<p><strong>ನವದೆಹಲಿ:</strong>‘ಬಳ್ಳಾರಿ ಸಮೀಪದ ಮೀಸಲು ಅರಣ್ಯ ಪ್ರದೇಶಕ್ಕೆ ಅಂಟಿಕೊಂಡಿರುವ ಕರ್ನಾಟಕ ಮತ್ತು ಆಂಧ್ರಪ್ರದೇಶದ ಗಡಿರೇಖೆ ಗುರುತಿಸುವ ಸಮೀಕ್ಷಾ ಕಾರ್ಯ ಪೂರ್ಣಗೊಂಡಿದ್ದು, ಗಡಿ ವಿವಾದ ಬಗೆಹರಿದಿದೆ’ ಎಂದುಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.</p>.<p>ಬಿಜೆಪಿಯ ಕೆ.ಸಿ.ರಾಮಮೂರ್ತಿ ಅವರ ಪ್ರಶ್ನೆಗೆ ಲಿಖಿತ ಉತ್ತರದ ಮೂಲಕ ರಾಜ್ಯಸಭೆಗೆ ಈ ವಿಷಯ ತಿಳಿಸಿರುವ ಕೇಂದ್ರದ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಾದ್ ರಾಯ್, ಓಬಳಾಪುರಂ ಗ್ರಾಮದ ಹತ್ತಿರ ಈ ಸಮೀಕ್ಷಾ ಕಾರ್ಯ ಪೂರ್ಣಗೊಳಿಸಲಾಗಿದೆ. ಉಭಯ ರಾಜ್ಯಗಳು ಪೂರ್ಣ ಸಮ್ಮತಿ ಸೂಚಿಸಿವೆ ಎಂದು ವಿವರಿಸಿದ್ದಾರೆ.</p>.<p>ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ಬಳ್ಳಾರಿ ಮೀಸಲು ಅರಣ್ಯ ಪ್ರದೇಶದ ಬಳಿ ಉಭಯ ರಾಜ್ಯಗಳ ಗಡಿಯನ್ನು ಗುರುತಿಸಲು ಭಾರತೀಯ ಸರ್ವೇಯರ್ ಜನರಲ್ ಅವರು ಸಮೀಕ್ಷೆ ನಡೆಸಿ ಸಲ್ಲಿಸಿದ್ದ ವರದಿಯನ್ನು ಕೇಂದ್ರ ಸರ್ಕಾರ ಅನುಷ್ಠಾನಕ್ಕೆ ತಂದಿದೆ ಎಂದು ಸಚಿವರು ಹೇಳಿದ್ದಾರೆ.</p>.<p>ಸುದೀರ್ಘ ಚರ್ಚೆ ನಡೆಸಿ ಉಭಯ ರಾಜ್ಯಗಳ ಒಪ್ಪಿಗೆ ಪಡೆದು, ಔಪಚಾರಿಕವಾಗಿ ಗಡಿ ರೇಖೆಯನ್ನು ಗುರುತಿಸುವಂತೆ ಭಾರತೀಯ ಸರ್ವೇಯರ್ ಜನರಲ್ ಅವರನ್ನು ಕೋರಲಾಗಿತ್ತು ಎಂದು ಅವರು ತಿಳಿಸಿದ್ದಾರೆ.</p>.<p>ಸಮೀಕ್ಷೆಯಲ್ಲಿ ಸರ್ವೇ ಆಫ್ ಇಂಡಿಯಾದ ಅಧಿಕಾರಿಗಳು ಹಾಗೂ ಉಭಯ ರಾಜ್ಯ ಸರ್ಕಾರಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು. ಅಂತರರಾಜ್ಯ ಗಡಿರೇಖೆ ಗುರುತಿಸುವ ಒಟ್ಟು 76 ಗಡಿ ಕಂಬಗಳನ್ನು ಅಳವಡಿಸಲಾಗಿದೆ. ಈ ಜಂಟಿ ಕಾರ್ಯದ ದಾಖಲೆಗಳಿಗೆ ಉಭಯ ರಾಜ್ಯ ಸರ್ಕಾರಗಳ ಅಧಿಕಾರಿಗಳ ಸಹಿಯನ್ನು ಪಡೆಯಲಾಗಿದೆ ಎಂದು ಅವರು ಹೇಳಿದ್ದಾರೆ.</p>.