ 7.30ರ ಸುಮಾರಿಗೆ ಸ್ಫೋಟಗಳು ಸಂಭವಿಸಿವೆ. ಸ್ಫೋಟಗಳ ಶಬ್ದವು ಸ್ಥಳದಿಂದ 500 ಮೀಟರ್ಗಳವರೆಗೆ ಕೇಳಿಸಿತ್ತು ಎಂದು ಸ್ಥಳೀಯರು ಹೇಳಿದ್ದಾರೆ. </p>.<p>ಘಟನೆಯಲ್ಲಿ ಎಂಟು ಜನರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು ಎಂದು ಕಾನ್ಪುರ ಪೊಲೀಸ್ ಆಯುಕ್ತ ರಘುಬೀರ್ ಲಾಲ್ ತಿಳಿಸಿದ್ದಾರೆ. ಘಟನೆ ಕುರಿತು ಎಲ್ಲ ಕೋನಗಳಿಂದಲೂ ತನಿಖೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. </p>.<p>ದೀಪಾವಳಿ ಸಮೀಪಿಸುತ್ತಿರುವ ಕಾರಣ, ಪಟಾಕಿ ಸಂಬಂಧಿತ ಸ್ಫೋಟವೇ ಅಥವಾ ಭಯೋತ್ಪಾದಕ ಕೃತ್ಯವೇ ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಅವರು ವಿವರಿಸಿದ್ದಾರೆ. </p>.<p>ಬಾಂಬ್ ನಿಷ್ಕ್ರಿಯ ದಳ, ವಿಧಿ ವಿಜ್ಞಾನ ತಜ್ಞರು ಮತ್ತು ವಿಧ್ವಂಸಕ ಕೃತ್ಯ ತಡೆ ತಂಡಗಳು ಸ್ಥಳ ತಪಾಸಣೆ ನಡೆಸಿ, ಮಾದರಿಗಳನ್ನು ಸಂಗ್ರಹಿಸಿವೆ ಎಂದು ಅವರು ಮಾಹಿತಿ ನೀಡಿದ್ದಾರೆ. </p>.<p>ಶಂಕಿತರನ್ನು ಗುರುತಿಸಲು ಸುತ್ತಮುತ್ತಲಿನ ಪ್ರದೇಶದ ಸಿ.ಸಿ.ಟಿ.ವಿ ಕ್ಯಾಮೆರಾ ದೃಶ್ಯಾವಳಿಗಳನ್ನು ವಿಶ್ಲೇಷಿಸಲಾಗುವುದು ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾನ್ಪುರ:</strong> ಇಲ್ಲಿನ ಮೂಲಗಂಜ್ ಪ್ರದೇಶದ ಮಿಶ್ರಿ ಬಜಾರ್ ವ್ಯಾಪ್ತಿಯ ಮಸೀದಿ ಬಳಿ ನಿಲ್ಲಿಸಲಾಗಿದ್ದ ಎರಡು ಸ್ಕೂಟರ್ಗಳು ಸೆಕೆಂಡುಗಳ ಅಂತರದಲ್ಲಿ ಬುಧವಾರ ಸ್ಫೋಟಗೊಂಡಿದ್ದು, ಎಂಟು ಜನರು ಗಾಯಗೊಂಡಿದ್ದಾರೆ. ಸ್ಫೋಟದಿಂದ ಸಮೀಪದ ಅಂಗಡಿಗಳಿಗೆ ಹಾನಿಯಾಗಿದೆ.</p>.<p>ಮರ್ಕಜ್ ಮಸೀದಿ ಸಮೀಪ ಸಂಜೆ 7.30ರ ಸುಮಾರಿಗೆ ಸ್ಫೋಟಗಳು ಸಂಭವಿಸಿವೆ. ಸ್ಫೋಟಗಳ ಶಬ್ದವು ಸ್ಥಳದಿಂದ 500 ಮೀಟರ್ಗಳವರೆಗೆ ಕೇಳಿಸಿತ್ತು ಎಂದು ಸ್ಥಳೀಯರು ಹೇಳಿದ್ದಾರೆ. </p>.<p>ಘಟನೆಯಲ್ಲಿ ಎಂಟು ಜನರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು ಎಂದು ಕಾನ್ಪುರ ಪೊಲೀಸ್ ಆಯುಕ್ತ ರಘುಬೀರ್ ಲಾಲ್ ತಿಳಿಸಿದ್ದಾರೆ. ಘಟನೆ ಕುರಿತು ಎಲ್ಲ ಕೋನಗಳಿಂದಲೂ ತನಿಖೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. </p>.<p>ದೀಪಾವಳಿ ಸಮೀಪಿಸುತ್ತಿರುವ ಕಾರಣ, ಪಟಾಕಿ ಸಂಬಂಧಿತ ಸ್ಫೋಟವೇ ಅಥವಾ ಭಯೋತ್ಪಾದಕ ಕೃತ್ಯವೇ ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಅವರು ವಿವರಿಸಿದ್ದಾರೆ. </p>.<p>ಬಾಂಬ್ ನಿಷ್ಕ್ರಿಯ ದಳ, ವಿಧಿ ವಿಜ್ಞಾನ ತಜ್ಞರು ಮತ್ತು ವಿಧ್ವಂಸಕ ಕೃತ್ಯ ತಡೆ ತಂಡಗಳು ಸ್ಥಳ ತಪಾಸಣೆ ನಡೆಸಿ, ಮಾದರಿಗಳನ್ನು ಸಂಗ್ರಹಿಸಿವೆ ಎಂದು ಅವರು ಮಾಹಿತಿ ನೀಡಿದ್ದಾರೆ. </p>.<p>ಶಂಕಿತರನ್ನು ಗುರುತಿಸಲು ಸುತ್ತಮುತ್ತಲಿನ ಪ್ರದೇಶದ ಸಿ.ಸಿ.ಟಿ.ವಿ ಕ್ಯಾಮೆರಾ ದೃಶ್ಯಾವಳಿಗಳನ್ನು ವಿಶ್ಲೇಷಿಸಲಾಗುವುದು ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>