<p><strong>ಮುಂಬೈ: </strong>ಬಾಲಿವುಡ್ ನಟ ಹಾಗೂ ತಮ್ಮ ಪತಿ ಸೈಫ್ ಅಲಿ ಖಾನ್ ಅವರ ಮೇಲೆ ನಡೆದಿರುವ ದಾಳಿ ಕುರಿತು ನಟಿ ಕರೀನಾ ಕಪೂರ್ ಪ್ರತಿಕ್ರಿಯಿಸಿದ್ದಾರೆ. ತಮ್ಮ ಖಾಸಗೀತನವನ್ನು ಗೌರವಿಸುವಂತೆ ಮನವಿ ಮಾಡಿದ್ದಾರೆ.</p><p>ಮುಂಬೈನ ಬಾಂದ್ರಾದಲ್ಲಿರುವ ದಂಪತಿಯ ಮನೆಯಲ್ಲಿ, ಸೈಫ್ ಅವರ ಗುರುವಾರ ಮುಂಜಾನೆ ಚಾಕುವಿನಿಂದ ದಾಳಿ ಮಾಡಲಾಗಿದೆ.</p><p>ಇದು ತಮ್ಮ ಪಾಲಿಗೆ ಅತ್ಯಂತ ಸವಾಲಿನ ಸಮಯವಾಗಿದೆ ಎಂದಿರುವ ನಟಿ, ಪ್ರತಿಯೊಬ್ಬರೂ ವದಂತಿಗಳು ಹಾಗೂ ವರದಿಗಳಿಂದ ಅಂತರ ಕಾಯ್ದುಕೊಳ್ಳಿ ಎಂದು ಕೋರಿದ್ದಾರೆ.</p><p>ದುಷ್ಕೃತ್ಯಕ್ಕೆ ಸಂಬಂಧಿಸಿದಂತೆ ಹರಿದಾಡುತ್ತಿರುವ ತರಹೇವಾರಿ ವದಂತಿಗಳು, ವರದಿಗಳ ಬಗ್ಗೆ ಮೌನ ಮುರಿದಿರುವ ಕರೀನಾ, ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. </p>.ಬಾಲಿವುಡ್ ನಟ ಸೈಫ್ ಅಲಿ ಖಾನ್ಗೆ ಚಾಕು ಇರಿದ ದುಷ್ಕರ್ಮಿ: ಆಸ್ಪತ್ರೆಗೆ ದಾಖಲು.ಸೈಫ್ ಅಲಿ ಖಾನ್ ಮೇಲೆ ದಾಳಿ: ದುಷ್ಕರ್ಮಿಯ ಪತ್ತೆಗೆ 20 ತಂಡಗಳ ರಚನೆ –ಪೊಲೀಸ್.<p>'ಇದು, ನಮ್ಮ ಕುಟುಂಬವು ಊಹಿಸಿಕೊಳ್ಳುವುದಕ್ಕೂ ಅಸಾಧ್ಯವೆನಿಸುವಂತಹ ಸವಾಲಿನ ದಿನ. ಪ್ರಕರಣಕ್ಕೆ ಸಂಬಂಧಿಸಿದ ಪ್ರಕ್ರಿಯೆಗಳಲ್ಲಿ ತೊಡಗಿದ್ದೇವೆ. ಈ ಕಷ್ಟದ ಸಮಯವನ್ನು ದಾಟಿ ಮುಂದಕ್ಕೆ ಹೋಗಲು ಪ್ರತ್ನಿಸುತ್ತಿದ್ದು, ಮಾಧ್ಯಮಗಳು, ಛಾಯಾಗ್ರಾಹಕರು ವದಂತಿಗಳಿಂದ ದೂರ ಇರುವಂತೆ ಹಾಗೂ ಅವುಗಳನ್ನು ಪ್ರಸಾರ ಮಾಡದಂತೆ ಗೌರವಪೂರ್ವಕವಾಗಿ ವಿನಂತಿಸುತ್ತೇವೆ' ಎಂದಿದ್ದಾರೆ.</p><p>ಮುಂದುವರಿದು, 'ನಿಮ್ಮ ಕಾಳಜಿ ಹಾಗೂ ಬೆಂಬಲವನ್ನು ಗೌರವಿಸುತ್ತೇವೆ. ನಿರಂತರವಾಗಿ ನಮ್ಮತ್ತಲೇ ಗಮನ ಕೇಂದ್ರೀಕರಿಸುತ್ತಿರುವುದು ನಮ್ಮ ಸುರಕ್ಷತೆಗೂ ಅಪಾಯವನ್ನುಂಟುಮಾಡಲಿದೆ. ದಯವಿಟ್ಟು ನಮ್ಮ ಎಲ್ಲೆಯನ್ನು ಗೌರವಿಸಿ. ಚೇತರಿಸಿಕೊಳ್ಳಲು ಅವಕಾಶ ನೀಡಿ. ಕುಟುಂಬವಾಗಿ ಸಹಕರಿಸಿ ಎಂದು ಮನವಿ ಮಾಡುತ್ತೇನೆ' ಎಂಬುದಾಗಿ ಬರೆದುಕೊಂಡಿದ್ದಾರೆ.