<p><strong>ಚೆನ್ನೈ:</strong> ಯುವತಿಯೊಂದಿಗಿನ ಖಾಸಗಿ ಕ್ಷಣಗಳ ಫೋಟೊ–ವಿಡಿಯೊಗಳು ಹರಿದಾಡಿದ ಮೇಲೆ ನಾಪತ್ತೆಯಾಗಿದ್ದ ತಮಿಳುನಾಡಿನ ಕನ್ಯಾಕುಮಾರಿ ಚರ್ಚ್ ಒಂದರ ಯುವ ಪಾದ್ರಿಯನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ಬಂಧಿತನನ್ನು ಕನ್ಯಾಕುಮಾರಿ ಬಳಿಯ ತಾಕಳಾ ಚರ್ಚ್ನ 29 ವರ್ಷದ ಯುವ ಪಾದ್ರಿ ಬೆನ್ಡಿಕ್ಟ್ ಆಂಟೊ ಎಂದು ಗುರುತಿಸಲಾಗಿದೆ.</p>.<p>ಬೆನ್ಡಿಕ್ಟ್ ಆಂಟೊ ಲ್ಯಾಪ್ಟಾಪ್ನಿಂದ ಆಸ್ಟಿನ್ ಎನ್ನುವ ಸ್ನೇಹಿತನೊಬ್ಬ ಅವರ ಖಾಸಗಿ ವಿಡಿಯೊ ಮತ್ತು ಫೋಟೊಗಳನ್ನು ಕದ್ದು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದ. ಇಬ್ಬರ ವಿರುದ್ಧ ಸಂತ್ರಸ್ತ ಯುವತಿ ನಾಗರ್ಕೋಯಿಲ್ ಠಾಣೆ ಪೊಲೀಸರಿಗೆ ದೂರು ನೀಡಿದ್ದರು.</p>.<p>ಘಟನೆ ಬೆಳಕಿಗೆ ಬಂದ ಮೇಲೆ ಬೆಂಗಳೂರಿನಲ್ಲಿ ತಲೆಮರೆಸಿಕೊಂಡಿದ್ದ ಬೆನ್ಡಿಕ್ಟ್ ಆಂಟೊನನ್ನು ಕನ್ಯಾಕುಮಾರಿ ಪೊಲೀಸರು ಬಂಧಿಸಿ ವಿಚಾರಣೆಗೆ ಗುರಿಪಡಿಸಿದ್ದಾರೆ. ಈ ಕುರಿತು ಎಎನ್ಐ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ.</p>.<p>ಪಾದ್ರಿ ಬೆಂಗಳೂರಿನಲ್ಲಿ ತಲೆಮರೆಸಿಕೊಂಡಿದ್ದರ ಬಗ್ಗೆ newsbricks.com ವರದಿ ಮಾಡಿದೆ.</p>.<p><a href="https://www.prajavani.net/entertainment/cinema/muniratna-u-turn-on-urigowda-and-nanjegowda-movie-1025146.html" itemprop="url">ಉರಿಗೌಡ– ನಂಜೇಗೌಡ ಸಿನಿಮಾ ನಿರ್ಮಾಣ ಮಾಡಲ್ಲ ಎಂದ ನಿರ್ಮಾಪಕ ಮುನಿರತ್ನ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ:</strong> ಯುವತಿಯೊಂದಿಗಿನ ಖಾಸಗಿ ಕ್ಷಣಗಳ ಫೋಟೊ–ವಿಡಿಯೊಗಳು ಹರಿದಾಡಿದ ಮೇಲೆ ನಾಪತ್ತೆಯಾಗಿದ್ದ ತಮಿಳುನಾಡಿನ ಕನ್ಯಾಕುಮಾರಿ ಚರ್ಚ್ ಒಂದರ ಯುವ ಪಾದ್ರಿಯನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ಬಂಧಿತನನ್ನು ಕನ್ಯಾಕುಮಾರಿ ಬಳಿಯ ತಾಕಳಾ ಚರ್ಚ್ನ 29 ವರ್ಷದ ಯುವ ಪಾದ್ರಿ ಬೆನ್ಡಿಕ್ಟ್ ಆಂಟೊ ಎಂದು ಗುರುತಿಸಲಾಗಿದೆ.</p>.<p>ಬೆನ್ಡಿಕ್ಟ್ ಆಂಟೊ ಲ್ಯಾಪ್ಟಾಪ್ನಿಂದ ಆಸ್ಟಿನ್ ಎನ್ನುವ ಸ್ನೇಹಿತನೊಬ್ಬ ಅವರ ಖಾಸಗಿ ವಿಡಿಯೊ ಮತ್ತು ಫೋಟೊಗಳನ್ನು ಕದ್ದು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದ. ಇಬ್ಬರ ವಿರುದ್ಧ ಸಂತ್ರಸ್ತ ಯುವತಿ ನಾಗರ್ಕೋಯಿಲ್ ಠಾಣೆ ಪೊಲೀಸರಿಗೆ ದೂರು ನೀಡಿದ್ದರು.</p>.<p>ಘಟನೆ ಬೆಳಕಿಗೆ ಬಂದ ಮೇಲೆ ಬೆಂಗಳೂರಿನಲ್ಲಿ ತಲೆಮರೆಸಿಕೊಂಡಿದ್ದ ಬೆನ್ಡಿಕ್ಟ್ ಆಂಟೊನನ್ನು ಕನ್ಯಾಕುಮಾರಿ ಪೊಲೀಸರು ಬಂಧಿಸಿ ವಿಚಾರಣೆಗೆ ಗುರಿಪಡಿಸಿದ್ದಾರೆ. ಈ ಕುರಿತು ಎಎನ್ಐ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ.</p>.<p>ಪಾದ್ರಿ ಬೆಂಗಳೂರಿನಲ್ಲಿ ತಲೆಮರೆಸಿಕೊಂಡಿದ್ದರ ಬಗ್ಗೆ newsbricks.com ವರದಿ ಮಾಡಿದೆ.</p>.<p><a href="https://www.prajavani.net/entertainment/cinema/muniratna-u-turn-on-urigowda-and-nanjegowda-movie-1025146.html" itemprop="url">ಉರಿಗೌಡ– ನಂಜೇಗೌಡ ಸಿನಿಮಾ ನಿರ್ಮಾಣ ಮಾಡಲ್ಲ ಎಂದ ನಿರ್ಮಾಪಕ ಮುನಿರತ್ನ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>