<p>ಈ ಅಂತರರಾಜ್ಯ ಗಡಿ ಪ್ರದೇಶಕ್ಕೆ ಅಂಟಿಕೊಂಡಿರುವ ಗಣಿಗಳಲ್ಲಿ ಅತ್ಯುತ್ಕೃಷ್ಟ ಕಬ್ಬಿಣದ ಅದಿರು ಲಭ್ಯ ಇರುವುದರಿಂದ ಗಡಿ ವಿವಾದ ಉಂಟಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong>‘ಬಳ್ಳಾರಿ ಸಮೀಪದ ಮೀಸಲು ಅರಣ್ಯ ಪ್ರದೇಶಕ್ಕೆ ಅಂಟಿಕೊಂಡಿರುವ ಕರ್ನಾಟಕ ಮತ್ತು ಆಂಧ್ರಪ್ರದೇಶದ ಗಡಿರೇಖೆ ಗುರುತಿಸುವ ಸಮೀಕ್ಷಾ ಕಾರ್ಯ ಪೂರ್ಣಗೊಂಡಿದ್ದು, ಗಡಿ ವಿವಾದ ಬಗೆಹರಿದಿದೆ’ ಎಂದುಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.</p>.<p>ಬಿಜೆಪಿಯ ಕೆ.ಸಿ.ರಾಮಮೂರ್ತಿ ಅವರ ಪ್ರಶ್ನೆಗೆ ಲಿಖಿತ ಉತ್ತರದ ಮೂಲಕ ರಾಜ್ಯಸಭೆಗೆ ಈ ವಿಷಯ ತಿಳಿಸಿರುವ ಕೇಂದ್ರದ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಾದ್ ರಾಯ್, ಓಬಳಾಪುರಂ ಗ್ರಾಮದ ಹತ್ತಿರ ಈ ಸಮೀಕ್ಷಾ ಕಾರ್ಯ ಪೂರ್ಣಗೊಳಿಸಲಾಗಿದೆ. ಉಭಯ ರಾಜ್ಯಗಳು ಪೂರ್ಣ ಸಮ್ಮತಿ ಸೂಚಿಸಿವೆ ಎಂದು ವಿವರಿಸಿದ್ದಾರೆ.</p>.<p>ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ಬಳ್ಳಾರಿ ಮೀಸಲು ಅರಣ್ಯ ಪ್ರದೇಶದ ಬಳಿ ಉಭಯ ರಾಜ್ಯಗಳ ಗಡಿಯನ್ನು ಗುರುತಿಸಲು ಭಾರತೀಯ ಸರ್ವೇಯರ್ ಜನರಲ್ ಅವರು ಸಮೀಕ್ಷೆ ನಡೆಸಿ ಸಲ್ಲಿಸಿದ್ದ ವರದಿಯನ್ನು ಕೇಂದ್ರ ಸರ್ಕಾರ ಅನುಷ್ಠಾನಕ್ಕೆ ತಂದಿದೆ ಎಂದು ಸಚಿವರು ಹೇಳಿದ್ದಾರೆ.</p>.<p>ಸುದೀರ್ಘ ಚರ್ಚೆ ನಡೆಸಿ ಉಭಯ ರಾಜ್ಯಗಳ ಒಪ್ಪಿಗೆ ಪಡೆದು, ಔಪಚಾರಿಕವಾಗಿ ಗಡಿ ರೇಖೆಯನ್ನು ಗುರುತಿಸುವಂತೆ ಭಾರತೀಯ ಸರ್ವೇಯರ್ ಜನರಲ್ ಅವರನ್ನು ಕೋರಲಾಗಿತ್ತು ಎಂದು ಅವರು ತಿಳಿಸಿದ್ದಾರೆ.</p>.<p>ಸಮೀಕ್ಷೆಯಲ್ಲಿ ಸರ್ವೇ ಆಫ್ ಇಂಡಿಯಾದ ಅಧಿಕಾರಿಗಳು ಹಾಗೂ ಉಭಯ ರಾಜ್ಯ ಸರ್ಕಾರಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು. ಅಂತರರಾಜ್ಯ ಗಡಿರೇಖೆ ಗುರುತಿಸುವ ಒಟ್ಟು 76 ಗಡಿ ಕಂಬಗಳನ್ನು ಅಳವಡಿಸಲಾಗಿದೆ. ಈ ಜಂಟಿ ಕಾರ್ಯದ ದಾಖಲೆಗಳಿಗೆ ಉಭಯ ರಾಜ್ಯ ಸರ್ಕಾರಗಳ ಅಧಿಕಾರಿಗಳ ಸಹಿಯನ್ನು ಪಡೆಯಲಾಗಿದೆ ಎಂದು ಅವರು ಹೇಳಿದ್ದಾರೆ.</p>.<p>ಈ ಅಂತರರಾಜ್ಯ ಗಡಿ ಪ್ರದೇಶಕ್ಕೆ ಅಂಟಿಕೊಂಡಿರುವ ಗಣಿಗಳಲ್ಲಿ ಅತ್ಯುತ್ಕೃಷ್ಟ ಕಬ್ಬಿಣದ ಅದಿರು ಲಭ್ಯ ಇರುವುದರಿಂದ ಗಡಿ ವಿವಾದ ಉಂಟಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>