</p><p>ಹಾಗೆಯೇ, ಇಂತಹ ಸಂದಿಗ್ಧ ಸನ್ನಿವೇಶದಲ್ಲಿ ಸಹಕಾರ ನೀಡಿದ ಎಲ್ಲರಿಗೂ ಧನ್ಯವಾದ ಹೇಳಿದ್ದಾರೆ.</p><p>ದಾಳಿ ವೇಳೆ ಗಂಭೀರವಾಗಿ ಗಾಯಗೊಂಡಿರುವ ಸೈಫ್ ಅವರನ್ನು ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ನಟನ ಮೇಲೆ ದಾಳಿ ಮಾಡಿದ ದುಷ್ಕರ್ಮಿಯು ಕಳ್ಳತನಕ್ಕೆ ಯತ್ನಿಸಿದ್ದ ಎನ್ನಲಾಗಿದೆ. ಆತನ ಪತ್ತೆಗಾಗಿ ಮುಂಬೈ ಪೊಲೀಸರು 20ಕ್ಕೂ ಅಧಿಕ ತಂಡಗಳನ್ನು ರಚಿಸಿದ್ದಾರೆ.</p>.ಸೈಫ್ ಅಲಿ ಖಾನ್ಗೆ ಆರು ಬಾರಿ ಚಾಕು ಇರಿತ: ಪ್ರಾಣಾಪಾಯದಿಂದ ಪಾರು: ವೈದ್ಯರ ಮಾಹಿತಿ.ಸೆಲೆಬ್ರಿಟಿಗಳೇ ಸುರಕ್ಷಿತರಲ್ಲ, ಸಾಮಾನ್ಯರ ಕಥೆ ಏನು: ಕೇಜ್ರಿವಾಲ್ ಪ್ರಶ್ನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ: </strong>ಬಾಲಿವುಡ್ ನಟ ಹಾಗೂ ತಮ್ಮ ಪತಿ ಸೈಫ್ ಅಲಿ ಖಾನ್ ಅವರ ಮೇಲೆ ನಡೆದಿರುವ ದಾಳಿ ಕುರಿತು ನಟಿ ಕರೀನಾ ಕಪೂರ್ ಪ್ರತಿಕ್ರಿಯಿಸಿದ್ದಾರೆ. ತಮ್ಮ ಖಾಸಗೀತನವನ್ನು ಗೌರವಿಸುವಂತೆ ಮನವಿ ಮಾಡಿದ್ದಾರೆ.</p><p>ಮುಂಬೈನ ಬಾಂದ್ರಾದಲ್ಲಿರುವ ದಂಪತಿಯ ಮನೆಯಲ್ಲಿ, ಸೈಫ್ ಅವರ ಗುರುವಾರ ಮುಂಜಾನೆ ಚಾಕುವಿನಿಂದ ದಾಳಿ ಮಾಡಲಾಗಿದೆ.</p><p>ಇದು ತಮ್ಮ ಪಾಲಿಗೆ ಅತ್ಯಂತ ಸವಾಲಿನ ಸಮಯವಾಗಿದೆ ಎಂದಿರುವ ನಟಿ, ಪ್ರತಿಯೊಬ್ಬರೂ ವದಂತಿಗಳು ಹಾಗೂ ವರದಿಗಳಿಂದ ಅಂತರ ಕಾಯ್ದುಕೊಳ್ಳಿ ಎಂದು ಕೋರಿದ್ದಾರೆ.</p><p>ದುಷ್ಕೃತ್ಯಕ್ಕೆ ಸಂಬಂಧಿಸಿದಂತೆ ಹರಿದಾಡುತ್ತಿರುವ ತರಹೇವಾರಿ ವದಂತಿಗಳು, ವರದಿಗಳ ಬಗ್ಗೆ ಮೌನ ಮುರಿದಿರುವ ಕರೀನಾ, ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. </p>.