ಆದರೆ, ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಹಾಗೂ ನ್ಯಾಷನಲ್ ಕಾನ್ಫರೆನ್ಸ್ನ ಫಾರೂಕ್ ಅಬ್ದುಲ್ಲಾ ಕೆ.ಸಿ ವೇಣುಗೋಪಾಲ್ ಅವರಿಗೆ ಮನವಿ ಮಾಡಿ, ವಿರೋಧ ಪಕ್ಷಗಳ ಒಗ್ಗಟ್ಟಿನ ಹಿನ್ನೆಲೆಯಲ್ಲಿ ಇದನ್ನೆಲ್ಲ ದೊಡ್ಡದು ಮಾಡುವುದು ಬೇಡ ಎಂದು ಗಮನಕ್ಕೆ ತಂದರು ಎನ್ನಲಾಗಿದೆ.
ಇದೇ ವೇಳೆ ರಾಹುಲ್ ಗಾಂಧಿ ಕೂಡ ಸಿಬಲ್ ಪ್ರವೇಶದ ಬಗ್ಗೆ ಯಾವುದೇ ಆಕ್ಷೇಪ ವ್ಯಕ್ತಪಡಿಸಲಿಲ್ಲ. ಬಳಿಕ ಇಂಡಿಯಾ ನಾಯಕರ ಗ್ರೂಪ್ ಫೋಟೊ ಸೆಷನ್ ಕಾರ್ಯಕ್ರಮದಲ್ಲೂ ಕಪಿಲ್ ಹಾಜರಾಗಿದ್ದು ಕಂಡು ಬಂದಿದೆ.
2022ರ ಮೇನಲ್ಲಿ ಕಪಿಲ್ ಸಿಬಲ್ ಅವರು ಕಾಂಗ್ರೆಸ್ಗೆ ರಾಜೀನಾಮೆ ನೀಡಿದರು. ನಂತರ ಸಮಾಜವಾದಿ ಪಕ್ಷದ ಬಾಹ್ಯ ಬೆಂಬಲದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ. ಇಂಡಿಯಾ ಮೈತ್ರಿಕೂಟ ಬಲಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕಪಿಲ್ ಸಿಬಲ್ ಅವರ ಈ ನಡೆ ಕುತೂಹಲ ಮೂಡಿಸಿದೆ ಎಂದು ಚರ್ಚೆಯಾಗುತ್ತಿದೆ.
ಪಟ್ನಾ, ಬೆಂಗಳೂರು ನಂತರ ಮುಂಬೈನಲ್ಲಿ ಸಭೆ ಸೇರಿದ ಇಂಡಿಯಾ ಒಕ್ಕೂಟದ ನಾಯಕರು ಒಗ್ಗಟ್ಟು ಪ್ರದರ್ಶಿಸಿದ್ದಾರೆ.
ಕಪಿಲ್ ಸಿಬಲ್ ಅವರು, ಶಿವಸೇನಾ ಬಣಗಳ ಕಿತ್ತಾಟದ ಪ್ರಕರಣದ ಬಗ್ಗೆ ಉದ್ಧವ್ ಠಾಕ್ರೆ ಪರವಾಗಿ ಸುಪ್ರಿಂಕೋರ್ಟ್ನಲ್ಲಿ ವಾದಿಸುತ್ತಿದ್ದಾರೆ.