<p><strong>ಲಖನೌ</strong>: ಕಾವಡ್ ಯಾತ್ರಾ ಮಾರ್ಗದಲ್ಲಿರುವ ಹೋಟೆಲ್ಗಳು, ತಿಂಡಿ–ತಿನಿಸು ಮಳಿಗೆಗಳ ಮಾಲೀಕರ ಹೆಸರುಗಳನ್ನು ತಿಳಿಯಲು ಅಂಗಡಿಗಳ ಮೇಲೆ ಅಂಟಿಸಿರುವ ಕ್ಯೂಆರ್ ಕೋಡ್ಗಳನ್ನು ಸ್ಕ್ಯಾನ್ ಮಾಡುವಂತೆ ಯಾತ್ರಾರ್ಥಿಗಳಿಗೆ ಉತ್ತರ ಪ್ರದೇಶ ಸರ್ಕಾರ ನಿರ್ದೇಶನ ನೀಡಿದೆ.</p>.<p>ಯಾತ್ರಾ ಮಾರ್ಗದಲ್ಲಿರುವ ಹೋಟೆಲ್ ಸಿಬ್ಬಂದಿಯ ಧರ್ಮ ಪತ್ತೆ ಮಾಡಲು ಕೆಲವು ಹಿಂದೂ ಸಂಘಟನೆಗಳು ತೆಗದುಕೊಂಡ ಕ್ರಮ ವಿವಾದಕ್ಕೀಡಾಗಿರುವಂತೆಯೇ ರಾಜ್ಯ ಸರ್ಕಾರ ಈ ನಿರ್ದೇಶನ ನೀಡಿದೆ.</p>.<p>ಮೀರತ್ನಿಂದ ಮುಜಾಫ್ಫರ್ನಗರದ ವರೆಗಿನ 540 ಕಿ.ಮೀ.ವರೆಗಿನ ಕಾವಡ್ ಯಾತ್ರಾ ಮಾರ್ಗದಲ್ಲಿರುವ ಎಲ್ಲಾ ಮಳಿಗೆಗಳ ಮೇಲೆ ರಾಜ್ಯ ಆಹಾರ ಇಲಾಖೆಯ ಅಧಿಕಾರಿಗಳು ಕ್ಯೂಆರ್ ಕೋಡ್ ಅಳವಡಿಸಲಿದ್ದಾರೆ. ಅದರಲ್ಲಿ ಮಳಿಗೆಯ ಮಾಲೀಕರ ಹೆಸರು, ವಿಳಾಸ ಇರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p>.<p>ಸರ್ಕಾರದ ಈ ಕ್ರಮವನ್ನು ಪ್ರತಿಪಕ್ಷಗಳು ಆಕ್ಷೇಪಿಸಿವೆ. ಆದರೆ, ಕಾವಡ್ ಯಾತ್ರೆಯ ಪಾವಿತ್ರ್ಯತೆ ಕಾಪಾಡುವುದು ಪ್ರಮುಖವಾಗಿದ್ದು, ಪ್ರತಿಯೊಬ್ಬ ಯಾತ್ರಾರ್ಥಿಗೂ ತಾನು ಎಲ್ಲಿಯ ಆಹಾರ ಸೇವಿಸುತ್ತಿದ್ದೇನೆ ಎಂಬುದನ್ನು ತಿಳಿಯುವ ಹಕ್ಕಿದೆ. ಹೀಗಾಗಿ ಸರ್ಕಾರ ಕೈಗೊಂಡ ಕ್ರಮದಲ್ಲಿ ಯಾವುದೇ ತಪ್ಪಿಲ್ಲ ಎಂದು ಬಿಜೆಪಿ ನಾಯಕರು ಸಮರ್ಥಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ</strong>: ಕಾವಡ್ ಯಾತ್ರಾ ಮಾರ್ಗದಲ್ಲಿರುವ ಹೋಟೆಲ್ಗಳು, ತಿಂಡಿ–ತಿನಿಸು ಮಳಿಗೆಗಳ ಮಾಲೀಕರ ಹೆಸರುಗಳನ್ನು ತಿಳಿಯಲು ಅಂಗಡಿಗಳ ಮೇಲೆ ಅಂಟಿಸಿರುವ ಕ್ಯೂಆರ್ ಕೋಡ್ಗಳನ್ನು ಸ್ಕ್ಯಾನ್ ಮಾಡುವಂತೆ ಯಾತ್ರಾರ್ಥಿಗಳಿಗೆ ಉತ್ತರ ಪ್ರದೇಶ ಸರ್ಕಾರ ನಿರ್ದೇಶನ ನೀಡಿದೆ.</p>.<p>ಯಾತ್ರಾ ಮಾರ್ಗದಲ್ಲಿರುವ ಹೋಟೆಲ್ ಸಿಬ್ಬಂದಿಯ ಧರ್ಮ ಪತ್ತೆ ಮಾಡಲು ಕೆಲವು ಹಿಂದೂ ಸಂಘಟನೆಗಳು ತೆಗದುಕೊಂಡ ಕ್ರಮ ವಿವಾದಕ್ಕೀಡಾಗಿರುವಂತೆಯೇ ರಾಜ್ಯ ಸರ್ಕಾರ ಈ ನಿರ್ದೇಶನ ನೀಡಿದೆ.</p>.<p>ಮೀರತ್ನಿಂದ ಮುಜಾಫ್ಫರ್ನಗರದ ವರೆಗಿನ 540 ಕಿ.ಮೀ.ವರೆಗಿನ ಕಾವಡ್ ಯಾತ್ರಾ ಮಾರ್ಗದಲ್ಲಿರುವ ಎಲ್ಲಾ ಮಳಿಗೆಗಳ ಮೇಲೆ ರಾಜ್ಯ ಆಹಾರ ಇಲಾಖೆಯ ಅಧಿಕಾರಿಗಳು ಕ್ಯೂಆರ್ ಕೋಡ್ ಅಳವಡಿಸಲಿದ್ದಾರೆ. ಅದರಲ್ಲಿ ಮಳಿಗೆಯ ಮಾಲೀಕರ ಹೆಸರು, ವಿಳಾಸ ಇರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p>.<p>ಸರ್ಕಾರದ ಈ ಕ್ರಮವನ್ನು ಪ್ರತಿಪಕ್ಷಗಳು ಆಕ್ಷೇಪಿಸಿವೆ. ಆದರೆ, ಕಾವಡ್ ಯಾತ್ರೆಯ ಪಾವಿತ್ರ್ಯತೆ ಕಾಪಾಡುವುದು ಪ್ರಮುಖವಾಗಿದ್ದು, ಪ್ರತಿಯೊಬ್ಬ ಯಾತ್ರಾರ್ಥಿಗೂ ತಾನು ಎಲ್ಲಿಯ ಆಹಾರ ಸೇವಿಸುತ್ತಿದ್ದೇನೆ ಎಂಬುದನ್ನು ತಿಳಿಯುವ ಹಕ್ಕಿದೆ. ಹೀಗಾಗಿ ಸರ್ಕಾರ ಕೈಗೊಂಡ ಕ್ರಮದಲ್ಲಿ ಯಾವುದೇ ತಪ್ಪಿಲ್ಲ ಎಂದು ಬಿಜೆಪಿ ನಾಯಕರು ಸಮರ್ಥಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>