<p><strong>ತಿರುವನಂತಪುರ</strong>: ವೈದ್ಯಕೀಯ ಪ್ರಮಾಣ ಪತ್ರವನ್ನು ಹಾಜರುಪಡಿಸಿಆಂಬುಲೆನ್ಸ್ ಮೂಲಕ ರೋಗಿಗಳನ್ನು ಗಡಿ ಮೂಲಕ ಕೇರಳದಿಂದ ಕರ್ನಾಟಕದ ಆಸ್ಪತ್ರೆಗೆ ದಾಖಲಿಸಲು ಕರ್ನಾಟಕ ಒಪ್ಪಿಗೆ ನೀಡಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ. </p>.<p>‘ಕೊರೊನಾ ಸೋಂಕು ಇಲ್ಲದೇ ಇರುವ ರೋಗಿಗಳನ್ನಷ್ಟೇ ಕರ್ನಾಟಕದ ಒಳಗೆ ಬಿಡಲಾಗುವುದು. ಕರ್ನಾಟಕದ ವೈದ್ಯರ ತಂಡವು ಗಡಿಯಾದ ತಲಪಾಡಿ ಚೆಕ್ಪೋಸ್ಟ್ನಲ್ಲಿ ರೋಗಿಗಳ ತಪಾಸಣೆ ನಡೆಸಲಿದೆ. ಕಾಸರಗೋಡಿನ ತಲಪಾಡಿ ಮೂಲಕ ರೋಗಿಗಳನ್ನು ಮಂಗಳೂರಿಗೆ ಸಾಗಿಸಲು ಆಂಬ್ಯುಲೆನ್ಸ್ಗಳಿಗೆ ಅವಕಾಶ ನೀಡಲಾಗಿದೆ’ ಎಂದರು. </p>.<p>ಗಡಿ ತೆರೆಯಬೇಕು ಎಂಬ ವಿಚಾರದಲ್ಲಿ ಕರ್ನಾಟಕ ಮತ್ತು ಕೇರಳದ ನಡುವೆ ಪತ್ರ ವ್ಯವಹಾರಗಳು, ರಾಜೀ ಸಂಧಾನಗಳು, ನ್ಯಾಯಾಂಗ ಹೋರಾಟಗಳೂ ನಡೆದಿದ್ದವು. ಇದ್ಯಾವುದಕ್ಕೂ ಸೊಪ್ಪು ಹಾಕದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಗಡಿ ತೆರೆಯುವ ಪ್ರಶ್ನೆಯೇ ಇಲ್ಲ ಎಂದಿದ್ದರು.</p>.<p>ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರೂ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆಪತ್ರ ಬರೆದು ಗಡಿ ತೆರೆಯಲು ಮನವಿ ಮಾಡಿದ್ದರು. ಅಲ್ಲದೆ, ಪ್ರಧಾನಿ ಮಧ್ಯಪ್ರವೇಶ ಬಯಸಿದ್ದರು. ಯಡಿಯೂರಪ್ಪ ಅವರು ಇದಕ್ಕೂ ಬಗ್ಗಿರಲಿಲ್ಲ.</p>.<p>ಸದ್ಯ ಕೋವಿಡ್ 19 ಸೋಂಕಿತರಲ್ಲದ ರೋಗಿಗಳಿಗೆ ಮಾತ್ರ ಚಿಕಿತ್ಸೆಗಾಗಿ ಮಂಗಳೂರಿಗೆ ತೆರಳಲು ಗಡಿ ತೆರಯಲು ಕರ್ನಾಟಕ ಸರ್ಕಾರ ಒಪ್ಪಿರುವುದಾಗಿ ಕೇರಳ ಸಿಎಂ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ</strong>: ವೈದ್ಯಕೀಯ ಪ್ರಮಾಣ ಪತ್ರವನ್ನು ಹಾಜರುಪಡಿಸಿಆಂಬುಲೆನ್ಸ್ ಮೂಲಕ ರೋಗಿಗಳನ್ನು ಗಡಿ ಮೂಲಕ ಕೇರಳದಿಂದ ಕರ್ನಾಟಕದ ಆಸ್ಪತ್ರೆಗೆ ದಾಖಲಿಸಲು ಕರ್ನಾಟಕ ಒಪ್ಪಿಗೆ ನೀಡಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ. </p>.<p>‘ಕೊರೊನಾ ಸೋಂಕು ಇಲ್ಲದೇ ಇರುವ ರೋಗಿಗಳನ್ನಷ್ಟೇ ಕರ್ನಾಟಕದ ಒಳಗೆ ಬಿಡಲಾಗುವುದು. ಕರ್ನಾಟಕದ ವೈದ್ಯರ ತಂಡವು ಗಡಿಯಾದ ತಲಪಾಡಿ ಚೆಕ್ಪೋಸ್ಟ್ನಲ್ಲಿ ರೋಗಿಗಳ ತಪಾಸಣೆ ನಡೆಸಲಿದೆ. ಕಾಸರಗೋಡಿನ ತಲಪಾಡಿ ಮೂಲಕ ರೋಗಿಗಳನ್ನು ಮಂಗಳೂರಿಗೆ ಸಾಗಿಸಲು ಆಂಬ್ಯುಲೆನ್ಸ್ಗಳಿಗೆ ಅವಕಾಶ ನೀಡಲಾಗಿದೆ’ ಎಂದರು. </p>.<p>ಗಡಿ ತೆರೆಯಬೇಕು ಎಂಬ ವಿಚಾರದಲ್ಲಿ ಕರ್ನಾಟಕ ಮತ್ತು ಕೇರಳದ ನಡುವೆ ಪತ್ರ ವ್ಯವಹಾರಗಳು, ರಾಜೀ ಸಂಧಾನಗಳು, ನ್ಯಾಯಾಂಗ ಹೋರಾಟಗಳೂ ನಡೆದಿದ್ದವು. ಇದ್ಯಾವುದಕ್ಕೂ ಸೊಪ್ಪು ಹಾಕದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಗಡಿ ತೆರೆಯುವ ಪ್ರಶ್ನೆಯೇ ಇಲ್ಲ ಎಂದಿದ್ದರು.</p>.<p>ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರೂ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆಪತ್ರ ಬರೆದು ಗಡಿ ತೆರೆಯಲು ಮನವಿ ಮಾಡಿದ್ದರು. ಅಲ್ಲದೆ, ಪ್ರಧಾನಿ ಮಧ್ಯಪ್ರವೇಶ ಬಯಸಿದ್ದರು. ಯಡಿಯೂರಪ್ಪ ಅವರು ಇದಕ್ಕೂ ಬಗ್ಗಿರಲಿಲ್ಲ.</p>.<p>ಸದ್ಯ ಕೋವಿಡ್ 19 ಸೋಂಕಿತರಲ್ಲದ ರೋಗಿಗಳಿಗೆ ಮಾತ್ರ ಚಿಕಿತ್ಸೆಗಾಗಿ ಮಂಗಳೂರಿಗೆ ತೆರಳಲು ಗಡಿ ತೆರಯಲು ಕರ್ನಾಟಕ ಸರ್ಕಾರ ಒಪ್ಪಿರುವುದಾಗಿ ಕೇರಳ ಸಿಎಂ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>