<p><strong>ಚಂಡಿಗಡ: </strong>ಕರ್ನಾ ಲ್ನಲ್ಲಿ ಆಗಸ್ಟ್ 28ರಂದು ರೈತರು ಮತ್ತು ಪೊಲೀಸರು ನಡುವೆ ನಡೆದ ಸಂಘರ್ಷದ ತನಿಖೆಗೆ ರಾಜ್ಯ ಸರ್ಕಾರ ಶನಿವಾರ ಆದೇಶಿಸಿದ್ದು, ಈ ಹಿನ್ನೆಲೆಯಲ್ಲಿ ಕರ್ನಾಲ್ ಜಿಲ್ಲಾಕೇಂದ್ರದ ಹೊರಗೆ ನಡೆಸುತ್ತಿದ್ದ ಪ್ರತಿಭಟನೆಯನ್ನು ರೈತರು ಅಂತ್ಯಗೊಳಿಸಿದ್ದಾರೆ.</p>.<p>‘ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಈ ಪ್ರಕರಣದ ತನಿಖೆ ನಡೆಯಲಿದೆ. ಒಂದು ತಿಂಗಳೊಳಗೆ ತನಿಖೆ ಪೂರ್ಣ ಗೊಳ್ಳಲಿದೆ. ಈ ಸಮಯದಲ್ಲಿ ಮಾಜಿ ಸಿಡಿಎಂ ಆಯುಷ್ ಸಿನ್ಹಾ ರಜೆಯಲ್ಲಿರುತ್ತಾರೆ‘ ಎಂದು ಹರಿಯಾಣದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ದೇವೇಂದರ್ ಸಿಂಗ್ ಅವರು ಸುದ್ದಿಗಾರರಿಗೆ ತಿಳಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿದ್ದ ರೈತ ನಾಯಕ ಗುರ್ನಾಮ್ ಸಿಂಗ್ ಚದೌನಿ ಅವರು, ‘ಜಿಲ್ಲಾ ಕೇಂದ್ರದ ಹೊರಗೆ ನಡೆಸುತ್ತಿದ್ದ ಪ್ರತಿಭಟನೆಯನ್ನು ಅಂತ್ಯಗೊಳಿಸಿದ್ದೇವೆ‘ ಎಂದು ಸುದ್ದಿಗಾರರಿಗೆ ತಿಳಿಸಿದರು.</p>.<p>ಈ ವೇಳೆ ಪ್ರತಿಭಟನಾ ನಿರತರು, ‘ಪೊಲೀಸರು ಲಾಠಿಚಾರ್ಜ್ ಮಾಡಿದಾಗ ಇಬ್ಬರು ರೈತರು ಮೃತಪಟ್ಟಿದ್ದಾರೆ‘ ಎಂದು ದೂರಿದರು. ಇದಕ್ಕೆ ಪ್ರತಿಕ್ರಿಯಿಸಿದ ದೇವೇಂದ್ರ ಸಿಂಗ್, ‘ಮೃತ ರೈತರ ಕುಟುಂಬದ ಸದಸ್ಯರಿಗೆ ಉದ್ಯೋಗ ಕೊಡಿಸುವುದಾಗಿ ಭರವಸೆ ನೀಡಿದರು.</p>.<p>ಆಗಸ್ಟ್ 28ರಂದು ಬಿಜೆಪಿ ಕಾರ್ಯಕ್ರಮದ ಸ್ಥಳಕ್ಕೆ ರೈತರ ಮೆರವಣಿಗೆ ತೆರಳದಂತೆ ತಡೆಯಲು ಪೊಲೀಸರು ರೈತರ ಮಲೆ ಲಾಠಿ ಪ್ರಹಾರ ನಡೆಸಿದ್ದರು. ಈ ವೇಳೆ 10 ಪ್ರತಿಭಟನಕಾರರು ಗಾಯಗೊಂಡಿದ್ದರು. ಈ ಸಂದರ್ಭದಲ್ಲಿ ‘ಗಡಿ ದಾಟಿದರೆ ರೈತರ ತಲೆ ಒಡೆಯುವಂತೆ‘ ಐಎಎಸ್ ಅಧಿಕಾರಿ ಆಯುಷ್ ಸಿನ್ಹಾ ಹೇಳಿದ್ದರು. ಈ ವಿವಾದಾತ್ಮಕ ಹೇಳಿಕೆ ನೀಡಿದ್ದ ಐಎಎಸ್ ಅಧಿಕಾರಿ ಆಯುಷ್ ಸಿನ್ಹಾ ಅವರನ್ನು ಅಮಾನತುಗೊಳಿಸುವಂತೆ ಪ್ರತಿಭಟನಾ ನಿರತ ರೈತರು ಒತ್ತಾಯಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡಿಗಡ: </strong>ಕರ್ನಾ ಲ್ನಲ್ಲಿ ಆಗಸ್ಟ್ 28ರಂದು ರೈತರು ಮತ್ತು ಪೊಲೀಸರು ನಡುವೆ ನಡೆದ ಸಂಘರ್ಷದ ತನಿಖೆಗೆ ರಾಜ್ಯ ಸರ್ಕಾರ ಶನಿವಾರ ಆದೇಶಿಸಿದ್ದು, ಈ ಹಿನ್ನೆಲೆಯಲ್ಲಿ ಕರ್ನಾಲ್ ಜಿಲ್ಲಾಕೇಂದ್ರದ ಹೊರಗೆ ನಡೆಸುತ್ತಿದ್ದ ಪ್ರತಿಭಟನೆಯನ್ನು ರೈತರು ಅಂತ್ಯಗೊಳಿಸಿದ್ದಾರೆ.</p>.<p>‘ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಈ ಪ್ರಕರಣದ ತನಿಖೆ ನಡೆಯಲಿದೆ. ಒಂದು ತಿಂಗಳೊಳಗೆ ತನಿಖೆ ಪೂರ್ಣ ಗೊಳ್ಳಲಿದೆ. ಈ ಸಮಯದಲ್ಲಿ ಮಾಜಿ ಸಿಡಿಎಂ ಆಯುಷ್ ಸಿನ್ಹಾ ರಜೆಯಲ್ಲಿರುತ್ತಾರೆ‘ ಎಂದು ಹರಿಯಾಣದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ದೇವೇಂದರ್ ಸಿಂಗ್ ಅವರು ಸುದ್ದಿಗಾರರಿಗೆ ತಿಳಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿದ್ದ ರೈತ ನಾಯಕ ಗುರ್ನಾಮ್ ಸಿಂಗ್ ಚದೌನಿ ಅವರು, ‘ಜಿಲ್ಲಾ ಕೇಂದ್ರದ ಹೊರಗೆ ನಡೆಸುತ್ತಿದ್ದ ಪ್ರತಿಭಟನೆಯನ್ನು ಅಂತ್ಯಗೊಳಿಸಿದ್ದೇವೆ‘ ಎಂದು ಸುದ್ದಿಗಾರರಿಗೆ ತಿಳಿಸಿದರು.</p>.<p>ಈ ವೇಳೆ ಪ್ರತಿಭಟನಾ ನಿರತರು, ‘ಪೊಲೀಸರು ಲಾಠಿಚಾರ್ಜ್ ಮಾಡಿದಾಗ ಇಬ್ಬರು ರೈತರು ಮೃತಪಟ್ಟಿದ್ದಾರೆ‘ ಎಂದು ದೂರಿದರು. ಇದಕ್ಕೆ ಪ್ರತಿಕ್ರಿಯಿಸಿದ ದೇವೇಂದ್ರ ಸಿಂಗ್, ‘ಮೃತ ರೈತರ ಕುಟುಂಬದ ಸದಸ್ಯರಿಗೆ ಉದ್ಯೋಗ ಕೊಡಿಸುವುದಾಗಿ ಭರವಸೆ ನೀಡಿದರು.</p>.<p>ಆಗಸ್ಟ್ 28ರಂದು ಬಿಜೆಪಿ ಕಾರ್ಯಕ್ರಮದ ಸ್ಥಳಕ್ಕೆ ರೈತರ ಮೆರವಣಿಗೆ ತೆರಳದಂತೆ ತಡೆಯಲು ಪೊಲೀಸರು ರೈತರ ಮಲೆ ಲಾಠಿ ಪ್ರಹಾರ ನಡೆಸಿದ್ದರು. ಈ ವೇಳೆ 10 ಪ್ರತಿಭಟನಕಾರರು ಗಾಯಗೊಂಡಿದ್ದರು. ಈ ಸಂದರ್ಭದಲ್ಲಿ ‘ಗಡಿ ದಾಟಿದರೆ ರೈತರ ತಲೆ ಒಡೆಯುವಂತೆ‘ ಐಎಎಸ್ ಅಧಿಕಾರಿ ಆಯುಷ್ ಸಿನ್ಹಾ ಹೇಳಿದ್ದರು. ಈ ವಿವಾದಾತ್ಮಕ ಹೇಳಿಕೆ ನೀಡಿದ್ದ ಐಎಎಸ್ ಅಧಿಕಾರಿ ಆಯುಷ್ ಸಿನ್ಹಾ ಅವರನ್ನು ಅಮಾನತುಗೊಳಿಸುವಂತೆ ಪ್ರತಿಭಟನಾ ನಿರತ ರೈತರು ಒತ್ತಾಯಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>