ಬಾಲಿವುಡ್ ನಟ ಸೈಫ್ ಅಲಿ ಖಾನ್ಗೆ ಚಾಕು ಇರಿದ ದುಷ್ಕರ್ಮಿ: ಆಸ್ಪತ್ರೆಗೆ ದಾಖಲು.ಸೈಫ್ ಅಲಿ ಖಾನ್ ಮೇಲೆ ದಾಳಿ: ದುಷ್ಕರ್ಮಿಯ ಪತ್ತೆಗೆ 20 ತಂಡಗಳ ರಚನೆ –ಪೊಲೀಸ್.<p>'ಇದು, ನಮ್ಮ ಕುಟುಂಬವು ಊಹಿಸಿಕೊಳ್ಳುವುದಕ್ಕೂ ಅಸಾಧ್ಯವೆನಿಸುವಂತಹ ಸವಾಲಿನ ದಿನ. ಪ್ರಕರಣಕ್ಕೆ ಸಂಬಂಧಿಸಿದ ಪ್ರಕ್ರಿಯೆಗಳಲ್ಲಿ ತೊಡಗಿದ್ದೇವೆ. ಈ ಕಷ್ಟದ ಸಮಯವನ್ನು ದಾಟಿ ಮುಂದಕ್ಕೆ ಹೋಗಲು ಪ್ರತ್ನಿಸುತ್ತಿದ್ದು, ಮಾಧ್ಯಮಗಳು, ಛಾಯಾಗ್ರಾಹಕರು ವದಂತಿಗಳಿಂದ ದೂರ ಇರುವಂತೆ ಹಾಗೂ ಅವುಗಳನ್ನು ಪ್ರಸಾರ ಮಾಡದಂತೆ ಗೌರವಪೂರ್ವಕವಾಗಿ ವಿನಂತಿಸುತ್ತೇವೆ' ಎಂದಿದ್ದಾರೆ.</p><p>ಮುಂದುವರಿದು, 'ನಿಮ್ಮ ಕಾಳಜಿ ಹಾಗೂ ಬೆಂಬಲವನ್ನು ಗೌರವಿಸುತ್ತೇವೆ. ನಿರಂತರವಾಗಿ ನಮ್ಮತ್ತಲೇ ಗಮನ ಕೇಂದ್ರೀಕರಿಸುತ್ತಿರುವುದು ನಮ್ಮ ಸುರಕ್ಷತೆಗೂ ಅಪಾಯವನ್ನುಂಟುಮಾಡಲಿದೆ. ದಯವಿಟ್ಟು ನಮ್ಮ ಎಲ್ಲೆಯನ್ನು ಗೌರವಿಸಿ. ಚೇತರಿಸಿಕೊಳ್ಳಲು ಅವಕಾಶ ನೀಡಿ. ಕುಟುಂಬವಾಗಿ ಸಹಕರಿಸಿ ಎಂದು ಮನವಿ ಮಾಡುತ್ತೇನೆ' ಎಂಬುದಾಗಿ ಬರೆದುಕೊಂಡಿದ್ದಾರೆ.</p><p>ಹಾಗೆಯೇ, ಇಂತಹ ಸಂದಿಗ್ಧ ಸನ್ನಿವೇಶದಲ್ಲಿ ಸಹಕಾರ ನೀಡಿದ ಎಲ್ಲರಿಗೂ ಧನ್ಯವಾದ ಹೇಳಿದ್ದಾರೆ.</p><p>ದಾಳಿ ವೇಳೆ ಗಂಭೀರವಾಗಿ ಗಾಯಗೊಂಡಿರುವ ಸೈಫ್ ಅವರನ್ನು ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ನಟನ ಮೇಲೆ ದಾಳಿ ಮಾಡಿದ ದುಷ್ಕರ್ಮಿಯು ಕಳ್ಳತನಕ್ಕೆ ಯತ್ನಿಸಿದ್ದ ಎನ್ನಲಾಗಿದೆ. ಆತನ ಪತ್ತೆಗಾಗಿ ಮುಂಬೈ ಪೊಲೀಸರು 20ಕ್ಕೂ ಅಧಿಕ ತಂಡಗಳನ್ನು ರಚಿಸಿದ್ದಾರೆ.</p>.ಸೈಫ್ ಅಲಿ ಖಾನ್ಗೆ ಆರು ಬಾರಿ ಚಾಕು ಇರಿತ: ಪ್ರಾಣಾಪಾಯದಿಂದ ಪಾರು: ವೈದ್ಯರ ಮಾಹಿತಿ.ಸೆಲೆಬ್ರಿಟಿಗಳೇ ಸುರಕ್ಷಿತರಲ್ಲ, ಸಾಮಾನ್ಯರ ಕಥೆ ಏನು: ಕೇಜ್ರಿವಾಲ್ ಪ್ರಶ್ನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>